ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಯುವ ಸಂಸತ್‌ ಸ್ಪರ್ಧೆ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿದ್ಯಾರ್ಥಿಗಳಲ್ಲಿ ಶಾಸನ ಸಭೆಯ ಕಲಾಪವನ್ನು ಪರಿಚಯಿಸುವ ನಿಟ್ಟಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಯುವ ಸಂಸತ್‌ ಸ್ಪರ್ಧೆ ನಡೆಸಲಾಯಿತು.

ಜಿಲ್ಲೆಯ ನಾಲ್ಕು ತಾಲೂಕುಗಳ 48 ಪ್ರೌಢಶಾಲಾ ವಿದ್ಯಾರ್ಥಿಗಳು ಯುವ ಸಂಸತ್‌ ಸ್ಪರ್ಧೆಯಲ್ಲಿ ಭಾವಹಿಸಿದ್ದರು. ಯುವ ಸಂಸತ್‌ನಲ್ಲಿ ಸಭಾಧ್ಯಕ್ಷರು, ಆಡಳಿತ ಪಕ್ಷ, ವಿರೋಧ ಪಕ್ಷಗಳಾಗಿ ವಿದ್ಯಾರ್ಥಿಗಳು ಜವಾಬ್ದಾರಿವಹಿಸಿ ಹಲವು ಮಹತ್ವದ ವಿಚಾರಗಳ ಕುರಿತು ಅಣಕು ಕಲಾಪದಲ್ಲಿ ಚರ್ಚೆಯನ್ನು ನಡೆಸಿದ್ದು, ಆಕರ್ಷಣೀಯವಾಗಿತ್ತು.

ಯುವ ಸಂಸತ್‌ನಲ್ಲಿ ವಿದ್ಯಾರ್ಥಿಗಳು ಶೂನ್ಯ ವೇಳೆ, ಚುಕ್ಕೆ ಗುರುತಿನ ಪ್ರಶ್ನೆ, ಚುಕ್ಕೆ ಗುರುತ್ತಿಲ್ಲದ ಪ್ರಶ್ನೆ ಹೀಗೆ ಹತ್ತು ಹಲವು ಶಾಸನ ಸಭೆಯ ನಿಯಮಗಳಂತೆ ಚರ್ಚೆ ನಡೆಸಿದ್ದು ವಿಶೇಷವಾಗಿತ್ತು.

ಜನಪ್ರತಿನಿಧಿ ಸಂಸ್ಥೆಗಳ ಪಾತ್ರದ ಅರಿವು ಮೂಡಿಸುವುದು. ಪ್ರಜಾಪ್ರಭುತ್ವದ ಬುನಾದಿಯನ್ನು ಭದ್ರಪಡಿಸುವ ಹಾಗೂ ಅಭಿಪ್ರಾಯಗಳ ಬಗ್ಗೆ ತಾಳ್ಮೆ ಮತ್ತು ತಮ್ಮ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸುವ ಕೌಶಲ್ಯ ಬೆಳೆಸುವುದು. ವಿದ್ಯಾರ್ಥಿಗಳಲ್ಲಿ ವಿಧಾನಸಭೆಯ ಕಾರ್ಯ ಕಲಾಪಗಳ ಬಗ್ಗೆ ತಿಳುವಳಿಕೆ ಮೂಡಿಸುವುದು. ವಿದ್ಯಾರ್ಥಿ ದೆಸೆಯಿಂದಲೇ ವಾಕ್ ಚಾತುರ್ಯ, ಸಮಯ ಪ್ರಜ್ಞೆ, ಸೂಕ್ಷ್ಮತೆ, ಧೈರ್ಯ ಮನೋಭಾವ, ಉತ್ತಮ ವಿಷಯ ಮಂಡನೆ ಸೇರಿ ನಾಯಕತ್ವ ಗುಣಗಳನ್ನು ಬೆಳೆಸುವುದು ಯುವ ಸಂಸತ್ ಸ್ಪರ್ಧೆಯ ಉದ್ದೇಶವಾಗಿದೆ.

ಜಿಲ್ಲಾ ಮಟ್ಟದ ಯುವ ಸಂಸತ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ 6 ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಇವರಲ್ಲಿ ಇಬ್ಬರನ್ನು ರಾಜ್ಯ ಮಟ್ಟದಲ್ಲಿ ನಡೆಯುವ ಯುವ ಸಂಸತ್‌ ಸ್ಪರ್ಧೆಗೆ ಆಯ್ಕೆ ಮಾಡಿ ಕಳುಹಿಸಲಾಗುವುದು ಎಂದು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದ ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವಿಕ್ಷಕರಾದ ಪದ್ಮಾವತಿ ಹೆಚ್ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ಯೋಜನಾ ಸಮನ್ವಯ ಅಧಿಕಾರಿಗಳಾದ ರೇಖಾ. ಕೆ, ಕೆಂಪಯ್ಯ, ಶಿಕ್ಷಣ ಸಂಯೋಜಕರಾದ ಕೋಮಲಾ. ಎಮ್, ಬಿ.ಆರ್.ಪಿ ಸಮೀರಾ, ಸಿ.ಆರ್.ಪಿ ನಾಗೇಶ್, ತೀರ್ಪುಗಾರರು ಹಾಗೂ ಜಿಲ್ಲೆಯ ನಾಲ್ಕು ತಾಲೂಕುಗಳ ಸಮಾಜ ವಿಜ್ಞಾನ ಶಿಕ್ಷಕರು ಸೇರಿದಂತೆ ವಿದ್ಯಾರ್ಥಿಗಳು ಇತರರು ಇದ್ದರು.

Ramesh Babu

Journalist

Recent Posts

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

25 minutes ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

8 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

8 hours ago

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

11 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

21 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

24 hours ago