Categories: ಕೋಲಾರ

ವಿದ್ಯಾರ್ಥಿಗಳು ತಂದೆ-ತಾಯಿ, ಗುರುಗಳ ಮಾರ್ಗದರ್ಶನದಲ್ಲಿ ಯಶಸ್ಸು ಕಾಣಬೇಕು: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ವಿದ್ಯಾರ್ಥಿಗಳು ತಂದೆ-ತಾಯಿಯರನ್ನು ಮತ್ತು ವಿದ್ಯೆ ಬುದ್ದಿ ಕಲಿಸಿದ ಗುರುಗಳ ಮಾರ್ಗದರ್ಶನದಲ್ಲಿ ನಡೆದರೆ ಮಾತ್ರವೇ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು

ನಗರದ ಹೊರವಲಯದ ಸಮೈಖ್ಯ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಕಾಲೇಜು ವಾರ್ಷಿಕೋತ್ಸವವನ್ನು ಉದ್ಘಾಟಿಸಿ
ಮಾತನಾಡಿದ ಅವರು, ಜೀವನದಲ್ಲಿ ಪ್ರತಿಯೊಬ್ಬರಿಗೂ ವಿದ್ಯೆ ಮತ್ತು ಉದ್ಯೋಗ ಎಂಬುದು ಬಹುಮುಖ್ಯವಾಗಿದೆ, ಅದನ್ನು ಪಡೆಯಲು ಸತತ ಪ್ರಯತ್ನ ಹಾಗೂ ಕಷ್ಟಪಟ್ಟಾಗ ಮಾತ್ರವೇ ಪಡೆಯಲು ಸಾಧ್ಯ ಅದನ್ನು ಪಡೆಯಲು ಓದಿನ ಪ್ರಾರಂಭದಲ್ಲಿಯೇ ಗುರಿ ಇಟ್ಟುಕೊಂಡು ಸಾಧಿಸಲು ಮುಂದಾಗಬೇಕು ಅನಿಟ್ಟಿನಲ್ಲಿ ಪ್ರತಿಯೊಬ್ಬರೂ ಆಲೋಚನೆಗಳು ಗುರಿ ಸಾಧನೆ ಕಡೆ ಇರಬೇಕು ಎಂದರು.

ವಿದ್ಯಾರ್ಥಿಗಳಾದವರು ಓದಿನಲ್ಲಿ ಯಾವಾಗಲೂ ಮುಂದೆ ಇರಬೇಕು. ನಮ್ಮಲ್ಲಿನ ಆತ್ಮಸ್ಥೆರ್ಯ ಹಾಗೂ ಛಲದಿಂದ ಪ್ರತಿಯೊಂದು ವಿಷಯದಲ್ಲಿ ಅಧ್ಯಯನ ಮಾಡಬೇಕು. ನೀವು ಮನಸ್ಸು ಮಾಡಿದರೆ ಎಂತಹ ಸಾಧನೆ ಬೇಕಾದರೂ ಮಾಡಬಹುದು ಎಂಬುದನ್ನು ತನ್ನಲ್ಲಿಯೇ ಅರ್ಥ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿರುವ ಅನೇಕ ಸಾಹಿತಿಗಳು ಸೇರಿದಂತೆ ಐಎಎಸ್, ಐಪಿಎಸ್ ಅಧಿಕಾರಿಗಳು ಸ್ಪೂರ್ತಿದಾಯಕವಾಗಬೇಕು. ಪೋಷಕರು ಮತ್ತು ಗುರುಗಳು ವಿಧ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಧೈರ್ಯ, ಶೌರ್ಯ, ಸಾಹಸ ಗುಣಗಳನ್ನು ಬೆಳೆಸುವಲ್ಲಿ ಪ್ರಯತ್ನಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಪ್ರತಿಯೊಂದು ಹಂತದಲ್ಲೂ ಗುರಿ ಇಟ್ಟುಕೊಂಡು ಬಂದರೆ ಮಾತ್ರವೇ ಉತ್ತಮ ತೀರ್ಮಾನಗಳನ್ನು ತೆಗೆದುಕೊಂಡು ಉತ್ತಮ ಪ್ರಜೆಗಳಾಗಲು ಸಾಧ್ಯ ತಂದೆ ತಾಯಿಗಳು ನಿಮ್ಮಗಳ ಮಧ್ಯೆ ಕನಸು ಕಾಣುತ್ತಾ ಇದ್ದು ಕನಸು ನನಸು ಮಾಡಲು ನೀವುಗಳು ಶ್ರಮಿಸಬೇಕು ವಿದ್ಯೆ, ಕ್ರೀಡೆ, ಸಾಹಿತ್ಯ, ಕಲೆ ಇದು ಒಬ್ಬರ ಸ್ವತ್ತು ಅಲ್ಲ ಎಲ್ಲರಿಗೂ ಸಿಗುತ್ತದೆ ಸದುಪಯೋಗ ಪಡಿಸಿಕೊಳ್ಳಬೇಕು ಸಮಯ ಸಿಕ್ಕಾಗ ಯಾವುದು ಮಾಡಬೇಕು ಎಂಬುದನ್ನು ತಿಳಿದು ಸಾಧನೆ ಮಾಡಿ ಸಾಧಕರಾಗಬೇಕು ಎಂದರು.

ವಿದ್ಯಾರ್ಥಿಗಳ ಜೀವನವೇ ದೇಶದ ಭವಿಷ್ಯವನ್ನು ಸೂಚಿಸುತ್ತದೆ ಎಚ್ಚರಿಕೆಯಿಂದ ದೇಶದ ಮತ್ತು ತಮ್ಮ ಭವಿಷ್ಯವನ್ನು ರೂಪಿಸಬೇಕಾಗಿದೆ ಪ್ರತಿಯೊಂದು ಕ್ಷೇತ್ರದಲ್ಲಿ ಅವಕಾಶಗಳು ಇವೆ ಸಮಾಜ ಕಟ್ಟುವ ಪ್ರಮುಖ ಪಾತ್ರವನ್ನು ವಹಿಸಬೇಕು ಜಿಲ್ಲೆಯ ರಾಜ್ಯದ ಕೀರ್ತಿ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ಹಾರೈಸಿದರು

ಈ ಸಂದರ್ಭದಲ್ಲಿ ಸಮೈಖ್ಯ ಕಾಲೇಜಿನ ಅಧ್ಯಕ್ಷ ರಮೇಶ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರಸಭೆ ಸದಸ್ಯ ಶಫಿ ಅಫ್ಸರ್, ವಿಜಯನಗರ ಮಂಜುನಾಥ್, ಕಾಲೇಜಿನ ಕಾರ್ಯದರ್ಶಿ ಸುಬ್ರಮಣಿ, ಹರಿನಾಥ್ ರಾವ್, ಸುಜಯ್ ಗೌಡ, ಶ್ರೀನಿವಾಸ್, ಮುಂತಾದವರು ಇದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

19 minutes ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

11 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

12 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

12 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

15 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

18 hours ago