ಪುಸ್ತಕ ವಿತರಣೆ ಕಾರ್ಯಕ್ರಮ ಹೆಸರಿಗೋಸ್ಕರ ಮಾಡುತ್ತಿರುವ ಕಾರ್ಯಕ್ರಮವಲ್ಲ. ಈ ರೀತಿ ಪ್ರತಿ ವರ್ಷ ಪುಸ್ತಕ ನೀಡಲಾಗುತ್ತದೆ. ದಸರಾ ರಜಾದ ವೇಳೆ ಈ ಭಾಗದ ಸುತ್ತಮುತ್ತಲಿನ ಮಠಗಳಿಗೆ ಮಕ್ಕಳನ್ನು ಕರೆದೊಯ್ದು ಮಠಗಳ ಪರಿಚಯ ಮಾಡಿಕೊಡಲಾಗುತ್ತದೆ. ಸರ್ಕಾರಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮುಂದಿನ ಓದಿಗೆ ಉಚಿತ ದಾಖಲಾತಿ ನೀಡಲಾಗುತ್ತದೆ. ಈ ಪುಸ್ತಕಗಳನ್ನು ಸರಿಯಾಗಿ ಉಪಯೋಗಿಸುವ ಮೂಲಕ ಶಿಕ್ಷಣದಲ್ಲಿ ಸಾಧನೆ ಮಾಡಬೇಕು ಪವಾಡಶ್ರೀ ಬಸವಣ್ಣ ಮಠದ ಶ್ರೀಸಿದ್ದಲಿಂಗಸ್ವಾಮಿ ಹೇಳಿದರು.
ನಗರದ ಬಸವ ಭವನದಲ್ಲಿ ಭಾನುವಾರ ರಾಜ್ಯ ವೀರಶೈವ ಲಿಂಗಾಯತ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಪವಾಡಶ್ರೀ ಬಸವಣ್ಣದೇವರ ಮಠ, ಹಾಗೂ ಬಸವ ಭಾರತ ಪ್ರತಿಷ್ಠಾನ ಪವಾಡಶ್ರೀ ಬಸವಣ್ಣ ದೇವರ ಮಠ ನೆಲಮಂಗಲ ಸಹಯೋಗದಲ್ಲಿ ತಾಲೂಕಿನ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವೀರಶೈವ ಲಿಂಗಾಯಿತ ಮಕ್ಕಳಿಗೆ ಲೇಖನ ಸಾಮಗ್ರಿ ಮತ್ತು ನೋಟ್ ಪುಸ್ತಕ ವಿತರಣಾ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅನ್ನ ಕ್ಷಣಿಕ ತೃಪ್ತಿ ನೀಡಿದರೆ , ಶಿಕ್ಷಣ ಬಳಸಿದಷ್ಟು ಹೆಚ್ಚು ಜ್ಞಾನ ನೀಡುತ್ತದೆ. ವಿದ್ಯಾರ್ಥಿಗಳ ಕಲಿಕೆಗೆ ೫ ಮಾತ್ರೆಗಳು ಅವಶ್ಯಕ ಬೆಳಿಗ್ಗೆ ಬೇಗನೇ ಏಳುವುದು, ಪ್ರತಿದಿನ 15 ನಿಮಿಷ ಧ್ಯಾನ, ಕಲಿಕೆಯೊಂದಿಗೆ ತಂದೆತಾಯಿಗೆ ನೆರವಾಗುವುದು. ಓದಿರುವ ವಿಷಯದ ಪ್ರಮುಖ ವಿಷಯಗಳನ್ನು ಬರೆದಿಡುವುದು, ಪರೀಕ್ಷೆ ದಿನ ಓದುವುದಲ್ಲ ಪ್ರತಿದಿನ ಓದುವಾಗ ತಿಳಿದ ವಿಷಯಗಳನ್ನು ಶಿಕ್ಷಕರಿಂದ ಮಾಹಿತಿ ಪಡೆಯುವುದು ಇವು 5 ಪ್ರಮುಖ ಮಾತ್ರೆಗಳಾಗಿವೆ. ಈ ಮೂಲಕ ಶೈಕ್ಷಣಿಕ ದೊಡ್ಡ ಸಾಧನೆ ಮಾಡಬಹುದು ಎಂದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…