Categories: ಕೋಲಾರ

ವಿದ್ಯಾರ್ಥಿಗಳು ತಂದೆ-ತಾಯಿ, ಗುರುಗಳ ಮಾರ್ಗದರ್ಶನದಲ್ಲಿ ಯಶಸ್ಸು ಕಾಣಬೇಕು: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ವಿದ್ಯಾರ್ಥಿಗಳು ತಂದೆ-ತಾಯಿಯರನ್ನು ಮತ್ತು ವಿದ್ಯೆ ಬುದ್ದಿ ಕಲಿಸಿದ ಗುರುಗಳ ಮಾರ್ಗದರ್ಶನದಲ್ಲಿ ನಡೆದರೆ ಮಾತ್ರವೇ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು

ನಗರದ ಹೊರವಲಯದ ಸಮೈಖ್ಯ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಕಾಲೇಜು ವಾರ್ಷಿಕೋತ್ಸವವನ್ನು ಉದ್ಘಾಟಿಸಿ
ಮಾತನಾಡಿದ ಅವರು, ಜೀವನದಲ್ಲಿ ಪ್ರತಿಯೊಬ್ಬರಿಗೂ ವಿದ್ಯೆ ಮತ್ತು ಉದ್ಯೋಗ ಎಂಬುದು ಬಹುಮುಖ್ಯವಾಗಿದೆ, ಅದನ್ನು ಪಡೆಯಲು ಸತತ ಪ್ರಯತ್ನ ಹಾಗೂ ಕಷ್ಟಪಟ್ಟಾಗ ಮಾತ್ರವೇ ಪಡೆಯಲು ಸಾಧ್ಯ ಅದನ್ನು ಪಡೆಯಲು ಓದಿನ ಪ್ರಾರಂಭದಲ್ಲಿಯೇ ಗುರಿ ಇಟ್ಟುಕೊಂಡು ಸಾಧಿಸಲು ಮುಂದಾಗಬೇಕು ಅನಿಟ್ಟಿನಲ್ಲಿ ಪ್ರತಿಯೊಬ್ಬರೂ ಆಲೋಚನೆಗಳು ಗುರಿ ಸಾಧನೆ ಕಡೆ ಇರಬೇಕು ಎಂದರು.

ವಿದ್ಯಾರ್ಥಿಗಳಾದವರು ಓದಿನಲ್ಲಿ ಯಾವಾಗಲೂ ಮುಂದೆ ಇರಬೇಕು. ನಮ್ಮಲ್ಲಿನ ಆತ್ಮಸ್ಥೆರ್ಯ ಹಾಗೂ ಛಲದಿಂದ ಪ್ರತಿಯೊಂದು ವಿಷಯದಲ್ಲಿ ಅಧ್ಯಯನ ಮಾಡಬೇಕು. ನೀವು ಮನಸ್ಸು ಮಾಡಿದರೆ ಎಂತಹ ಸಾಧನೆ ಬೇಕಾದರೂ ಮಾಡಬಹುದು ಎಂಬುದನ್ನು ತನ್ನಲ್ಲಿಯೇ ಅರ್ಥ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿರುವ ಅನೇಕ ಸಾಹಿತಿಗಳು ಸೇರಿದಂತೆ ಐಎಎಸ್, ಐಪಿಎಸ್ ಅಧಿಕಾರಿಗಳು ಸ್ಪೂರ್ತಿದಾಯಕವಾಗಬೇಕು. ಪೋಷಕರು ಮತ್ತು ಗುರುಗಳು ವಿಧ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಧೈರ್ಯ, ಶೌರ್ಯ, ಸಾಹಸ ಗುಣಗಳನ್ನು ಬೆಳೆಸುವಲ್ಲಿ ಪ್ರಯತ್ನಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಪ್ರತಿಯೊಂದು ಹಂತದಲ್ಲೂ ಗುರಿ ಇಟ್ಟುಕೊಂಡು ಬಂದರೆ ಮಾತ್ರವೇ ಉತ್ತಮ ತೀರ್ಮಾನಗಳನ್ನು ತೆಗೆದುಕೊಂಡು ಉತ್ತಮ ಪ್ರಜೆಗಳಾಗಲು ಸಾಧ್ಯ ತಂದೆ ತಾಯಿಗಳು ನಿಮ್ಮಗಳ ಮಧ್ಯೆ ಕನಸು ಕಾಣುತ್ತಾ ಇದ್ದು ಕನಸು ನನಸು ಮಾಡಲು ನೀವುಗಳು ಶ್ರಮಿಸಬೇಕು ವಿದ್ಯೆ, ಕ್ರೀಡೆ, ಸಾಹಿತ್ಯ, ಕಲೆ ಇದು ಒಬ್ಬರ ಸ್ವತ್ತು ಅಲ್ಲ ಎಲ್ಲರಿಗೂ ಸಿಗುತ್ತದೆ ಸದುಪಯೋಗ ಪಡಿಸಿಕೊಳ್ಳಬೇಕು ಸಮಯ ಸಿಕ್ಕಾಗ ಯಾವುದು ಮಾಡಬೇಕು ಎಂಬುದನ್ನು ತಿಳಿದು ಸಾಧನೆ ಮಾಡಿ ಸಾಧಕರಾಗಬೇಕು ಎಂದರು.

ವಿದ್ಯಾರ್ಥಿಗಳ ಜೀವನವೇ ದೇಶದ ಭವಿಷ್ಯವನ್ನು ಸೂಚಿಸುತ್ತದೆ ಎಚ್ಚರಿಕೆಯಿಂದ ದೇಶದ ಮತ್ತು ತಮ್ಮ ಭವಿಷ್ಯವನ್ನು ರೂಪಿಸಬೇಕಾಗಿದೆ ಪ್ರತಿಯೊಂದು ಕ್ಷೇತ್ರದಲ್ಲಿ ಅವಕಾಶಗಳು ಇವೆ ಸಮಾಜ ಕಟ್ಟುವ ಪ್ರಮುಖ ಪಾತ್ರವನ್ನು ವಹಿಸಬೇಕು ಜಿಲ್ಲೆಯ ರಾಜ್ಯದ ಕೀರ್ತಿ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ಹಾರೈಸಿದರು

ಈ ಸಂದರ್ಭದಲ್ಲಿ ಸಮೈಖ್ಯ ಕಾಲೇಜಿನ ಅಧ್ಯಕ್ಷ ರಮೇಶ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರಸಭೆ ಸದಸ್ಯ ಶಫಿ ಅಫ್ಸರ್, ವಿಜಯನಗರ ಮಂಜುನಾಥ್, ಕಾಲೇಜಿನ ಕಾರ್ಯದರ್ಶಿ ಸುಬ್ರಮಣಿ, ಹರಿನಾಥ್ ರಾವ್, ಸುಜಯ್ ಗೌಡ, ಶ್ರೀನಿವಾಸ್, ಮುಂತಾದವರು ಇದ್ದರು.

Ramesh Babu

Journalist

Recent Posts

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

1 hour ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

12 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

13 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

15 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

23 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago