ಪುಸ್ತಕ ವಿತರಣೆ ಕಾರ್ಯಕ್ರಮ ಹೆಸರಿಗೋಸ್ಕರ ಮಾಡುತ್ತಿರುವ ಕಾರ್ಯಕ್ರಮವಲ್ಲ. ಈ ರೀತಿ ಪ್ರತಿ ವರ್ಷ ಪುಸ್ತಕ ನೀಡಲಾಗುತ್ತದೆ. ದಸರಾ ರಜಾದ ವೇಳೆ ಈ ಭಾಗದ ಸುತ್ತಮುತ್ತಲಿನ ಮಠಗಳಿಗೆ ಮಕ್ಕಳನ್ನು ಕರೆದೊಯ್ದು ಮಠಗಳ ಪರಿಚಯ ಮಾಡಿಕೊಡಲಾಗುತ್ತದೆ. ಸರ್ಕಾರಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮುಂದಿನ ಓದಿಗೆ ಉಚಿತ ದಾಖಲಾತಿ ನೀಡಲಾಗುತ್ತದೆ. ಈ ಪುಸ್ತಕಗಳನ್ನು ಸರಿಯಾಗಿ ಉಪಯೋಗಿಸುವ ಮೂಲಕ ಶಿಕ್ಷಣದಲ್ಲಿ ಸಾಧನೆ ಮಾಡಬೇಕು ಪವಾಡಶ್ರೀ ಬಸವಣ್ಣ ಮಠದ ಶ್ರೀಸಿದ್ದಲಿಂಗಸ್ವಾಮಿ ಹೇಳಿದರು.
ನಗರದ ಬಸವ ಭವನದಲ್ಲಿ ಭಾನುವಾರ ರಾಜ್ಯ ವೀರಶೈವ ಲಿಂಗಾಯತ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಪವಾಡಶ್ರೀ ಬಸವಣ್ಣದೇವರ ಮಠ, ಹಾಗೂ ಬಸವ ಭಾರತ ಪ್ರತಿಷ್ಠಾನ ಪವಾಡಶ್ರೀ ಬಸವಣ್ಣ ದೇವರ ಮಠ ನೆಲಮಂಗಲ ಸಹಯೋಗದಲ್ಲಿ ತಾಲೂಕಿನ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವೀರಶೈವ ಲಿಂಗಾಯಿತ ಮಕ್ಕಳಿಗೆ ಲೇಖನ ಸಾಮಗ್ರಿ ಮತ್ತು ನೋಟ್ ಪುಸ್ತಕ ವಿತರಣಾ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅನ್ನ ಕ್ಷಣಿಕ ತೃಪ್ತಿ ನೀಡಿದರೆ , ಶಿಕ್ಷಣ ಬಳಸಿದಷ್ಟು ಹೆಚ್ಚು ಜ್ಞಾನ ನೀಡುತ್ತದೆ. ವಿದ್ಯಾರ್ಥಿಗಳ ಕಲಿಕೆಗೆ ೫ ಮಾತ್ರೆಗಳು ಅವಶ್ಯಕ ಬೆಳಿಗ್ಗೆ ಬೇಗನೇ ಏಳುವುದು, ಪ್ರತಿದಿನ 15 ನಿಮಿಷ ಧ್ಯಾನ, ಕಲಿಕೆಯೊಂದಿಗೆ ತಂದೆತಾಯಿಗೆ ನೆರವಾಗುವುದು. ಓದಿರುವ ವಿಷಯದ ಪ್ರಮುಖ ವಿಷಯಗಳನ್ನು ಬರೆದಿಡುವುದು, ಪರೀಕ್ಷೆ ದಿನ ಓದುವುದಲ್ಲ ಪ್ರತಿದಿನ ಓದುವಾಗ ತಿಳಿದ ವಿಷಯಗಳನ್ನು ಶಿಕ್ಷಕರಿಂದ ಮಾಹಿತಿ ಪಡೆಯುವುದು ಇವು 5 ಪ್ರಮುಖ ಮಾತ್ರೆಗಳಾಗಿವೆ. ಈ ಮೂಲಕ ಶೈಕ್ಷಣಿಕ ದೊಡ್ಡ ಸಾಧನೆ ಮಾಡಬಹುದು ಎಂದರು.
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…