Categories: ಕೋಲಾರ

ವಿದ್ಯಾರ್ಥಿಗಳು ತಂದೆ-ತಾಯಿ, ಗುರುಗಳ ಮಾರ್ಗದರ್ಶನದಲ್ಲಿ ಯಶಸ್ಸು ಕಾಣಬೇಕು: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ವಿದ್ಯಾರ್ಥಿಗಳು ತಂದೆ-ತಾಯಿಯರನ್ನು ಮತ್ತು ವಿದ್ಯೆ ಬುದ್ದಿ ಕಲಿಸಿದ ಗುರುಗಳ ಮಾರ್ಗದರ್ಶನದಲ್ಲಿ ನಡೆದರೆ ಮಾತ್ರವೇ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು

ನಗರದ ಹೊರವಲಯದ ಸಮೈಖ್ಯ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಕಾಲೇಜು ವಾರ್ಷಿಕೋತ್ಸವವನ್ನು ಉದ್ಘಾಟಿಸಿ
ಮಾತನಾಡಿದ ಅವರು, ಜೀವನದಲ್ಲಿ ಪ್ರತಿಯೊಬ್ಬರಿಗೂ ವಿದ್ಯೆ ಮತ್ತು ಉದ್ಯೋಗ ಎಂಬುದು ಬಹುಮುಖ್ಯವಾಗಿದೆ, ಅದನ್ನು ಪಡೆಯಲು ಸತತ ಪ್ರಯತ್ನ ಹಾಗೂ ಕಷ್ಟಪಟ್ಟಾಗ ಮಾತ್ರವೇ ಪಡೆಯಲು ಸಾಧ್ಯ ಅದನ್ನು ಪಡೆಯಲು ಓದಿನ ಪ್ರಾರಂಭದಲ್ಲಿಯೇ ಗುರಿ ಇಟ್ಟುಕೊಂಡು ಸಾಧಿಸಲು ಮುಂದಾಗಬೇಕು ಅನಿಟ್ಟಿನಲ್ಲಿ ಪ್ರತಿಯೊಬ್ಬರೂ ಆಲೋಚನೆಗಳು ಗುರಿ ಸಾಧನೆ ಕಡೆ ಇರಬೇಕು ಎಂದರು.

ವಿದ್ಯಾರ್ಥಿಗಳಾದವರು ಓದಿನಲ್ಲಿ ಯಾವಾಗಲೂ ಮುಂದೆ ಇರಬೇಕು. ನಮ್ಮಲ್ಲಿನ ಆತ್ಮಸ್ಥೆರ್ಯ ಹಾಗೂ ಛಲದಿಂದ ಪ್ರತಿಯೊಂದು ವಿಷಯದಲ್ಲಿ ಅಧ್ಯಯನ ಮಾಡಬೇಕು. ನೀವು ಮನಸ್ಸು ಮಾಡಿದರೆ ಎಂತಹ ಸಾಧನೆ ಬೇಕಾದರೂ ಮಾಡಬಹುದು ಎಂಬುದನ್ನು ತನ್ನಲ್ಲಿಯೇ ಅರ್ಥ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿರುವ ಅನೇಕ ಸಾಹಿತಿಗಳು ಸೇರಿದಂತೆ ಐಎಎಸ್, ಐಪಿಎಸ್ ಅಧಿಕಾರಿಗಳು ಸ್ಪೂರ್ತಿದಾಯಕವಾಗಬೇಕು. ಪೋಷಕರು ಮತ್ತು ಗುರುಗಳು ವಿಧ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಧೈರ್ಯ, ಶೌರ್ಯ, ಸಾಹಸ ಗುಣಗಳನ್ನು ಬೆಳೆಸುವಲ್ಲಿ ಪ್ರಯತ್ನಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಪ್ರತಿಯೊಂದು ಹಂತದಲ್ಲೂ ಗುರಿ ಇಟ್ಟುಕೊಂಡು ಬಂದರೆ ಮಾತ್ರವೇ ಉತ್ತಮ ತೀರ್ಮಾನಗಳನ್ನು ತೆಗೆದುಕೊಂಡು ಉತ್ತಮ ಪ್ರಜೆಗಳಾಗಲು ಸಾಧ್ಯ ತಂದೆ ತಾಯಿಗಳು ನಿಮ್ಮಗಳ ಮಧ್ಯೆ ಕನಸು ಕಾಣುತ್ತಾ ಇದ್ದು ಕನಸು ನನಸು ಮಾಡಲು ನೀವುಗಳು ಶ್ರಮಿಸಬೇಕು ವಿದ್ಯೆ, ಕ್ರೀಡೆ, ಸಾಹಿತ್ಯ, ಕಲೆ ಇದು ಒಬ್ಬರ ಸ್ವತ್ತು ಅಲ್ಲ ಎಲ್ಲರಿಗೂ ಸಿಗುತ್ತದೆ ಸದುಪಯೋಗ ಪಡಿಸಿಕೊಳ್ಳಬೇಕು ಸಮಯ ಸಿಕ್ಕಾಗ ಯಾವುದು ಮಾಡಬೇಕು ಎಂಬುದನ್ನು ತಿಳಿದು ಸಾಧನೆ ಮಾಡಿ ಸಾಧಕರಾಗಬೇಕು ಎಂದರು.

ವಿದ್ಯಾರ್ಥಿಗಳ ಜೀವನವೇ ದೇಶದ ಭವಿಷ್ಯವನ್ನು ಸೂಚಿಸುತ್ತದೆ ಎಚ್ಚರಿಕೆಯಿಂದ ದೇಶದ ಮತ್ತು ತಮ್ಮ ಭವಿಷ್ಯವನ್ನು ರೂಪಿಸಬೇಕಾಗಿದೆ ಪ್ರತಿಯೊಂದು ಕ್ಷೇತ್ರದಲ್ಲಿ ಅವಕಾಶಗಳು ಇವೆ ಸಮಾಜ ಕಟ್ಟುವ ಪ್ರಮುಖ ಪಾತ್ರವನ್ನು ವಹಿಸಬೇಕು ಜಿಲ್ಲೆಯ ರಾಜ್ಯದ ಕೀರ್ತಿ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ಹಾರೈಸಿದರು

ಈ ಸಂದರ್ಭದಲ್ಲಿ ಸಮೈಖ್ಯ ಕಾಲೇಜಿನ ಅಧ್ಯಕ್ಷ ರಮೇಶ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರಸಭೆ ಸದಸ್ಯ ಶಫಿ ಅಫ್ಸರ್, ವಿಜಯನಗರ ಮಂಜುನಾಥ್, ಕಾಲೇಜಿನ ಕಾರ್ಯದರ್ಶಿ ಸುಬ್ರಮಣಿ, ಹರಿನಾಥ್ ರಾವ್, ಸುಜಯ್ ಗೌಡ, ಶ್ರೀನಿವಾಸ್, ಮುಂತಾದವರು ಇದ್ದರು.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

10 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

11 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

11 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

12 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

14 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

15 hours ago