Categories: ಕೋಲಾರ

ವಿದ್ಯಾರ್ಥಿಗಳಿಗೆ ಶಿಸ್ತು ಕಲಿಸಲು ಸ್ಕೌಟ್ಸ್ ಮತ್ತು ಗೈಡ್ಸ್  ಗೆ ಸೇರಿಸಿ: ಪಿಜಿಆರ್ ಸಿಂಧ್ಯಾ

ಕೋಲಾರ: ವಿದ್ಯಾರ್ಥಿಗಳಿಗೆ ಬದುಕಿನ ಕಲೆ ಕಲ್ಪಿಸುವ ಜೊತೆಗೆ ಆರೋಗ್ಯಕರ ಸಮಾಜವನ್ನು ಕಟ್ಟುವಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಶಿಸ್ತು ಮತ್ತು ಕೌಶಲ್ಯವು ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ ಎಂದು ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯ ರಾಜ್ಯ ಆಯುಕ್ತ ಪಿಜಿಆರ್‌.ಸಿಂಧ್ಯಾ ತಿಳಿಸಿದರು

ನಗರದ ಮಹಿಳಾ ಸಮಾಜ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ತಾಲೂಕು ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳಿಗೆ ಎಲ್ಲಾ ಹಂತದ ವಿದ್ಯೆಯನ್ನು ಕಲಿಸುತ್ತದೆ ಒಂದು ಜಾತಿ ಧರ್ಮಕ್ಕೆ ಸೀಮಿತಗೊಳಿಸದೇ ಎಲ್ಲಾ ವರ್ಗವನ್ನು ಈ ಸಂಸ್ಥೆಯೂ ಪ್ರತಿನಿಧಿಸುತ್ತದೆ. ಸತ್ಯದ ನಂಬಿಕೆಯನ್ನು ಹೊಂದುವಂತೆ ವಿಧ್ಯಾರ್ಥಿಗಳಿಗೆ ಮೂಡಿಸುತ್ತದೆ ಮಕ್ಕಳ ಮಧ್ಯೆ ಸಮನ್ವಯತೆಯಿಂದ ಬದುಕುವ ವಾತಾವರಣವನ್ನು ಸೃಷ್ಟಿಸುತ್ತದೆ ಅದರಿಂದಾಗಿ ಪ್ರತಿಯೊಬ್ಬರೂ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಸೇರಿಸುವಂತೆ ಮಾಡಬೇಕು ಎಂದರು.

ದೇಶದಲ್ಲಿ ಸುಮಾರು ಒಂದು ಕೋಟಿಯಷ್ಟು ವಿಧ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಕೆಲಸ ಮಾಡುತ್ತಿದ್ದು ಉಳಿದ 39 ಕೋಟಿ ವಿಧ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ಮಾಡಬೇಕಾಗಿದೆ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸೇರ್ಪಡೆಯಿಂದ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನದ ಜತೆಗೆ ಕಲಿಕೆಯಲ್ಲೂ ಪ್ರಗತಿ ಸಾಧಿಸಲು ಸಾಧ್ಯ ಹಾಗಾಗಿ ಎಲ್ಲಾ ಶಾಲಾ ಮಕ್ಕಳು ಸ್ಕೌಟ್ಸ್‌ ಮತ್ತು ಗೈಡ್ಸ್‌ಗೆ ಸೇರ್ಪಡೆಗೊಳ್ಳಲು ಮುಂದಾಗಬೇಕು ಇದಕ್ಕೆ ಪ್ರತಿಯೊಂದು ವಿದ್ಯಾಸಂಸ್ಥೆಯ ಸಹಕಾರ ಮುಖ್ಯವಾಗಿದೆ ಈ ಬಾರಿ ರಾಜ್ಯದಲ್ಲಿ 10 ಲಕ್ಷದಷ್ಟು ವಿಧ್ಯಾರ್ಥಿಗಳನ್ನು ಹೊಸ ಸೇರ್ಪಡೆ ಮಾಡಿಕೊಳ್ಳುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗೈಡ್ಸ್ ಸಂಸ್ಥೆಯ ನೂತನ ಜಿಲ್ಲಾ ಆಯುಕ್ತರು ಹಾಗೂ ಮಹಿಳಾ ಸಮಾಜ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಎಂ ನವೀನಾ ಮಾತನಾಡಿ ಸ್ಕೌಟ್ಸ್‌ ಮತ್ತು ಗೈಡ್ಸ್‌ನಿಂದ ಮಕ್ಕಳಲ್ಲಿ ಪರಿಸರ ಪ್ರಜ್ಞೆ, ಸಂಸ್ಕೃತಿಯ ಅರಿವನ್ನು ಮೂಡಿಸುವ ಕೆಲಸವನ್ನು ಮಾಡುತ್ತದೆ ಪರಿಸರ ಉಳಿಸಿ-ಬೆಳೆಸುವ ಕಾರ್ಯವನ್ನು ಮಕ್ಕಳಲ್ಲಿ ತುಂಬಬೇಕು. ಆರೋಗ್ಯಕ್ಕೆ ಯೋಗ ಅತ್ಯವಶ್ಯಕವಾಗಿದ್ದು, ಯೋಗದ ಪರಿಕಲ್ಪನೆಯನ್ನೂ ಮಕ್ಕಳಲ್ಲಿ ಮೂಡಿಸುತ್ತದೆ ಮುಂದಿನ ಪೀಳಿಗೆಗೆ ಉತ್ತಮ ನಾಗರಿಕರನ್ನು ನಿರ್ಮಾಣ ಮಾಡುವ ಕೆಲಸಯ ಸ್ಕೌಟ್ಸ್‌ ಮತ್ತು ಗೈಡ್ಸ್‌ನಿಂದಾಗುತ್ತದೆ ಎಂದರು

ಈ ಸಂದರ್ಭದಲ್ಲಿ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಆಯುಕ್ತ ಕೆ.ವಿ ಶಂಕರಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ, ಮಹಿಳಾ ಸಮಾಜ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಂ ನಂದನಾ, ಸಂಸ್ಥೆಯ ಪಿ.ಆರ್.ಒ ಶ್ರೀನಿವಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪದಾಧಿಕಾರಿಗಳಾದ ಸುರೇಶ್, ಚಲ್ಲಯ್ಯ, ಇಂಚರ ನಾರಾಯಣಸ್ವಾಮಿ, ಸ್ಕೌಟ್ಸ್ ಬಾಬು, ರಾಮಚಂದ್ರ, ಉಮಾ, ಸಂಪತ್, ಸೋಮಶೇಖರ್, ನಾರಾಯಣಸ್ವಾಮಿ ಮುಂತಾದವರು ಇದ್ದರು

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

13 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

19 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago