ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಯುವ ಸಂಸತ್‌ ಸ್ಪರ್ಧೆ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿದ್ಯಾರ್ಥಿಗಳಲ್ಲಿ ಶಾಸನ ಸಭೆಯ ಕಲಾಪವನ್ನು ಪರಿಚಯಿಸುವ ನಿಟ್ಟಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಯುವ ಸಂಸತ್‌ ಸ್ಪರ್ಧೆ ನಡೆಸಲಾಯಿತು.

ಜಿಲ್ಲೆಯ ನಾಲ್ಕು ತಾಲೂಕುಗಳ 48 ಪ್ರೌಢಶಾಲಾ ವಿದ್ಯಾರ್ಥಿಗಳು ಯುವ ಸಂಸತ್‌ ಸ್ಪರ್ಧೆಯಲ್ಲಿ ಭಾವಹಿಸಿದ್ದರು. ಯುವ ಸಂಸತ್‌ನಲ್ಲಿ ಸಭಾಧ್ಯಕ್ಷರು, ಆಡಳಿತ ಪಕ್ಷ, ವಿರೋಧ ಪಕ್ಷಗಳಾಗಿ ವಿದ್ಯಾರ್ಥಿಗಳು ಜವಾಬ್ದಾರಿವಹಿಸಿ ಹಲವು ಮಹತ್ವದ ವಿಚಾರಗಳ ಕುರಿತು ಅಣಕು ಕಲಾಪದಲ್ಲಿ ಚರ್ಚೆಯನ್ನು ನಡೆಸಿದ್ದು, ಆಕರ್ಷಣೀಯವಾಗಿತ್ತು.

ಯುವ ಸಂಸತ್‌ನಲ್ಲಿ ವಿದ್ಯಾರ್ಥಿಗಳು ಶೂನ್ಯ ವೇಳೆ, ಚುಕ್ಕೆ ಗುರುತಿನ ಪ್ರಶ್ನೆ, ಚುಕ್ಕೆ ಗುರುತ್ತಿಲ್ಲದ ಪ್ರಶ್ನೆ ಹೀಗೆ ಹತ್ತು ಹಲವು ಶಾಸನ ಸಭೆಯ ನಿಯಮಗಳಂತೆ ಚರ್ಚೆ ನಡೆಸಿದ್ದು ವಿಶೇಷವಾಗಿತ್ತು.

ಜನಪ್ರತಿನಿಧಿ ಸಂಸ್ಥೆಗಳ ಪಾತ್ರದ ಅರಿವು ಮೂಡಿಸುವುದು. ಪ್ರಜಾಪ್ರಭುತ್ವದ ಬುನಾದಿಯನ್ನು ಭದ್ರಪಡಿಸುವ ಹಾಗೂ ಅಭಿಪ್ರಾಯಗಳ ಬಗ್ಗೆ ತಾಳ್ಮೆ ಮತ್ತು ತಮ್ಮ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸುವ ಕೌಶಲ್ಯ ಬೆಳೆಸುವುದು. ವಿದ್ಯಾರ್ಥಿಗಳಲ್ಲಿ ವಿಧಾನಸಭೆಯ ಕಾರ್ಯ ಕಲಾಪಗಳ ಬಗ್ಗೆ ತಿಳುವಳಿಕೆ ಮೂಡಿಸುವುದು. ವಿದ್ಯಾರ್ಥಿ ದೆಸೆಯಿಂದಲೇ ವಾಕ್ ಚಾತುರ್ಯ, ಸಮಯ ಪ್ರಜ್ಞೆ, ಸೂಕ್ಷ್ಮತೆ, ಧೈರ್ಯ ಮನೋಭಾವ, ಉತ್ತಮ ವಿಷಯ ಮಂಡನೆ ಸೇರಿ ನಾಯಕತ್ವ ಗುಣಗಳನ್ನು ಬೆಳೆಸುವುದು ಯುವ ಸಂಸತ್ ಸ್ಪರ್ಧೆಯ ಉದ್ದೇಶವಾಗಿದೆ.

ಜಿಲ್ಲಾ ಮಟ್ಟದ ಯುವ ಸಂಸತ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ 6 ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಇವರಲ್ಲಿ ಇಬ್ಬರನ್ನು ರಾಜ್ಯ ಮಟ್ಟದಲ್ಲಿ ನಡೆಯುವ ಯುವ ಸಂಸತ್‌ ಸ್ಪರ್ಧೆಗೆ ಆಯ್ಕೆ ಮಾಡಿ ಕಳುಹಿಸಲಾಗುವುದು ಎಂದು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದ ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವಿಕ್ಷಕರಾದ ಪದ್ಮಾವತಿ ಹೆಚ್ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ಯೋಜನಾ ಸಮನ್ವಯ ಅಧಿಕಾರಿಗಳಾದ ರೇಖಾ. ಕೆ, ಕೆಂಪಯ್ಯ, ಶಿಕ್ಷಣ ಸಂಯೋಜಕರಾದ ಕೋಮಲಾ. ಎಮ್, ಬಿ.ಆರ್.ಪಿ ಸಮೀರಾ, ಸಿ.ಆರ್.ಪಿ ನಾಗೇಶ್, ತೀರ್ಪುಗಾರರು ಹಾಗೂ ಜಿಲ್ಲೆಯ ನಾಲ್ಕು ತಾಲೂಕುಗಳ ಸಮಾಜ ವಿಜ್ಞಾನ ಶಿಕ್ಷಕರು ಸೇರಿದಂತೆ ವಿದ್ಯಾರ್ಥಿಗಳು ಇತರರು ಇದ್ದರು.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

2 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

3 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

6 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

12 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

23 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago