Categories: ಕೋಲಾರ

ವಿದ್ಯಾರ್ಥಿಗಳು ತಂದೆ-ತಾಯಿ, ಗುರುಗಳ ಮಾರ್ಗದರ್ಶನದಲ್ಲಿ ಯಶಸ್ಸು ಕಾಣಬೇಕು: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ವಿದ್ಯಾರ್ಥಿಗಳು ತಂದೆ-ತಾಯಿಯರನ್ನು ಮತ್ತು ವಿದ್ಯೆ ಬುದ್ದಿ ಕಲಿಸಿದ ಗುರುಗಳ ಮಾರ್ಗದರ್ಶನದಲ್ಲಿ ನಡೆದರೆ ಮಾತ್ರವೇ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು

ನಗರದ ಹೊರವಲಯದ ಸಮೈಖ್ಯ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಕಾಲೇಜು ವಾರ್ಷಿಕೋತ್ಸವವನ್ನು ಉದ್ಘಾಟಿಸಿ
ಮಾತನಾಡಿದ ಅವರು, ಜೀವನದಲ್ಲಿ ಪ್ರತಿಯೊಬ್ಬರಿಗೂ ವಿದ್ಯೆ ಮತ್ತು ಉದ್ಯೋಗ ಎಂಬುದು ಬಹುಮುಖ್ಯವಾಗಿದೆ, ಅದನ್ನು ಪಡೆಯಲು ಸತತ ಪ್ರಯತ್ನ ಹಾಗೂ ಕಷ್ಟಪಟ್ಟಾಗ ಮಾತ್ರವೇ ಪಡೆಯಲು ಸಾಧ್ಯ ಅದನ್ನು ಪಡೆಯಲು ಓದಿನ ಪ್ರಾರಂಭದಲ್ಲಿಯೇ ಗುರಿ ಇಟ್ಟುಕೊಂಡು ಸಾಧಿಸಲು ಮುಂದಾಗಬೇಕು ಅನಿಟ್ಟಿನಲ್ಲಿ ಪ್ರತಿಯೊಬ್ಬರೂ ಆಲೋಚನೆಗಳು ಗುರಿ ಸಾಧನೆ ಕಡೆ ಇರಬೇಕು ಎಂದರು.

ವಿದ್ಯಾರ್ಥಿಗಳಾದವರು ಓದಿನಲ್ಲಿ ಯಾವಾಗಲೂ ಮುಂದೆ ಇರಬೇಕು. ನಮ್ಮಲ್ಲಿನ ಆತ್ಮಸ್ಥೆರ್ಯ ಹಾಗೂ ಛಲದಿಂದ ಪ್ರತಿಯೊಂದು ವಿಷಯದಲ್ಲಿ ಅಧ್ಯಯನ ಮಾಡಬೇಕು. ನೀವು ಮನಸ್ಸು ಮಾಡಿದರೆ ಎಂತಹ ಸಾಧನೆ ಬೇಕಾದರೂ ಮಾಡಬಹುದು ಎಂಬುದನ್ನು ತನ್ನಲ್ಲಿಯೇ ಅರ್ಥ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿರುವ ಅನೇಕ ಸಾಹಿತಿಗಳು ಸೇರಿದಂತೆ ಐಎಎಸ್, ಐಪಿಎಸ್ ಅಧಿಕಾರಿಗಳು ಸ್ಪೂರ್ತಿದಾಯಕವಾಗಬೇಕು. ಪೋಷಕರು ಮತ್ತು ಗುರುಗಳು ವಿಧ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಧೈರ್ಯ, ಶೌರ್ಯ, ಸಾಹಸ ಗುಣಗಳನ್ನು ಬೆಳೆಸುವಲ್ಲಿ ಪ್ರಯತ್ನಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಪ್ರತಿಯೊಂದು ಹಂತದಲ್ಲೂ ಗುರಿ ಇಟ್ಟುಕೊಂಡು ಬಂದರೆ ಮಾತ್ರವೇ ಉತ್ತಮ ತೀರ್ಮಾನಗಳನ್ನು ತೆಗೆದುಕೊಂಡು ಉತ್ತಮ ಪ್ರಜೆಗಳಾಗಲು ಸಾಧ್ಯ ತಂದೆ ತಾಯಿಗಳು ನಿಮ್ಮಗಳ ಮಧ್ಯೆ ಕನಸು ಕಾಣುತ್ತಾ ಇದ್ದು ಕನಸು ನನಸು ಮಾಡಲು ನೀವುಗಳು ಶ್ರಮಿಸಬೇಕು ವಿದ್ಯೆ, ಕ್ರೀಡೆ, ಸಾಹಿತ್ಯ, ಕಲೆ ಇದು ಒಬ್ಬರ ಸ್ವತ್ತು ಅಲ್ಲ ಎಲ್ಲರಿಗೂ ಸಿಗುತ್ತದೆ ಸದುಪಯೋಗ ಪಡಿಸಿಕೊಳ್ಳಬೇಕು ಸಮಯ ಸಿಕ್ಕಾಗ ಯಾವುದು ಮಾಡಬೇಕು ಎಂಬುದನ್ನು ತಿಳಿದು ಸಾಧನೆ ಮಾಡಿ ಸಾಧಕರಾಗಬೇಕು ಎಂದರು.

ವಿದ್ಯಾರ್ಥಿಗಳ ಜೀವನವೇ ದೇಶದ ಭವಿಷ್ಯವನ್ನು ಸೂಚಿಸುತ್ತದೆ ಎಚ್ಚರಿಕೆಯಿಂದ ದೇಶದ ಮತ್ತು ತಮ್ಮ ಭವಿಷ್ಯವನ್ನು ರೂಪಿಸಬೇಕಾಗಿದೆ ಪ್ರತಿಯೊಂದು ಕ್ಷೇತ್ರದಲ್ಲಿ ಅವಕಾಶಗಳು ಇವೆ ಸಮಾಜ ಕಟ್ಟುವ ಪ್ರಮುಖ ಪಾತ್ರವನ್ನು ವಹಿಸಬೇಕು ಜಿಲ್ಲೆಯ ರಾಜ್ಯದ ಕೀರ್ತಿ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ಹಾರೈಸಿದರು

ಈ ಸಂದರ್ಭದಲ್ಲಿ ಸಮೈಖ್ಯ ಕಾಲೇಜಿನ ಅಧ್ಯಕ್ಷ ರಮೇಶ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರಸಭೆ ಸದಸ್ಯ ಶಫಿ ಅಫ್ಸರ್, ವಿಜಯನಗರ ಮಂಜುನಾಥ್, ಕಾಲೇಜಿನ ಕಾರ್ಯದರ್ಶಿ ಸುಬ್ರಮಣಿ, ಹರಿನಾಥ್ ರಾವ್, ಸುಜಯ್ ಗೌಡ, ಶ್ರೀನಿವಾಸ್, ಮುಂತಾದವರು ಇದ್ದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

2 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

4 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

7 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

12 hours ago

ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…

23 hours ago

40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…

1 day ago