ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಭವ್ಯ ಭವಿಷ್ಯ ರೂಪಿಸಿಕೊಳ್ಳಬೇಕು- ಪವಾಡಶ್ರೀ ಬಸವಣ್ಣ ಮಠದ ಶ್ರೀಸಿದ್ದಲಿಂಗಸ್ವಾಮಿ

ಪುಸ್ತಕ ವಿತರಣೆ ಕಾರ್ಯಕ್ರಮ ಹೆಸರಿಗೋಸ್ಕರ ಮಾಡುತ್ತಿರುವ ಕಾರ್ಯಕ್ರಮವಲ್ಲ‌‌. ಈ ರೀತಿ ಪ್ರತಿ ವರ್ಷ ಪುಸ್ತಕ ನೀಡಲಾಗುತ್ತದೆ. ದಸರಾ ರಜಾದ ವೇಳೆ ಈ ಭಾಗದ ಸುತ್ತಮುತ್ತಲಿನ ಮಠಗಳಿಗೆ ಮಕ್ಕಳನ್ನು ‌ಕರೆದೊಯ್ದು ಮಠಗಳ ಪರಿಚಯ ಮಾಡಿಕೊಡಲಾಗುತ್ತದೆ. ಸರ್ಕಾರಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮುಂದಿನ ಓದಿಗೆ ಉಚಿತ ದಾಖಲಾತಿ ನೀಡಲಾಗುತ್ತದೆ. ಈ ಪುಸ್ತಕಗಳನ್ನು ಸರಿಯಾಗಿ ಉಪಯೋಗಿಸುವ ಮೂಲಕ ಶಿಕ್ಷಣದಲ್ಲಿ ‌ಸಾಧನೆ ಮಾಡಬೇಕು ಪವಾಡಶ್ರೀ ಬಸವಣ್ಣ ಮಠದ ಶ್ರೀಸಿದ್ದಲಿಂಗಸ್ವಾಮಿ ಹೇಳಿದರು.

ನಗರದ ಬಸವ ಭವನದಲ್ಲಿ ಭಾನುವಾರ ರಾಜ್ಯ ವೀರಶೈವ ಲಿಂಗಾಯತ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಪವಾಡಶ್ರೀ ಬಸವಣ್ಣದೇವರ ಮಠ, ಹಾಗೂ ಬಸವ ಭಾರತ ಪ್ರತಿಷ್ಠಾನ ಪವಾಡಶ್ರೀ ಬಸವಣ್ಣ ದೇವರ ಮಠ ನೆಲಮಂಗಲ ಸಹಯೋಗದಲ್ಲಿ ತಾಲೂಕಿನ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವೀರಶೈವ ಲಿಂಗಾಯಿತ ಮಕ್ಕಳಿಗೆ ಲೇಖನ ಸಾಮಗ್ರಿ ಮತ್ತು ನೋಟ್ ಪುಸ್ತಕ ವಿತರಣಾ ಸಮಾರಂಭ ‌ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವನಕಲ್ಲು ಮಠದ ಬಸವರಮಾನಂದ ಮಹಾಸ್ವಾಮಿ ಮಾತನಾಡಿ, ಶಿರಸಂಗಿ ಮಹಾಲಿಂಗ ಸ್ವಾಮಿಯವರು ಲಿಂಗಾಯತ ವಿದ್ಯಾರ್ಥಿಗಳಿಗಾಗಿ ರಾಜ್ಯದಲ್ಲಿ ಮೊದಲ ಬಾರಿಗೆ 1919ರಲ್ಲಿ ಹಾಸ್ಟೆಲನ್ನು ತೆರೆದರು. ಸಿದ್ದಗಂಗಾಶ್ರೀಗಳು ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಬಡ ಮಕ್ಕಳ ಅನುಕೂಲಕ್ಕಾಗಿ ದೊಡ್ಡಬಳ್ಳಾಪುರಕ್ಕೆ ಬಂದು ನೋಟ್ ಬುಕ್ ನೀಡಲಾಗುತ್ತಿದೆ ಎಂದರು.

ಅನ್ನ ಕ್ಷಣಿಕ ತೃಪ್ತಿ ನೀಡಿದರೆ , ಶಿಕ್ಷಣ ಬಳಸಿದಷ್ಟು ಹೆಚ್ಚು ಜ್ಞಾನ ನೀಡುತ್ತದೆ. ವಿದ್ಯಾರ್ಥಿಗಳ ಕಲಿಕೆಗೆ ೫ ಮಾತ್ರೆಗಳು ಅವಶ್ಯಕ ಬೆಳಿಗ್ಗೆ ಬೇಗನೇ ಏಳುವುದು, ಪ್ರತಿದಿನ 15 ನಿಮಿಷ ಧ್ಯಾನ, ಕಲಿಕೆಯೊಂದಿಗೆ ತಂದೆತಾಯಿಗೆ ನೆರವಾಗುವುದು. ಓದಿರುವ ವಿಷಯದ ಪ್ರಮುಖ ವಿಷಯಗಳನ್ನು ಬರೆದಿಡುವುದು, ಪರೀಕ್ಷೆ ದಿ‌ನ ಓದುವುದಲ್ಲ ಪ್ರತಿದಿನ ಓದುವಾಗ ತಿಳಿದ ವಿಷಯಗಳನ್ನು ಶಿಕ್ಷಕರಿಂದ ಮಾಹಿತಿ ಪಡೆಯುವುದು ಇವು 5 ಪ್ರಮುಖ ಮಾತ್ರೆಗಳಾಗಿವೆ. ಈ ಮೂಲಕ ಶೈಕ್ಷಣಿಕ ದೊಡ್ಡ ಸಾಧನೆ‌ ಮಾಡಬಹುದು ಎಂದರು.

ಈ ವೇಳೆ ವಿಜಯಪುರದ ಬಸವಕಲ್ಯಾಣ ಮಠದ ಮಹಾದೇವ ಸ್ವಾಮಿ, ಗುರುವಣ್ಣದೇವರ ಮಠದ ಅಧ್ಯಕ್ಷರಾದ ನಂಜುಂಡ ಸ್ವಾಮಿ, ನಿಜಗುಣ ಜಂಗಮಮಠದ ನಿಜಗುಣ ಸ್ವಾಮಿ, ತಾಲ್ಲೂಕಿನ ಬಸವೇಶ್ವರ ಮಹಾಮಠದ ಅಧ್ಯಕ್ಷರಾದ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮಿಗಳು, ರಾಜ್ಯ ವೀರಶೈವ ಲಿಂಗಾಯತ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಆರ್ ನಾಗರಾಜ್, ಉಪನ್ಯಾಸಕರಾದ ಪ್ರೋ ಬಾಲಚಂದ್ರ, ಬಿಇಒ ರಂಗಪ್ಪ ‌ಸೇರಿದಂತೆ ತಾಲೂಕಿನ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

How To Choose The Best Real Money Casino Sites And Utilize Them

There are many benefits to playing at real money casino sites. Whether you are looking…

31 minutes ago

ವಿಧಾನಸೌಧದಲ್ಲಿ ಐತಿಹಾಸಿಕ ತೀರ್ಮಾನ: ಒಳಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ- ಸಚಿವ ಕೆ.ಎಚ್ ಮುನಿಯಪ್ಪ

ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ನಟಸಾರ್ವಭೌಮ ಡಾ.ರಾಜ್ ಉದ್ಯಾನ ಜನಾರ್ಪಣೆಗೊಳಿಸಿದ ಸಚಿವ ಕೆ.ಜೆ ಜಾರ್ಜ್

ಕನ್ನಡದ ಕಣ್ಮಣಿ ಡಾ.ರಾಜ್‌ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…

3 hours ago

ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ. ಪಿ.ಪಾಂಡುಸಿಂಧೆ ಆಯ್ಕೆ

ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…

3 hours ago

ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಆಚರಣೆ: ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಕಾಡನೂರು ಗ್ರಾ.ಪಂ ಗೆ ಬಹುಮಾನ ವಿತರಣೆ

ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…

4 hours ago

ಜೆಡಿಎಸ್ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…

6 hours ago