ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಯುವ ಸಂಸತ್‌ ಸ್ಪರ್ಧೆ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿದ್ಯಾರ್ಥಿಗಳಲ್ಲಿ ಶಾಸನ ಸಭೆಯ ಕಲಾಪವನ್ನು ಪರಿಚಯಿಸುವ ನಿಟ್ಟಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಯುವ ಸಂಸತ್‌ ಸ್ಪರ್ಧೆ ನಡೆಸಲಾಯಿತು.

ಜಿಲ್ಲೆಯ ನಾಲ್ಕು ತಾಲೂಕುಗಳ 48 ಪ್ರೌಢಶಾಲಾ ವಿದ್ಯಾರ್ಥಿಗಳು ಯುವ ಸಂಸತ್‌ ಸ್ಪರ್ಧೆಯಲ್ಲಿ ಭಾವಹಿಸಿದ್ದರು. ಯುವ ಸಂಸತ್‌ನಲ್ಲಿ ಸಭಾಧ್ಯಕ್ಷರು, ಆಡಳಿತ ಪಕ್ಷ, ವಿರೋಧ ಪಕ್ಷಗಳಾಗಿ ವಿದ್ಯಾರ್ಥಿಗಳು ಜವಾಬ್ದಾರಿವಹಿಸಿ ಹಲವು ಮಹತ್ವದ ವಿಚಾರಗಳ ಕುರಿತು ಅಣಕು ಕಲಾಪದಲ್ಲಿ ಚರ್ಚೆಯನ್ನು ನಡೆಸಿದ್ದು, ಆಕರ್ಷಣೀಯವಾಗಿತ್ತು.

ಯುವ ಸಂಸತ್‌ನಲ್ಲಿ ವಿದ್ಯಾರ್ಥಿಗಳು ಶೂನ್ಯ ವೇಳೆ, ಚುಕ್ಕೆ ಗುರುತಿನ ಪ್ರಶ್ನೆ, ಚುಕ್ಕೆ ಗುರುತ್ತಿಲ್ಲದ ಪ್ರಶ್ನೆ ಹೀಗೆ ಹತ್ತು ಹಲವು ಶಾಸನ ಸಭೆಯ ನಿಯಮಗಳಂತೆ ಚರ್ಚೆ ನಡೆಸಿದ್ದು ವಿಶೇಷವಾಗಿತ್ತು.

ಜನಪ್ರತಿನಿಧಿ ಸಂಸ್ಥೆಗಳ ಪಾತ್ರದ ಅರಿವು ಮೂಡಿಸುವುದು. ಪ್ರಜಾಪ್ರಭುತ್ವದ ಬುನಾದಿಯನ್ನು ಭದ್ರಪಡಿಸುವ ಹಾಗೂ ಅಭಿಪ್ರಾಯಗಳ ಬಗ್ಗೆ ತಾಳ್ಮೆ ಮತ್ತು ತಮ್ಮ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸುವ ಕೌಶಲ್ಯ ಬೆಳೆಸುವುದು. ವಿದ್ಯಾರ್ಥಿಗಳಲ್ಲಿ ವಿಧಾನಸಭೆಯ ಕಾರ್ಯ ಕಲಾಪಗಳ ಬಗ್ಗೆ ತಿಳುವಳಿಕೆ ಮೂಡಿಸುವುದು. ವಿದ್ಯಾರ್ಥಿ ದೆಸೆಯಿಂದಲೇ ವಾಕ್ ಚಾತುರ್ಯ, ಸಮಯ ಪ್ರಜ್ಞೆ, ಸೂಕ್ಷ್ಮತೆ, ಧೈರ್ಯ ಮನೋಭಾವ, ಉತ್ತಮ ವಿಷಯ ಮಂಡನೆ ಸೇರಿ ನಾಯಕತ್ವ ಗುಣಗಳನ್ನು ಬೆಳೆಸುವುದು ಯುವ ಸಂಸತ್ ಸ್ಪರ್ಧೆಯ ಉದ್ದೇಶವಾಗಿದೆ.

ಜಿಲ್ಲಾ ಮಟ್ಟದ ಯುವ ಸಂಸತ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ 6 ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಇವರಲ್ಲಿ ಇಬ್ಬರನ್ನು ರಾಜ್ಯ ಮಟ್ಟದಲ್ಲಿ ನಡೆಯುವ ಯುವ ಸಂಸತ್‌ ಸ್ಪರ್ಧೆಗೆ ಆಯ್ಕೆ ಮಾಡಿ ಕಳುಹಿಸಲಾಗುವುದು ಎಂದು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದ ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವಿಕ್ಷಕರಾದ ಪದ್ಮಾವತಿ ಹೆಚ್ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ಯೋಜನಾ ಸಮನ್ವಯ ಅಧಿಕಾರಿಗಳಾದ ರೇಖಾ. ಕೆ, ಕೆಂಪಯ್ಯ, ಶಿಕ್ಷಣ ಸಂಯೋಜಕರಾದ ಕೋಮಲಾ. ಎಮ್, ಬಿ.ಆರ್.ಪಿ ಸಮೀರಾ, ಸಿ.ಆರ್.ಪಿ ನಾಗೇಶ್, ತೀರ್ಪುಗಾರರು ಹಾಗೂ ಜಿಲ್ಲೆಯ ನಾಲ್ಕು ತಾಲೂಕುಗಳ ಸಮಾಜ ವಿಜ್ಞಾನ ಶಿಕ್ಷಕರು ಸೇರಿದಂತೆ ವಿದ್ಯಾರ್ಥಿಗಳು ಇತರರು ಇದ್ದರು.

Ramesh Babu

Journalist

Recent Posts

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

9 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

10 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

10 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

19 hours ago

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

1 day ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

1 day ago