ಪ್ರತಿಯೊಬ್ಬ ವಿದ್ಯಾರ್ಥಿ ಕಾನೂನಿನ ಬಗ್ಗೆ ಹೆಚ್ಚು ಗಮನ ಹರಿಸಿ, ಕಡ್ಡಾಯವಾಗಿ ಕಾನೂನು ಪಾಲನೆಗೆ ಮುಂದಾಗಬೇಕು ಎಂದು ದೊಡ್ಡಬೆಳವಂಗಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ಅವರು ತಿಳಿಸಿದರು.
ಯಲಹಂಕ ಜಿಕೆವಿಕೆ ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಬಿಟೆಕ್ ಕೃಷಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ವಾರ್ಷಿಕ ಎನ್ಎಸ್ಎಸ್ ವಿಶೇಷ ಶಿಬಿರದಲ್ಲಿ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಹಾಗೂ ಸಂಚಾರಿ ನಿಯಮಗಳ ತರಬೇತಿ ನೀಡಿದರು.
ನಂತರ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದ ಅವರು, ಜೀವ ಸುರಕ್ಷತೆ ದೃಷ್ಟಿಯಿಂದ ಜಾರಿಗೆ ತಂದಿರುವ ಸಂಚಾರಿ ನಿಯಮಗಳನ್ನು ಎಲ್ಲರೂ ಚಾಚೂ ತಪ್ಪದೇ ಪಾಲಿಸಬೇಕು. ವಾಹನ ಚಾಲನೆ ಮಾಡುವಾಗ ತಪ್ಪದೆ ಹೆಲ್ಮೆಟ್ ಧರಿಸಬೇಕು. ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ ಮಾಡಬಾರದು. ದ್ವಿಚಕ್ರ ವಾಹನದಲ್ಲಿ ತ್ರೀಬಲ್ ರೈಡಿಂಗ್, ಮದ್ಯಪಾನ ಮಾಡಿ ಚಾಲನೆ, ಸೀಟ್ ಬೆಲ್ಟ್ ಧರಿಸದಿರುವುದು, ಸೈಡ್ ಮಿರರ್ ಇಲ್ಲದ ವಾಹನ, ತುರ್ತು ವಾಹನಗಳಿಗೆ ದಾರಿ ಬಿಡದಿರುವುದು, ಅಜಾಗರೂಕತೆ ವಾಹನ ಚಾಲನೆ, ಮುಖ್ಯವಾಗಿ ಅಪ್ರಾಪ್ತರ ವಾಹನ ಚಾಲನೆ ಕಡ್ಡಾಯ ನಿಷೇಧ ಎಂದು ತಿಳಿಸಿದರು.
ಈ ವೇಳೆ ಉಪನ್ಯಾಸಕರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…