Categories: ಕೋಲಾರ

ವಿದ್ಯಾರ್ಥಿಗಳು ತಂದೆ-ತಾಯಿ, ಗುರುಗಳ ಮಾರ್ಗದರ್ಶನದಲ್ಲಿ ಯಶಸ್ಸು ಕಾಣಬೇಕು: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ವಿದ್ಯಾರ್ಥಿಗಳು ತಂದೆ-ತಾಯಿಯರನ್ನು ಮತ್ತು ವಿದ್ಯೆ ಬುದ್ದಿ ಕಲಿಸಿದ ಗುರುಗಳ ಮಾರ್ಗದರ್ಶನದಲ್ಲಿ ನಡೆದರೆ ಮಾತ್ರವೇ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು

ನಗರದ ಹೊರವಲಯದ ಸಮೈಖ್ಯ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಕಾಲೇಜು ವಾರ್ಷಿಕೋತ್ಸವವನ್ನು ಉದ್ಘಾಟಿಸಿ
ಮಾತನಾಡಿದ ಅವರು, ಜೀವನದಲ್ಲಿ ಪ್ರತಿಯೊಬ್ಬರಿಗೂ ವಿದ್ಯೆ ಮತ್ತು ಉದ್ಯೋಗ ಎಂಬುದು ಬಹುಮುಖ್ಯವಾಗಿದೆ, ಅದನ್ನು ಪಡೆಯಲು ಸತತ ಪ್ರಯತ್ನ ಹಾಗೂ ಕಷ್ಟಪಟ್ಟಾಗ ಮಾತ್ರವೇ ಪಡೆಯಲು ಸಾಧ್ಯ ಅದನ್ನು ಪಡೆಯಲು ಓದಿನ ಪ್ರಾರಂಭದಲ್ಲಿಯೇ ಗುರಿ ಇಟ್ಟುಕೊಂಡು ಸಾಧಿಸಲು ಮುಂದಾಗಬೇಕು ಅನಿಟ್ಟಿನಲ್ಲಿ ಪ್ರತಿಯೊಬ್ಬರೂ ಆಲೋಚನೆಗಳು ಗುರಿ ಸಾಧನೆ ಕಡೆ ಇರಬೇಕು ಎಂದರು.

ವಿದ್ಯಾರ್ಥಿಗಳಾದವರು ಓದಿನಲ್ಲಿ ಯಾವಾಗಲೂ ಮುಂದೆ ಇರಬೇಕು. ನಮ್ಮಲ್ಲಿನ ಆತ್ಮಸ್ಥೆರ್ಯ ಹಾಗೂ ಛಲದಿಂದ ಪ್ರತಿಯೊಂದು ವಿಷಯದಲ್ಲಿ ಅಧ್ಯಯನ ಮಾಡಬೇಕು. ನೀವು ಮನಸ್ಸು ಮಾಡಿದರೆ ಎಂತಹ ಸಾಧನೆ ಬೇಕಾದರೂ ಮಾಡಬಹುದು ಎಂಬುದನ್ನು ತನ್ನಲ್ಲಿಯೇ ಅರ್ಥ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿರುವ ಅನೇಕ ಸಾಹಿತಿಗಳು ಸೇರಿದಂತೆ ಐಎಎಸ್, ಐಪಿಎಸ್ ಅಧಿಕಾರಿಗಳು ಸ್ಪೂರ್ತಿದಾಯಕವಾಗಬೇಕು. ಪೋಷಕರು ಮತ್ತು ಗುರುಗಳು ವಿಧ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಧೈರ್ಯ, ಶೌರ್ಯ, ಸಾಹಸ ಗುಣಗಳನ್ನು ಬೆಳೆಸುವಲ್ಲಿ ಪ್ರಯತ್ನಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಪ್ರತಿಯೊಂದು ಹಂತದಲ್ಲೂ ಗುರಿ ಇಟ್ಟುಕೊಂಡು ಬಂದರೆ ಮಾತ್ರವೇ ಉತ್ತಮ ತೀರ್ಮಾನಗಳನ್ನು ತೆಗೆದುಕೊಂಡು ಉತ್ತಮ ಪ್ರಜೆಗಳಾಗಲು ಸಾಧ್ಯ ತಂದೆ ತಾಯಿಗಳು ನಿಮ್ಮಗಳ ಮಧ್ಯೆ ಕನಸು ಕಾಣುತ್ತಾ ಇದ್ದು ಕನಸು ನನಸು ಮಾಡಲು ನೀವುಗಳು ಶ್ರಮಿಸಬೇಕು ವಿದ್ಯೆ, ಕ್ರೀಡೆ, ಸಾಹಿತ್ಯ, ಕಲೆ ಇದು ಒಬ್ಬರ ಸ್ವತ್ತು ಅಲ್ಲ ಎಲ್ಲರಿಗೂ ಸಿಗುತ್ತದೆ ಸದುಪಯೋಗ ಪಡಿಸಿಕೊಳ್ಳಬೇಕು ಸಮಯ ಸಿಕ್ಕಾಗ ಯಾವುದು ಮಾಡಬೇಕು ಎಂಬುದನ್ನು ತಿಳಿದು ಸಾಧನೆ ಮಾಡಿ ಸಾಧಕರಾಗಬೇಕು ಎಂದರು.

ವಿದ್ಯಾರ್ಥಿಗಳ ಜೀವನವೇ ದೇಶದ ಭವಿಷ್ಯವನ್ನು ಸೂಚಿಸುತ್ತದೆ ಎಚ್ಚರಿಕೆಯಿಂದ ದೇಶದ ಮತ್ತು ತಮ್ಮ ಭವಿಷ್ಯವನ್ನು ರೂಪಿಸಬೇಕಾಗಿದೆ ಪ್ರತಿಯೊಂದು ಕ್ಷೇತ್ರದಲ್ಲಿ ಅವಕಾಶಗಳು ಇವೆ ಸಮಾಜ ಕಟ್ಟುವ ಪ್ರಮುಖ ಪಾತ್ರವನ್ನು ವಹಿಸಬೇಕು ಜಿಲ್ಲೆಯ ರಾಜ್ಯದ ಕೀರ್ತಿ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ಹಾರೈಸಿದರು

ಈ ಸಂದರ್ಭದಲ್ಲಿ ಸಮೈಖ್ಯ ಕಾಲೇಜಿನ ಅಧ್ಯಕ್ಷ ರಮೇಶ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರಸಭೆ ಸದಸ್ಯ ಶಫಿ ಅಫ್ಸರ್, ವಿಜಯನಗರ ಮಂಜುನಾಥ್, ಕಾಲೇಜಿನ ಕಾರ್ಯದರ್ಶಿ ಸುಬ್ರಮಣಿ, ಹರಿನಾಥ್ ರಾವ್, ಸುಜಯ್ ಗೌಡ, ಶ್ರೀನಿವಾಸ್, ಮುಂತಾದವರು ಇದ್ದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

13 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

14 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

20 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

21 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

2 days ago