ವಿದ್ಯಾರ್ಥಿಗಳಿಗೆ ಕಾನೂನು ಅರಿವು ಹಾಗೂ ಸಂಚಾರಿ ನಿಯಮಗಳ ಬಗ್ಗೆ ಪಾಠ ಮಾಡಿದ ಇನ್ಸ್ ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್

ಪ್ರತಿಯೊಬ್ಬ ವಿದ್ಯಾರ್ಥಿ ಕಾನೂನಿನ ಬಗ್ಗೆ ಹೆಚ್ಚು ಗಮನ ಹರಿಸಿ, ಕಡ್ಡಾಯವಾಗಿ ಕಾನೂನು ಪಾಲನೆಗೆ ಮುಂದಾಗಬೇಕು ಎಂದು ದೊಡ್ಡಬೆಳವಂಗಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ಅವರು ತಿಳಿಸಿದರು.

ಯಲಹಂಕ ಜಿಕೆವಿಕೆ ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಬಿಟೆಕ್ ಕೃಷಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ವಾರ್ಷಿಕ ಎನ್ಎಸ್ಎಸ್ ವಿಶೇಷ ಶಿಬಿರದಲ್ಲಿ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಹಾಗೂ ಸಂಚಾರಿ ನಿಯಮಗಳ ತರಬೇತಿ ನೀಡಿದರು.

ಕಾನೂನು ಮತ್ತು ಸುವ್ಯವಸ್ಥೆ, ಲೈಂಗಿಕ ದೌರ್ಜನ್ಯ ತಡೆಯುವುದು, ಬಾಲ್ಯ ವಿವಾಹ ನಿರ್ಮೂಲನೆ, ಕಿರುಕುಳ, ಬಾಲಕಾರ್ಮಿಕತೆಯ ನಿರ್ಮೂಲನೆ, ಅತ್ಯಾಚಾರ, ಕಿಡ್ನ್ಯಾಪ್, ಸರಗಳತನ, ಜೇಬುಗಳ್ಳತನದ ಬಗ್ಗೆ ಎಚ್ಚರಿಕೆ, ಸೈಬರ್ ಅಪರಾಧಗಳ ಬಗ್ಗೆ ಮುನ್ನೆಚ್ಚರಿಕೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

ನಂತರ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದ ಅವರು, ಜೀವ ಸುರಕ್ಷತೆ ದೃಷ್ಟಿಯಿಂದ ಜಾರಿಗೆ ತಂದಿರುವ ಸಂಚಾರಿ ನಿಯಮಗಳನ್ನು ಎಲ್ಲರೂ ಚಾಚೂ ತಪ್ಪದೇ ಪಾಲಿಸಬೇಕು. ವಾಹನ ಚಾಲನೆ ಮಾಡುವಾಗ ತಪ್ಪದೆ ಹೆಲ್ಮೆಟ್‌ ಧರಿಸಬೇಕು. ವಾಹನ ಚಾಲನೆ ವೇಳೆ ಮೊಬೈಲ್‌ ಬಳಕೆ ಮಾಡಬಾರದು. ದ್ವಿಚಕ್ರ ವಾಹನದಲ್ಲಿ ತ್ರೀಬಲ್‌ ರೈಡಿಂಗ್‌, ಮದ್ಯಪಾನ ಮಾಡಿ ಚಾಲನೆ, ಸೀಟ್‌ ಬೆಲ್ಟ್‌ ಧರಿಸದಿರುವುದು, ಸೈಡ್‌ ಮಿರರ್‌ ಇಲ್ಲದ ವಾಹನ, ತುರ್ತು ವಾಹನಗಳಿಗೆ ದಾರಿ ಬಿಡದಿರುವುದು, ಅಜಾಗರೂಕತೆ ವಾಹನ ಚಾಲನೆ, ಮುಖ್ಯವಾಗಿ ಅಪ್ರಾಪ್ತರ ವಾಹನ ಚಾಲನೆ ಕಡ್ಡಾಯ ನಿಷೇಧ ಎಂದು ತಿಳಿಸಿದರು.

ಈ ವೇಳೆ ಉಪನ್ಯಾಸಕರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

1 hour ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

13 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

13 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

15 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

15 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

22 hours ago