ಯುವ ಸಂಚಲನ (ರಿ.) ದೊಡ್ಡಬಳ್ಳಾಪುರ, ನಾಗರಕೆರೆ ಜೀವ ವೈವಿದ್ಯತೆ ಸಂರಕ್ಷಣಾ ಸಮಿತಿ ಹಾಗೂ ಸಂವಿಧಾನ ಸಾಥಿ ಇವರ ಸಂಯುಕ್ತ ಆಶ್ರಯದಲ್ಲಿ ಸರಹು ಅಭಿಯಾನ (ಅರ್ಕಾವತಿ ನದಿ ಜಲ ಮೂಲಗಳ ಸಂರಕ್ಷಣೆಗಾಗಿ ಸಾಕ್ಷ್ಯಚಿತ್ರ ಪ್ರದರ್ಶನ) ದ ಭಾಗವಾಗಿ ಇಂದು ಕೊನಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾಲೇಜಿನ ಪ್ರಾಧ್ಯಾಪಕರಾದ ಕೇಶವಮೂರ್ತಿ ಮಾತನಾಡಿ, ಕರ್ನಾಟಕದಲ್ಲಿ ಅನೇಕ ನದಿಗಳನ್ನು ಕಾಣಬಹುದು ಆದರೆ ನದಿಗಳು ಇದ್ದರೂ ಇಲ್ಲದ ಹಾಗೆ ಇರುವ ಜಿಲ್ಲೆ ಅಂದರೆ ಅದು ನಮ್ಮ ಬೆಂಗಳೂರು ಗ್ರಾಮಾಂತರ ಜಿಲ್ಲೆ. ಅದಕ್ಕಾಗಿ ಯುವ ಸಂಚಲನವು ಯುವಜನರಲ್ಲಿ ನದಿ ಕೆರೆಗಳ ಕುರಿತು ಜಾಗೃತಿ ಅಭಿಯಾನ ಉತ್ತಮ ಕಾರ್ಯವಾಗಿದೆ. ಇಂದು ನಾವು ಬೇರೆ-ಬೇರೆ ನದಿಗಳ ನೀರನ್ನು ಬೇಡುವ ಪರಿಸ್ಥಿತಿ ಉಂಟಾಗಿದೆ. ಅದಕ್ಕೆ ಕಾರಣ ನಮ್ಮಲ್ಲಿ ಅವೈಜ್ಞಾನಿಕವಾಗಿ ಕೃಷಿ ಭೂಮಿಯ ಹೆಚ್ಚಳ. ಅದರಲ್ಲೂ ನೀಲಗಿರಿ ಬೆಳೆಯಿಂದ ಹೆಚ್ಚಿನ ಸಮಸ್ಯೆಗೆ ಈ ಭಾಗ ತುತ್ತಾಗಿದೆ ಎಂದು ತಿಳಿಸಿದರು.
ಯುವ ಸಂಚಲನ ತಂಡದ ಅಧ್ಯಕ್ಷರಾದ ಚಿದಾನಂದ್ ಮೂರ್ತಿ ಮಾತನಾಡುತ್ತಾ.. ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಾವಿರುವ ಜಲಾನಯನ ಪ್ರದೇಶದ ಸಂಪೂರ್ಣ ಮಾಹಿತಿಯನ್ನು ಅರಿಯುವುದು ತುಂಬಾ ಮುಖ್ಯ. ಶಿಕ್ಷಣದ ಜೊತೆಗೆ ಸಾಮಾಜಿಕ ಕಳಕಳಿಯನ್ನು ಬೆಳೆಸಿಕೊಂಡು ನದಿ ಕೆರೆಗಳ ಸಂರಕ್ಷಣೆಗೆ ಮುಂದಾಗ ಬೇಕಿದೆ. ಅರ್ಕಾವತಿ ನದಿ ಕುರಿತು ಅರಿವು ಮೂಡಿಸುವ ಭಾಗವಾಗಿ ದೊಡ್ಡಬಳ್ಳಾಪುರದ ಎಲ್ಲಾ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿ/ವಿದ್ಯಾರ್ಥಿನಿಯರಲ್ಲಿ ಯುವ ಸಂಚಲನ ತಂಡವು ಜಾಗೃತಿ ಮೂಡಿಸಲಾಗುತ್ತಿದೆ. ಇದುವರೆಗೂ ಒಟ್ಟು 8 ಕಾಲೇಜಿನ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಜಾಗೃತಿ ಮೂಡಿಸುತ್ತಾ ಸರಹು ಅಭಿಯಾನವು ಸಾಗುತ್ತಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಕೊನೆಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕರುಗಳಾದ ಸರ್ವಮಂಗಳ, ಸುಮಂಗಳ, ಅಮೃತವಾಣಿ, ಗಂಗಪ್ಪಗೌಡ ಹಾಗೂ ಯುವ ಸಂಚಲನ ತಂಡದ ಸದಸ್ಯರಾದ ನವೀನ್ ಉಪಸ್ಥಿತರಿದ್ದರು.
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…