ಪುಸ್ತಕ ವಿತರಣೆ ಕಾರ್ಯಕ್ರಮ ಹೆಸರಿಗೋಸ್ಕರ ಮಾಡುತ್ತಿರುವ ಕಾರ್ಯಕ್ರಮವಲ್ಲ. ಈ ರೀತಿ ಪ್ರತಿ ವರ್ಷ ಪುಸ್ತಕ ನೀಡಲಾಗುತ್ತದೆ. ದಸರಾ ರಜಾದ ವೇಳೆ ಈ ಭಾಗದ ಸುತ್ತಮುತ್ತಲಿನ ಮಠಗಳಿಗೆ ಮಕ್ಕಳನ್ನು ಕರೆದೊಯ್ದು ಮಠಗಳ ಪರಿಚಯ ಮಾಡಿಕೊಡಲಾಗುತ್ತದೆ. ಸರ್ಕಾರಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮುಂದಿನ ಓದಿಗೆ ಉಚಿತ ದಾಖಲಾತಿ ನೀಡಲಾಗುತ್ತದೆ. ಈ ಪುಸ್ತಕಗಳನ್ನು ಸರಿಯಾಗಿ ಉಪಯೋಗಿಸುವ ಮೂಲಕ ಶಿಕ್ಷಣದಲ್ಲಿ ಸಾಧನೆ ಮಾಡಬೇಕು ಪವಾಡಶ್ರೀ ಬಸವಣ್ಣ ಮಠದ ಶ್ರೀಸಿದ್ದಲಿಂಗಸ್ವಾಮಿ ಹೇಳಿದರು.
ನಗರದ ಬಸವ ಭವನದಲ್ಲಿ ಭಾನುವಾರ ರಾಜ್ಯ ವೀರಶೈವ ಲಿಂಗಾಯತ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಪವಾಡಶ್ರೀ ಬಸವಣ್ಣದೇವರ ಮಠ, ಹಾಗೂ ಬಸವ ಭಾರತ ಪ್ರತಿಷ್ಠಾನ ಪವಾಡಶ್ರೀ ಬಸವಣ್ಣ ದೇವರ ಮಠ ನೆಲಮಂಗಲ ಸಹಯೋಗದಲ್ಲಿ ತಾಲೂಕಿನ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವೀರಶೈವ ಲಿಂಗಾಯಿತ ಮಕ್ಕಳಿಗೆ ಲೇಖನ ಸಾಮಗ್ರಿ ಮತ್ತು ನೋಟ್ ಪುಸ್ತಕ ವಿತರಣಾ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅನ್ನ ಕ್ಷಣಿಕ ತೃಪ್ತಿ ನೀಡಿದರೆ , ಶಿಕ್ಷಣ ಬಳಸಿದಷ್ಟು ಹೆಚ್ಚು ಜ್ಞಾನ ನೀಡುತ್ತದೆ. ವಿದ್ಯಾರ್ಥಿಗಳ ಕಲಿಕೆಗೆ ೫ ಮಾತ್ರೆಗಳು ಅವಶ್ಯಕ ಬೆಳಿಗ್ಗೆ ಬೇಗನೇ ಏಳುವುದು, ಪ್ರತಿದಿನ 15 ನಿಮಿಷ ಧ್ಯಾನ, ಕಲಿಕೆಯೊಂದಿಗೆ ತಂದೆತಾಯಿಗೆ ನೆರವಾಗುವುದು. ಓದಿರುವ ವಿಷಯದ ಪ್ರಮುಖ ವಿಷಯಗಳನ್ನು ಬರೆದಿಡುವುದು, ಪರೀಕ್ಷೆ ದಿನ ಓದುವುದಲ್ಲ ಪ್ರತಿದಿನ ಓದುವಾಗ ತಿಳಿದ ವಿಷಯಗಳನ್ನು ಶಿಕ್ಷಕರಿಂದ ಮಾಹಿತಿ ಪಡೆಯುವುದು ಇವು 5 ಪ್ರಮುಖ ಮಾತ್ರೆಗಳಾಗಿವೆ. ಈ ಮೂಲಕ ಶೈಕ್ಷಣಿಕ ದೊಡ್ಡ ಸಾಧನೆ ಮಾಡಬಹುದು ಎಂದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…