ಪುಸ್ತಕ ವಿತರಣೆ ಕಾರ್ಯಕ್ರಮ ಹೆಸರಿಗೋಸ್ಕರ ಮಾಡುತ್ತಿರುವ ಕಾರ್ಯಕ್ರಮವಲ್ಲ. ಈ ರೀತಿ ಪ್ರತಿ ವರ್ಷ ಪುಸ್ತಕ ನೀಡಲಾಗುತ್ತದೆ. ದಸರಾ ರಜಾದ ವೇಳೆ ಈ ಭಾಗದ ಸುತ್ತಮುತ್ತಲಿನ ಮಠಗಳಿಗೆ ಮಕ್ಕಳನ್ನು ಕರೆದೊಯ್ದು ಮಠಗಳ ಪರಿಚಯ ಮಾಡಿಕೊಡಲಾಗುತ್ತದೆ. ಸರ್ಕಾರಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮುಂದಿನ ಓದಿಗೆ ಉಚಿತ ದಾಖಲಾತಿ ನೀಡಲಾಗುತ್ತದೆ. ಈ ಪುಸ್ತಕಗಳನ್ನು ಸರಿಯಾಗಿ ಉಪಯೋಗಿಸುವ ಮೂಲಕ ಶಿಕ್ಷಣದಲ್ಲಿ ಸಾಧನೆ ಮಾಡಬೇಕು ಪವಾಡಶ್ರೀ ಬಸವಣ್ಣ ಮಠದ ಶ್ರೀಸಿದ್ದಲಿಂಗಸ್ವಾಮಿ ಹೇಳಿದರು.
ನಗರದ ಬಸವ ಭವನದಲ್ಲಿ ಭಾನುವಾರ ರಾಜ್ಯ ವೀರಶೈವ ಲಿಂಗಾಯತ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಪವಾಡಶ್ರೀ ಬಸವಣ್ಣದೇವರ ಮಠ, ಹಾಗೂ ಬಸವ ಭಾರತ ಪ್ರತಿಷ್ಠಾನ ಪವಾಡಶ್ರೀ ಬಸವಣ್ಣ ದೇವರ ಮಠ ನೆಲಮಂಗಲ ಸಹಯೋಗದಲ್ಲಿ ತಾಲೂಕಿನ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವೀರಶೈವ ಲಿಂಗಾಯಿತ ಮಕ್ಕಳಿಗೆ ಲೇಖನ ಸಾಮಗ್ರಿ ಮತ್ತು ನೋಟ್ ಪುಸ್ತಕ ವಿತರಣಾ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅನ್ನ ಕ್ಷಣಿಕ ತೃಪ್ತಿ ನೀಡಿದರೆ , ಶಿಕ್ಷಣ ಬಳಸಿದಷ್ಟು ಹೆಚ್ಚು ಜ್ಞಾನ ನೀಡುತ್ತದೆ. ವಿದ್ಯಾರ್ಥಿಗಳ ಕಲಿಕೆಗೆ ೫ ಮಾತ್ರೆಗಳು ಅವಶ್ಯಕ ಬೆಳಿಗ್ಗೆ ಬೇಗನೇ ಏಳುವುದು, ಪ್ರತಿದಿನ 15 ನಿಮಿಷ ಧ್ಯಾನ, ಕಲಿಕೆಯೊಂದಿಗೆ ತಂದೆತಾಯಿಗೆ ನೆರವಾಗುವುದು. ಓದಿರುವ ವಿಷಯದ ಪ್ರಮುಖ ವಿಷಯಗಳನ್ನು ಬರೆದಿಡುವುದು, ಪರೀಕ್ಷೆ ದಿನ ಓದುವುದಲ್ಲ ಪ್ರತಿದಿನ ಓದುವಾಗ ತಿಳಿದ ವಿಷಯಗಳನ್ನು ಶಿಕ್ಷಕರಿಂದ ಮಾಹಿತಿ ಪಡೆಯುವುದು ಇವು 5 ಪ್ರಮುಖ ಮಾತ್ರೆಗಳಾಗಿವೆ. ಈ ಮೂಲಕ ಶೈಕ್ಷಣಿಕ ದೊಡ್ಡ ಸಾಧನೆ ಮಾಡಬಹುದು ಎಂದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…