Categories: ಕೋಲಾರ

ವಿದ್ಯಾರ್ಥಿಗಳು ತಂದೆ-ತಾಯಿ, ಗುರುಗಳ ಮಾರ್ಗದರ್ಶನದಲ್ಲಿ ಯಶಸ್ಸು ಕಾಣಬೇಕು: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ವಿದ್ಯಾರ್ಥಿಗಳು ತಂದೆ-ತಾಯಿಯರನ್ನು ಮತ್ತು ವಿದ್ಯೆ ಬುದ್ದಿ ಕಲಿಸಿದ ಗುರುಗಳ ಮಾರ್ಗದರ್ಶನದಲ್ಲಿ ನಡೆದರೆ ಮಾತ್ರವೇ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು

ನಗರದ ಹೊರವಲಯದ ಸಮೈಖ್ಯ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಕಾಲೇಜು ವಾರ್ಷಿಕೋತ್ಸವವನ್ನು ಉದ್ಘಾಟಿಸಿ
ಮಾತನಾಡಿದ ಅವರು, ಜೀವನದಲ್ಲಿ ಪ್ರತಿಯೊಬ್ಬರಿಗೂ ವಿದ್ಯೆ ಮತ್ತು ಉದ್ಯೋಗ ಎಂಬುದು ಬಹುಮುಖ್ಯವಾಗಿದೆ, ಅದನ್ನು ಪಡೆಯಲು ಸತತ ಪ್ರಯತ್ನ ಹಾಗೂ ಕಷ್ಟಪಟ್ಟಾಗ ಮಾತ್ರವೇ ಪಡೆಯಲು ಸಾಧ್ಯ ಅದನ್ನು ಪಡೆಯಲು ಓದಿನ ಪ್ರಾರಂಭದಲ್ಲಿಯೇ ಗುರಿ ಇಟ್ಟುಕೊಂಡು ಸಾಧಿಸಲು ಮುಂದಾಗಬೇಕು ಅನಿಟ್ಟಿನಲ್ಲಿ ಪ್ರತಿಯೊಬ್ಬರೂ ಆಲೋಚನೆಗಳು ಗುರಿ ಸಾಧನೆ ಕಡೆ ಇರಬೇಕು ಎಂದರು.

ವಿದ್ಯಾರ್ಥಿಗಳಾದವರು ಓದಿನಲ್ಲಿ ಯಾವಾಗಲೂ ಮುಂದೆ ಇರಬೇಕು. ನಮ್ಮಲ್ಲಿನ ಆತ್ಮಸ್ಥೆರ್ಯ ಹಾಗೂ ಛಲದಿಂದ ಪ್ರತಿಯೊಂದು ವಿಷಯದಲ್ಲಿ ಅಧ್ಯಯನ ಮಾಡಬೇಕು. ನೀವು ಮನಸ್ಸು ಮಾಡಿದರೆ ಎಂತಹ ಸಾಧನೆ ಬೇಕಾದರೂ ಮಾಡಬಹುದು ಎಂಬುದನ್ನು ತನ್ನಲ್ಲಿಯೇ ಅರ್ಥ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿರುವ ಅನೇಕ ಸಾಹಿತಿಗಳು ಸೇರಿದಂತೆ ಐಎಎಸ್, ಐಪಿಎಸ್ ಅಧಿಕಾರಿಗಳು ಸ್ಪೂರ್ತಿದಾಯಕವಾಗಬೇಕು. ಪೋಷಕರು ಮತ್ತು ಗುರುಗಳು ವಿಧ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಧೈರ್ಯ, ಶೌರ್ಯ, ಸಾಹಸ ಗುಣಗಳನ್ನು ಬೆಳೆಸುವಲ್ಲಿ ಪ್ರಯತ್ನಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಪ್ರತಿಯೊಂದು ಹಂತದಲ್ಲೂ ಗುರಿ ಇಟ್ಟುಕೊಂಡು ಬಂದರೆ ಮಾತ್ರವೇ ಉತ್ತಮ ತೀರ್ಮಾನಗಳನ್ನು ತೆಗೆದುಕೊಂಡು ಉತ್ತಮ ಪ್ರಜೆಗಳಾಗಲು ಸಾಧ್ಯ ತಂದೆ ತಾಯಿಗಳು ನಿಮ್ಮಗಳ ಮಧ್ಯೆ ಕನಸು ಕಾಣುತ್ತಾ ಇದ್ದು ಕನಸು ನನಸು ಮಾಡಲು ನೀವುಗಳು ಶ್ರಮಿಸಬೇಕು ವಿದ್ಯೆ, ಕ್ರೀಡೆ, ಸಾಹಿತ್ಯ, ಕಲೆ ಇದು ಒಬ್ಬರ ಸ್ವತ್ತು ಅಲ್ಲ ಎಲ್ಲರಿಗೂ ಸಿಗುತ್ತದೆ ಸದುಪಯೋಗ ಪಡಿಸಿಕೊಳ್ಳಬೇಕು ಸಮಯ ಸಿಕ್ಕಾಗ ಯಾವುದು ಮಾಡಬೇಕು ಎಂಬುದನ್ನು ತಿಳಿದು ಸಾಧನೆ ಮಾಡಿ ಸಾಧಕರಾಗಬೇಕು ಎಂದರು.

ವಿದ್ಯಾರ್ಥಿಗಳ ಜೀವನವೇ ದೇಶದ ಭವಿಷ್ಯವನ್ನು ಸೂಚಿಸುತ್ತದೆ ಎಚ್ಚರಿಕೆಯಿಂದ ದೇಶದ ಮತ್ತು ತಮ್ಮ ಭವಿಷ್ಯವನ್ನು ರೂಪಿಸಬೇಕಾಗಿದೆ ಪ್ರತಿಯೊಂದು ಕ್ಷೇತ್ರದಲ್ಲಿ ಅವಕಾಶಗಳು ಇವೆ ಸಮಾಜ ಕಟ್ಟುವ ಪ್ರಮುಖ ಪಾತ್ರವನ್ನು ವಹಿಸಬೇಕು ಜಿಲ್ಲೆಯ ರಾಜ್ಯದ ಕೀರ್ತಿ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ಹಾರೈಸಿದರು

ಈ ಸಂದರ್ಭದಲ್ಲಿ ಸಮೈಖ್ಯ ಕಾಲೇಜಿನ ಅಧ್ಯಕ್ಷ ರಮೇಶ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರಸಭೆ ಸದಸ್ಯ ಶಫಿ ಅಫ್ಸರ್, ವಿಜಯನಗರ ಮಂಜುನಾಥ್, ಕಾಲೇಜಿನ ಕಾರ್ಯದರ್ಶಿ ಸುಬ್ರಮಣಿ, ಹರಿನಾಥ್ ರಾವ್, ಸುಜಯ್ ಗೌಡ, ಶ್ರೀನಿವಾಸ್, ಮುಂತಾದವರು ಇದ್ದರು.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

8 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

9 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

11 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago