ವಿದ್ಯಾರ್ಥಿಗಳಿಗೆ ಕಾನೂನು ಅರಿವು ಹಾಗೂ ಸಂಚಾರಿ ನಿಯಮಗಳ ಬಗ್ಗೆ ಪಾಠ ಮಾಡಿದ ಇನ್ಸ್ ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್

ಪ್ರತಿಯೊಬ್ಬ ವಿದ್ಯಾರ್ಥಿ ಕಾನೂನಿನ ಬಗ್ಗೆ ಹೆಚ್ಚು ಗಮನ ಹರಿಸಿ, ಕಡ್ಡಾಯವಾಗಿ ಕಾನೂನು ಪಾಲನೆಗೆ ಮುಂದಾಗಬೇಕು ಎಂದು ದೊಡ್ಡಬೆಳವಂಗಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ಅವರು ತಿಳಿಸಿದರು.

ಯಲಹಂಕ ಜಿಕೆವಿಕೆ ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಬಿಟೆಕ್ ಕೃಷಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ವಾರ್ಷಿಕ ಎನ್ಎಸ್ಎಸ್ ವಿಶೇಷ ಶಿಬಿರದಲ್ಲಿ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಹಾಗೂ ಸಂಚಾರಿ ನಿಯಮಗಳ ತರಬೇತಿ ನೀಡಿದರು.

ಕಾನೂನು ಮತ್ತು ಸುವ್ಯವಸ್ಥೆ, ಲೈಂಗಿಕ ದೌರ್ಜನ್ಯ ತಡೆಯುವುದು, ಬಾಲ್ಯ ವಿವಾಹ ನಿರ್ಮೂಲನೆ, ಕಿರುಕುಳ, ಬಾಲಕಾರ್ಮಿಕತೆಯ ನಿರ್ಮೂಲನೆ, ಅತ್ಯಾಚಾರ, ಕಿಡ್ನ್ಯಾಪ್, ಸರಗಳತನ, ಜೇಬುಗಳ್ಳತನದ ಬಗ್ಗೆ ಎಚ್ಚರಿಕೆ, ಸೈಬರ್ ಅಪರಾಧಗಳ ಬಗ್ಗೆ ಮುನ್ನೆಚ್ಚರಿಕೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

ನಂತರ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದ ಅವರು, ಜೀವ ಸುರಕ್ಷತೆ ದೃಷ್ಟಿಯಿಂದ ಜಾರಿಗೆ ತಂದಿರುವ ಸಂಚಾರಿ ನಿಯಮಗಳನ್ನು ಎಲ್ಲರೂ ಚಾಚೂ ತಪ್ಪದೇ ಪಾಲಿಸಬೇಕು. ವಾಹನ ಚಾಲನೆ ಮಾಡುವಾಗ ತಪ್ಪದೆ ಹೆಲ್ಮೆಟ್‌ ಧರಿಸಬೇಕು. ವಾಹನ ಚಾಲನೆ ವೇಳೆ ಮೊಬೈಲ್‌ ಬಳಕೆ ಮಾಡಬಾರದು. ದ್ವಿಚಕ್ರ ವಾಹನದಲ್ಲಿ ತ್ರೀಬಲ್‌ ರೈಡಿಂಗ್‌, ಮದ್ಯಪಾನ ಮಾಡಿ ಚಾಲನೆ, ಸೀಟ್‌ ಬೆಲ್ಟ್‌ ಧರಿಸದಿರುವುದು, ಸೈಡ್‌ ಮಿರರ್‌ ಇಲ್ಲದ ವಾಹನ, ತುರ್ತು ವಾಹನಗಳಿಗೆ ದಾರಿ ಬಿಡದಿರುವುದು, ಅಜಾಗರೂಕತೆ ವಾಹನ ಚಾಲನೆ, ಮುಖ್ಯವಾಗಿ ಅಪ್ರಾಪ್ತರ ವಾಹನ ಚಾಲನೆ ಕಡ್ಡಾಯ ನಿಷೇಧ ಎಂದು ತಿಳಿಸಿದರು.

ಈ ವೇಳೆ ಉಪನ್ಯಾಸಕರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

9 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

11 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

16 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

17 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

18 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

19 hours ago