ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಯುವ ಸಂಸತ್‌ ಸ್ಪರ್ಧೆ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿದ್ಯಾರ್ಥಿಗಳಲ್ಲಿ ಶಾಸನ ಸಭೆಯ ಕಲಾಪವನ್ನು ಪರಿಚಯಿಸುವ ನಿಟ್ಟಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಯುವ ಸಂಸತ್‌ ಸ್ಪರ್ಧೆ ನಡೆಸಲಾಯಿತು.

ಜಿಲ್ಲೆಯ ನಾಲ್ಕು ತಾಲೂಕುಗಳ 48 ಪ್ರೌಢಶಾಲಾ ವಿದ್ಯಾರ್ಥಿಗಳು ಯುವ ಸಂಸತ್‌ ಸ್ಪರ್ಧೆಯಲ್ಲಿ ಭಾವಹಿಸಿದ್ದರು. ಯುವ ಸಂಸತ್‌ನಲ್ಲಿ ಸಭಾಧ್ಯಕ್ಷರು, ಆಡಳಿತ ಪಕ್ಷ, ವಿರೋಧ ಪಕ್ಷಗಳಾಗಿ ವಿದ್ಯಾರ್ಥಿಗಳು ಜವಾಬ್ದಾರಿವಹಿಸಿ ಹಲವು ಮಹತ್ವದ ವಿಚಾರಗಳ ಕುರಿತು ಅಣಕು ಕಲಾಪದಲ್ಲಿ ಚರ್ಚೆಯನ್ನು ನಡೆಸಿದ್ದು, ಆಕರ್ಷಣೀಯವಾಗಿತ್ತು.

ಯುವ ಸಂಸತ್‌ನಲ್ಲಿ ವಿದ್ಯಾರ್ಥಿಗಳು ಶೂನ್ಯ ವೇಳೆ, ಚುಕ್ಕೆ ಗುರುತಿನ ಪ್ರಶ್ನೆ, ಚುಕ್ಕೆ ಗುರುತ್ತಿಲ್ಲದ ಪ್ರಶ್ನೆ ಹೀಗೆ ಹತ್ತು ಹಲವು ಶಾಸನ ಸಭೆಯ ನಿಯಮಗಳಂತೆ ಚರ್ಚೆ ನಡೆಸಿದ್ದು ವಿಶೇಷವಾಗಿತ್ತು.

ಜನಪ್ರತಿನಿಧಿ ಸಂಸ್ಥೆಗಳ ಪಾತ್ರದ ಅರಿವು ಮೂಡಿಸುವುದು. ಪ್ರಜಾಪ್ರಭುತ್ವದ ಬುನಾದಿಯನ್ನು ಭದ್ರಪಡಿಸುವ ಹಾಗೂ ಅಭಿಪ್ರಾಯಗಳ ಬಗ್ಗೆ ತಾಳ್ಮೆ ಮತ್ತು ತಮ್ಮ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸುವ ಕೌಶಲ್ಯ ಬೆಳೆಸುವುದು. ವಿದ್ಯಾರ್ಥಿಗಳಲ್ಲಿ ವಿಧಾನಸಭೆಯ ಕಾರ್ಯ ಕಲಾಪಗಳ ಬಗ್ಗೆ ತಿಳುವಳಿಕೆ ಮೂಡಿಸುವುದು. ವಿದ್ಯಾರ್ಥಿ ದೆಸೆಯಿಂದಲೇ ವಾಕ್ ಚಾತುರ್ಯ, ಸಮಯ ಪ್ರಜ್ಞೆ, ಸೂಕ್ಷ್ಮತೆ, ಧೈರ್ಯ ಮನೋಭಾವ, ಉತ್ತಮ ವಿಷಯ ಮಂಡನೆ ಸೇರಿ ನಾಯಕತ್ವ ಗುಣಗಳನ್ನು ಬೆಳೆಸುವುದು ಯುವ ಸಂಸತ್ ಸ್ಪರ್ಧೆಯ ಉದ್ದೇಶವಾಗಿದೆ.

ಜಿಲ್ಲಾ ಮಟ್ಟದ ಯುವ ಸಂಸತ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ 6 ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಇವರಲ್ಲಿ ಇಬ್ಬರನ್ನು ರಾಜ್ಯ ಮಟ್ಟದಲ್ಲಿ ನಡೆಯುವ ಯುವ ಸಂಸತ್‌ ಸ್ಪರ್ಧೆಗೆ ಆಯ್ಕೆ ಮಾಡಿ ಕಳುಹಿಸಲಾಗುವುದು ಎಂದು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದ ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವಿಕ್ಷಕರಾದ ಪದ್ಮಾವತಿ ಹೆಚ್ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ಯೋಜನಾ ಸಮನ್ವಯ ಅಧಿಕಾರಿಗಳಾದ ರೇಖಾ. ಕೆ, ಕೆಂಪಯ್ಯ, ಶಿಕ್ಷಣ ಸಂಯೋಜಕರಾದ ಕೋಮಲಾ. ಎಮ್, ಬಿ.ಆರ್.ಪಿ ಸಮೀರಾ, ಸಿ.ಆರ್.ಪಿ ನಾಗೇಶ್, ತೀರ್ಪುಗಾರರು ಹಾಗೂ ಜಿಲ್ಲೆಯ ನಾಲ್ಕು ತಾಲೂಕುಗಳ ಸಮಾಜ ವಿಜ್ಞಾನ ಶಿಕ್ಷಕರು ಸೇರಿದಂತೆ ವಿದ್ಯಾರ್ಥಿಗಳು ಇತರರು ಇದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

4 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

7 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

8 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

12 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

16 hours ago