Categories: ಕೋಲಾರ

ವಿದ್ಯಾರ್ಥಿಗಳಿಗೆ ಶಿಸ್ತು ಕಲಿಸಲು ಸ್ಕೌಟ್ಸ್ ಮತ್ತು ಗೈಡ್ಸ್  ಗೆ ಸೇರಿಸಿ: ಪಿಜಿಆರ್ ಸಿಂಧ್ಯಾ

ಕೋಲಾರ: ವಿದ್ಯಾರ್ಥಿಗಳಿಗೆ ಬದುಕಿನ ಕಲೆ ಕಲ್ಪಿಸುವ ಜೊತೆಗೆ ಆರೋಗ್ಯಕರ ಸಮಾಜವನ್ನು ಕಟ್ಟುವಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಶಿಸ್ತು ಮತ್ತು ಕೌಶಲ್ಯವು ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ ಎಂದು ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯ ರಾಜ್ಯ ಆಯುಕ್ತ ಪಿಜಿಆರ್‌.ಸಿಂಧ್ಯಾ ತಿಳಿಸಿದರು

ನಗರದ ಮಹಿಳಾ ಸಮಾಜ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ತಾಲೂಕು ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳಿಗೆ ಎಲ್ಲಾ ಹಂತದ ವಿದ್ಯೆಯನ್ನು ಕಲಿಸುತ್ತದೆ ಒಂದು ಜಾತಿ ಧರ್ಮಕ್ಕೆ ಸೀಮಿತಗೊಳಿಸದೇ ಎಲ್ಲಾ ವರ್ಗವನ್ನು ಈ ಸಂಸ್ಥೆಯೂ ಪ್ರತಿನಿಧಿಸುತ್ತದೆ. ಸತ್ಯದ ನಂಬಿಕೆಯನ್ನು ಹೊಂದುವಂತೆ ವಿಧ್ಯಾರ್ಥಿಗಳಿಗೆ ಮೂಡಿಸುತ್ತದೆ ಮಕ್ಕಳ ಮಧ್ಯೆ ಸಮನ್ವಯತೆಯಿಂದ ಬದುಕುವ ವಾತಾವರಣವನ್ನು ಸೃಷ್ಟಿಸುತ್ತದೆ ಅದರಿಂದಾಗಿ ಪ್ರತಿಯೊಬ್ಬರೂ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಸೇರಿಸುವಂತೆ ಮಾಡಬೇಕು ಎಂದರು.

ದೇಶದಲ್ಲಿ ಸುಮಾರು ಒಂದು ಕೋಟಿಯಷ್ಟು ವಿಧ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಕೆಲಸ ಮಾಡುತ್ತಿದ್ದು ಉಳಿದ 39 ಕೋಟಿ ವಿಧ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ಮಾಡಬೇಕಾಗಿದೆ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸೇರ್ಪಡೆಯಿಂದ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನದ ಜತೆಗೆ ಕಲಿಕೆಯಲ್ಲೂ ಪ್ರಗತಿ ಸಾಧಿಸಲು ಸಾಧ್ಯ ಹಾಗಾಗಿ ಎಲ್ಲಾ ಶಾಲಾ ಮಕ್ಕಳು ಸ್ಕೌಟ್ಸ್‌ ಮತ್ತು ಗೈಡ್ಸ್‌ಗೆ ಸೇರ್ಪಡೆಗೊಳ್ಳಲು ಮುಂದಾಗಬೇಕು ಇದಕ್ಕೆ ಪ್ರತಿಯೊಂದು ವಿದ್ಯಾಸಂಸ್ಥೆಯ ಸಹಕಾರ ಮುಖ್ಯವಾಗಿದೆ ಈ ಬಾರಿ ರಾಜ್ಯದಲ್ಲಿ 10 ಲಕ್ಷದಷ್ಟು ವಿಧ್ಯಾರ್ಥಿಗಳನ್ನು ಹೊಸ ಸೇರ್ಪಡೆ ಮಾಡಿಕೊಳ್ಳುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗೈಡ್ಸ್ ಸಂಸ್ಥೆಯ ನೂತನ ಜಿಲ್ಲಾ ಆಯುಕ್ತರು ಹಾಗೂ ಮಹಿಳಾ ಸಮಾಜ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಎಂ ನವೀನಾ ಮಾತನಾಡಿ ಸ್ಕೌಟ್ಸ್‌ ಮತ್ತು ಗೈಡ್ಸ್‌ನಿಂದ ಮಕ್ಕಳಲ್ಲಿ ಪರಿಸರ ಪ್ರಜ್ಞೆ, ಸಂಸ್ಕೃತಿಯ ಅರಿವನ್ನು ಮೂಡಿಸುವ ಕೆಲಸವನ್ನು ಮಾಡುತ್ತದೆ ಪರಿಸರ ಉಳಿಸಿ-ಬೆಳೆಸುವ ಕಾರ್ಯವನ್ನು ಮಕ್ಕಳಲ್ಲಿ ತುಂಬಬೇಕು. ಆರೋಗ್ಯಕ್ಕೆ ಯೋಗ ಅತ್ಯವಶ್ಯಕವಾಗಿದ್ದು, ಯೋಗದ ಪರಿಕಲ್ಪನೆಯನ್ನೂ ಮಕ್ಕಳಲ್ಲಿ ಮೂಡಿಸುತ್ತದೆ ಮುಂದಿನ ಪೀಳಿಗೆಗೆ ಉತ್ತಮ ನಾಗರಿಕರನ್ನು ನಿರ್ಮಾಣ ಮಾಡುವ ಕೆಲಸಯ ಸ್ಕೌಟ್ಸ್‌ ಮತ್ತು ಗೈಡ್ಸ್‌ನಿಂದಾಗುತ್ತದೆ ಎಂದರು

ಈ ಸಂದರ್ಭದಲ್ಲಿ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಆಯುಕ್ತ ಕೆ.ವಿ ಶಂಕರಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ, ಮಹಿಳಾ ಸಮಾಜ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಂ ನಂದನಾ, ಸಂಸ್ಥೆಯ ಪಿ.ಆರ್.ಒ ಶ್ರೀನಿವಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪದಾಧಿಕಾರಿಗಳಾದ ಸುರೇಶ್, ಚಲ್ಲಯ್ಯ, ಇಂಚರ ನಾರಾಯಣಸ್ವಾಮಿ, ಸ್ಕೌಟ್ಸ್ ಬಾಬು, ರಾಮಚಂದ್ರ, ಉಮಾ, ಸಂಪತ್, ಸೋಮಶೇಖರ್, ನಾರಾಯಣಸ್ವಾಮಿ ಮುಂತಾದವರು ಇದ್ದರು

Ramesh Babu

Journalist

Recent Posts

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

7 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

9 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

12 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

14 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

14 hours ago

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

21 hours ago