ವಿದ್ಯಾರ್ಥಿಗಳು ತಾವಿರುವ ಜಲಾನಯನ ಪ್ರದೇಶದ ಸಂಪೂರ್ಣ ಮಾಹಿತಿ ಅರಿಯುವುದು ತುಂಬಾ ಮುಖ್ಯ- ಯುವ ಸಂಚಲನ ಅಧ್ಯಕ್ಷ ಚಿದಾನಂದ್

ಯುವ ಸಂಚಲನ (ರಿ.) ದೊಡ್ಡಬಳ್ಳಾಪುರ, ನಾಗರಕೆರೆ ಜೀವ ವೈವಿದ್ಯತೆ ಸಂರಕ್ಷಣಾ ಸಮಿತಿ ಹಾಗೂ ಸಂವಿಧಾನ ಸಾಥಿ ಇವರ ಸಂಯುಕ್ತ ಆಶ್ರಯದಲ್ಲಿ ಸರಹು ಅಭಿಯಾನ (ಅರ್ಕಾವತಿ ನದಿ ಜಲ ಮೂಲಗಳ ಸಂರಕ್ಷಣೆಗಾಗಿ ಸಾಕ್ಷ್ಯಚಿತ್ರ ಪ್ರದರ್ಶನ) ದ ಭಾಗವಾಗಿ ಇಂದು ಕೊನಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾಲೇಜಿನ ಪ್ರಾಧ್ಯಾಪಕರಾದ ಕೇಶವಮೂರ್ತಿ ಮಾತನಾಡಿ, ಕರ್ನಾಟಕದಲ್ಲಿ ಅನೇಕ ನದಿಗಳನ್ನು ಕಾಣಬಹುದು ಆದರೆ ನದಿಗಳು ಇದ್ದರೂ ಇಲ್ಲದ ಹಾಗೆ ಇರುವ ಜಿಲ್ಲೆ ಅಂದರೆ ಅದು ನಮ್ಮ ಬೆಂಗಳೂರು ಗ್ರಾಮಾಂತರ ಜಿಲ್ಲೆ. ಅದಕ್ಕಾಗಿ ಯುವ ಸಂಚಲನವು ಯುವಜನರಲ್ಲಿ ನದಿ ಕೆರೆಗಳ ಕುರಿತು ಜಾಗೃತಿ ಅಭಿಯಾನ ಉತ್ತಮ ಕಾರ್ಯವಾಗಿದೆ. ಇಂದು ನಾವು ಬೇರೆ-ಬೇರೆ ನದಿಗಳ ನೀರನ್ನು ಬೇಡುವ ಪರಿಸ್ಥಿತಿ ಉಂಟಾಗಿದೆ. ಅದಕ್ಕೆ ಕಾರಣ ನಮ್ಮಲ್ಲಿ ಅವೈಜ್ಞಾನಿಕವಾಗಿ ಕೃಷಿ ಭೂಮಿಯ ಹೆಚ್ಚಳ. ಅದರಲ್ಲೂ ನೀಲಗಿರಿ ಬೆಳೆಯಿಂದ ಹೆಚ್ಚಿನ ಸಮಸ್ಯೆಗೆ ಈ ಭಾಗ ತುತ್ತಾಗಿದೆ ಎಂದು ತಿಳಿಸಿದರು.

ಯುವ ಸಂಚಲನ ತಂಡದ ಅಧ್ಯಕ್ಷರಾದ ಚಿದಾನಂದ್ ಮೂರ್ತಿ ಮಾತನಾಡುತ್ತಾ.. ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಾವಿರುವ ಜಲಾನಯನ ಪ್ರದೇಶದ ಸಂಪೂರ್ಣ ಮಾಹಿತಿಯನ್ನು ಅರಿಯುವುದು ತುಂಬಾ ಮುಖ್ಯ. ಶಿಕ್ಷಣದ ಜೊತೆಗೆ ಸಾಮಾಜಿಕ ಕಳಕಳಿಯನ್ನು ಬೆಳೆಸಿಕೊಂಡು ನದಿ ಕೆರೆಗಳ ಸಂರಕ್ಷಣೆಗೆ ಮುಂದಾಗ ಬೇಕಿದೆ. ಅರ್ಕಾವತಿ ನದಿ ಕುರಿತು ಅರಿವು ಮೂಡಿಸುವ ಭಾಗವಾಗಿ ದೊಡ್ಡಬಳ್ಳಾಪುರದ ಎಲ್ಲಾ  ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿ/ವಿದ್ಯಾರ್ಥಿನಿಯರಲ್ಲಿ ಯುವ ಸಂಚಲನ ತಂಡವು ಜಾಗೃತಿ ಮೂಡಿಸಲಾಗುತ್ತಿದೆ. ಇದುವರೆಗೂ ಒಟ್ಟು 8 ಕಾಲೇಜಿನ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಜಾಗೃತಿ ಮೂಡಿಸುತ್ತಾ ಸರಹು ಅಭಿಯಾನವು ಸಾಗುತ್ತಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಕೊನೆಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕರುಗಳಾದ ಸರ್ವಮಂಗಳ,  ಸುಮಂಗಳ, ಅಮೃತವಾಣಿ, ಗಂಗಪ್ಪಗೌಡ ಹಾಗೂ ಯುವ ಸಂಚಲನ ತಂಡದ ಸದಸ್ಯರಾದ ನವೀನ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

14 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

16 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

16 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

16 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

19 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

22 hours ago