ಪ್ರತಿಯೊಬ್ಬ ವಿದ್ಯಾರ್ಥಿ ಕಾನೂನಿನ ಬಗ್ಗೆ ಹೆಚ್ಚು ಗಮನ ಹರಿಸಿ, ಕಡ್ಡಾಯವಾಗಿ ಕಾನೂನು ಪಾಲನೆಗೆ ಮುಂದಾಗಬೇಕು ಎಂದು ದೊಡ್ಡಬೆಳವಂಗಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ಅವರು ತಿಳಿಸಿದರು.
ಯಲಹಂಕ ಜಿಕೆವಿಕೆ ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಬಿಟೆಕ್ ಕೃಷಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ವಾರ್ಷಿಕ ಎನ್ಎಸ್ಎಸ್ ವಿಶೇಷ ಶಿಬಿರದಲ್ಲಿ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಹಾಗೂ ಸಂಚಾರಿ ನಿಯಮಗಳ ತರಬೇತಿ ನೀಡಿದರು.
ನಂತರ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದ ಅವರು, ಜೀವ ಸುರಕ್ಷತೆ ದೃಷ್ಟಿಯಿಂದ ಜಾರಿಗೆ ತಂದಿರುವ ಸಂಚಾರಿ ನಿಯಮಗಳನ್ನು ಎಲ್ಲರೂ ಚಾಚೂ ತಪ್ಪದೇ ಪಾಲಿಸಬೇಕು. ವಾಹನ ಚಾಲನೆ ಮಾಡುವಾಗ ತಪ್ಪದೆ ಹೆಲ್ಮೆಟ್ ಧರಿಸಬೇಕು. ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ ಮಾಡಬಾರದು. ದ್ವಿಚಕ್ರ ವಾಹನದಲ್ಲಿ ತ್ರೀಬಲ್ ರೈಡಿಂಗ್, ಮದ್ಯಪಾನ ಮಾಡಿ ಚಾಲನೆ, ಸೀಟ್ ಬೆಲ್ಟ್ ಧರಿಸದಿರುವುದು, ಸೈಡ್ ಮಿರರ್ ಇಲ್ಲದ ವಾಹನ, ತುರ್ತು ವಾಹನಗಳಿಗೆ ದಾರಿ ಬಿಡದಿರುವುದು, ಅಜಾಗರೂಕತೆ ವಾಹನ ಚಾಲನೆ, ಮುಖ್ಯವಾಗಿ ಅಪ್ರಾಪ್ತರ ವಾಹನ ಚಾಲನೆ ಕಡ್ಡಾಯ ನಿಷೇಧ ಎಂದು ತಿಳಿಸಿದರು.
ಈ ವೇಳೆ ಉಪನ್ಯಾಸಕರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…