ಕೋಲಾರ: ವಿದ್ಯಾರ್ಥಿಗಳು ತಂದೆ-ತಾಯಿಯರನ್ನು ಮತ್ತು ವಿದ್ಯೆ ಬುದ್ದಿ ಕಲಿಸಿದ ಗುರುಗಳ ಮಾರ್ಗದರ್ಶನದಲ್ಲಿ ನಡೆದರೆ ಮಾತ್ರವೇ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು
ನಗರದ ಹೊರವಲಯದ ಸಮೈಖ್ಯ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಕಾಲೇಜು ವಾರ್ಷಿಕೋತ್ಸವವನ್ನು ಉದ್ಘಾಟಿಸಿ
ಮಾತನಾಡಿದ ಅವರು, ಜೀವನದಲ್ಲಿ ಪ್ರತಿಯೊಬ್ಬರಿಗೂ ವಿದ್ಯೆ ಮತ್ತು ಉದ್ಯೋಗ ಎಂಬುದು ಬಹುಮುಖ್ಯವಾಗಿದೆ, ಅದನ್ನು ಪಡೆಯಲು ಸತತ ಪ್ರಯತ್ನ ಹಾಗೂ ಕಷ್ಟಪಟ್ಟಾಗ ಮಾತ್ರವೇ ಪಡೆಯಲು ಸಾಧ್ಯ ಅದನ್ನು ಪಡೆಯಲು ಓದಿನ ಪ್ರಾರಂಭದಲ್ಲಿಯೇ ಗುರಿ ಇಟ್ಟುಕೊಂಡು ಸಾಧಿಸಲು ಮುಂದಾಗಬೇಕು ಅನಿಟ್ಟಿನಲ್ಲಿ ಪ್ರತಿಯೊಬ್ಬರೂ ಆಲೋಚನೆಗಳು ಗುರಿ ಸಾಧನೆ ಕಡೆ ಇರಬೇಕು ಎಂದರು.
ವಿದ್ಯಾರ್ಥಿಗಳಾದವರು ಓದಿನಲ್ಲಿ ಯಾವಾಗಲೂ ಮುಂದೆ ಇರಬೇಕು. ನಮ್ಮಲ್ಲಿನ ಆತ್ಮಸ್ಥೆರ್ಯ ಹಾಗೂ ಛಲದಿಂದ ಪ್ರತಿಯೊಂದು ವಿಷಯದಲ್ಲಿ ಅಧ್ಯಯನ ಮಾಡಬೇಕು. ನೀವು ಮನಸ್ಸು ಮಾಡಿದರೆ ಎಂತಹ ಸಾಧನೆ ಬೇಕಾದರೂ ಮಾಡಬಹುದು ಎಂಬುದನ್ನು ತನ್ನಲ್ಲಿಯೇ ಅರ್ಥ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿರುವ ಅನೇಕ ಸಾಹಿತಿಗಳು ಸೇರಿದಂತೆ ಐಎಎಸ್, ಐಪಿಎಸ್ ಅಧಿಕಾರಿಗಳು ಸ್ಪೂರ್ತಿದಾಯಕವಾಗಬೇಕು. ಪೋಷಕರು ಮತ್ತು ಗುರುಗಳು ವಿಧ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಧೈರ್ಯ, ಶೌರ್ಯ, ಸಾಹಸ ಗುಣಗಳನ್ನು ಬೆಳೆಸುವಲ್ಲಿ ಪ್ರಯತ್ನಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಪ್ರತಿಯೊಂದು ಹಂತದಲ್ಲೂ ಗುರಿ ಇಟ್ಟುಕೊಂಡು ಬಂದರೆ ಮಾತ್ರವೇ ಉತ್ತಮ ತೀರ್ಮಾನಗಳನ್ನು ತೆಗೆದುಕೊಂಡು ಉತ್ತಮ ಪ್ರಜೆಗಳಾಗಲು ಸಾಧ್ಯ ತಂದೆ ತಾಯಿಗಳು ನಿಮ್ಮಗಳ ಮಧ್ಯೆ ಕನಸು ಕಾಣುತ್ತಾ ಇದ್ದು ಕನಸು ನನಸು ಮಾಡಲು ನೀವುಗಳು ಶ್ರಮಿಸಬೇಕು ವಿದ್ಯೆ, ಕ್ರೀಡೆ, ಸಾಹಿತ್ಯ, ಕಲೆ ಇದು ಒಬ್ಬರ ಸ್ವತ್ತು ಅಲ್ಲ ಎಲ್ಲರಿಗೂ ಸಿಗುತ್ತದೆ ಸದುಪಯೋಗ ಪಡಿಸಿಕೊಳ್ಳಬೇಕು ಸಮಯ ಸಿಕ್ಕಾಗ ಯಾವುದು ಮಾಡಬೇಕು ಎಂಬುದನ್ನು ತಿಳಿದು ಸಾಧನೆ ಮಾಡಿ ಸಾಧಕರಾಗಬೇಕು ಎಂದರು.
ವಿದ್ಯಾರ್ಥಿಗಳ ಜೀವನವೇ ದೇಶದ ಭವಿಷ್ಯವನ್ನು ಸೂಚಿಸುತ್ತದೆ ಎಚ್ಚರಿಕೆಯಿಂದ ದೇಶದ ಮತ್ತು ತಮ್ಮ ಭವಿಷ್ಯವನ್ನು ರೂಪಿಸಬೇಕಾಗಿದೆ ಪ್ರತಿಯೊಂದು ಕ್ಷೇತ್ರದಲ್ಲಿ ಅವಕಾಶಗಳು ಇವೆ ಸಮಾಜ ಕಟ್ಟುವ ಪ್ರಮುಖ ಪಾತ್ರವನ್ನು ವಹಿಸಬೇಕು ಜಿಲ್ಲೆಯ ರಾಜ್ಯದ ಕೀರ್ತಿ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ಹಾರೈಸಿದರು
ಈ ಸಂದರ್ಭದಲ್ಲಿ ಸಮೈಖ್ಯ ಕಾಲೇಜಿನ ಅಧ್ಯಕ್ಷ ರಮೇಶ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರಸಭೆ ಸದಸ್ಯ ಶಫಿ ಅಫ್ಸರ್, ವಿಜಯನಗರ ಮಂಜುನಾಥ್, ಕಾಲೇಜಿನ ಕಾರ್ಯದರ್ಶಿ ಸುಬ್ರಮಣಿ, ಹರಿನಾಥ್ ರಾವ್, ಸುಜಯ್ ಗೌಡ, ಶ್ರೀನಿವಾಸ್, ಮುಂತಾದವರು ಇದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…