Categories: ಕೋಲಾರ

ವಿದ್ಯಾರ್ಥಿಗಳಿಗೆ ಶಿಸ್ತು ಕಲಿಸಲು ಸ್ಕೌಟ್ಸ್ ಮತ್ತು ಗೈಡ್ಸ್  ಗೆ ಸೇರಿಸಿ: ಪಿಜಿಆರ್ ಸಿಂಧ್ಯಾ

ಕೋಲಾರ: ವಿದ್ಯಾರ್ಥಿಗಳಿಗೆ ಬದುಕಿನ ಕಲೆ ಕಲ್ಪಿಸುವ ಜೊತೆಗೆ ಆರೋಗ್ಯಕರ ಸಮಾಜವನ್ನು ಕಟ್ಟುವಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಶಿಸ್ತು ಮತ್ತು ಕೌಶಲ್ಯವು ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ ಎಂದು ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯ ರಾಜ್ಯ ಆಯುಕ್ತ ಪಿಜಿಆರ್‌.ಸಿಂಧ್ಯಾ ತಿಳಿಸಿದರು

ನಗರದ ಮಹಿಳಾ ಸಮಾಜ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ತಾಲೂಕು ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳಿಗೆ ಎಲ್ಲಾ ಹಂತದ ವಿದ್ಯೆಯನ್ನು ಕಲಿಸುತ್ತದೆ ಒಂದು ಜಾತಿ ಧರ್ಮಕ್ಕೆ ಸೀಮಿತಗೊಳಿಸದೇ ಎಲ್ಲಾ ವರ್ಗವನ್ನು ಈ ಸಂಸ್ಥೆಯೂ ಪ್ರತಿನಿಧಿಸುತ್ತದೆ. ಸತ್ಯದ ನಂಬಿಕೆಯನ್ನು ಹೊಂದುವಂತೆ ವಿಧ್ಯಾರ್ಥಿಗಳಿಗೆ ಮೂಡಿಸುತ್ತದೆ ಮಕ್ಕಳ ಮಧ್ಯೆ ಸಮನ್ವಯತೆಯಿಂದ ಬದುಕುವ ವಾತಾವರಣವನ್ನು ಸೃಷ್ಟಿಸುತ್ತದೆ ಅದರಿಂದಾಗಿ ಪ್ರತಿಯೊಬ್ಬರೂ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಸೇರಿಸುವಂತೆ ಮಾಡಬೇಕು ಎಂದರು.

ದೇಶದಲ್ಲಿ ಸುಮಾರು ಒಂದು ಕೋಟಿಯಷ್ಟು ವಿಧ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಕೆಲಸ ಮಾಡುತ್ತಿದ್ದು ಉಳಿದ 39 ಕೋಟಿ ವಿಧ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ಮಾಡಬೇಕಾಗಿದೆ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸೇರ್ಪಡೆಯಿಂದ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನದ ಜತೆಗೆ ಕಲಿಕೆಯಲ್ಲೂ ಪ್ರಗತಿ ಸಾಧಿಸಲು ಸಾಧ್ಯ ಹಾಗಾಗಿ ಎಲ್ಲಾ ಶಾಲಾ ಮಕ್ಕಳು ಸ್ಕೌಟ್ಸ್‌ ಮತ್ತು ಗೈಡ್ಸ್‌ಗೆ ಸೇರ್ಪಡೆಗೊಳ್ಳಲು ಮುಂದಾಗಬೇಕು ಇದಕ್ಕೆ ಪ್ರತಿಯೊಂದು ವಿದ್ಯಾಸಂಸ್ಥೆಯ ಸಹಕಾರ ಮುಖ್ಯವಾಗಿದೆ ಈ ಬಾರಿ ರಾಜ್ಯದಲ್ಲಿ 10 ಲಕ್ಷದಷ್ಟು ವಿಧ್ಯಾರ್ಥಿಗಳನ್ನು ಹೊಸ ಸೇರ್ಪಡೆ ಮಾಡಿಕೊಳ್ಳುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗೈಡ್ಸ್ ಸಂಸ್ಥೆಯ ನೂತನ ಜಿಲ್ಲಾ ಆಯುಕ್ತರು ಹಾಗೂ ಮಹಿಳಾ ಸಮಾಜ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಎಂ ನವೀನಾ ಮಾತನಾಡಿ ಸ್ಕೌಟ್ಸ್‌ ಮತ್ತು ಗೈಡ್ಸ್‌ನಿಂದ ಮಕ್ಕಳಲ್ಲಿ ಪರಿಸರ ಪ್ರಜ್ಞೆ, ಸಂಸ್ಕೃತಿಯ ಅರಿವನ್ನು ಮೂಡಿಸುವ ಕೆಲಸವನ್ನು ಮಾಡುತ್ತದೆ ಪರಿಸರ ಉಳಿಸಿ-ಬೆಳೆಸುವ ಕಾರ್ಯವನ್ನು ಮಕ್ಕಳಲ್ಲಿ ತುಂಬಬೇಕು. ಆರೋಗ್ಯಕ್ಕೆ ಯೋಗ ಅತ್ಯವಶ್ಯಕವಾಗಿದ್ದು, ಯೋಗದ ಪರಿಕಲ್ಪನೆಯನ್ನೂ ಮಕ್ಕಳಲ್ಲಿ ಮೂಡಿಸುತ್ತದೆ ಮುಂದಿನ ಪೀಳಿಗೆಗೆ ಉತ್ತಮ ನಾಗರಿಕರನ್ನು ನಿರ್ಮಾಣ ಮಾಡುವ ಕೆಲಸಯ ಸ್ಕೌಟ್ಸ್‌ ಮತ್ತು ಗೈಡ್ಸ್‌ನಿಂದಾಗುತ್ತದೆ ಎಂದರು

ಈ ಸಂದರ್ಭದಲ್ಲಿ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಆಯುಕ್ತ ಕೆ.ವಿ ಶಂಕರಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ, ಮಹಿಳಾ ಸಮಾಜ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಂ ನಂದನಾ, ಸಂಸ್ಥೆಯ ಪಿ.ಆರ್.ಒ ಶ್ರೀನಿವಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪದಾಧಿಕಾರಿಗಳಾದ ಸುರೇಶ್, ಚಲ್ಲಯ್ಯ, ಇಂಚರ ನಾರಾಯಣಸ್ವಾಮಿ, ಸ್ಕೌಟ್ಸ್ ಬಾಬು, ರಾಮಚಂದ್ರ, ಉಮಾ, ಸಂಪತ್, ಸೋಮಶೇಖರ್, ನಾರಾಯಣಸ್ವಾಮಿ ಮುಂತಾದವರು ಇದ್ದರು

Ramesh Babu

Journalist

Recent Posts

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

14 minutes ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

20 minutes ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

3 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

6 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

6 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

10 hours ago