ವಿದ್ಯಾರ್ಥಿಗಳು ತಾವಿರುವ ಜಲಾನಯನ ಪ್ರದೇಶದ ಸಂಪೂರ್ಣ ಮಾಹಿತಿ ಅರಿಯುವುದು ತುಂಬಾ ಮುಖ್ಯ- ಯುವ ಸಂಚಲನ ಅಧ್ಯಕ್ಷ ಚಿದಾನಂದ್

ಯುವ ಸಂಚಲನ (ರಿ.) ದೊಡ್ಡಬಳ್ಳಾಪುರ, ನಾಗರಕೆರೆ ಜೀವ ವೈವಿದ್ಯತೆ ಸಂರಕ್ಷಣಾ ಸಮಿತಿ ಹಾಗೂ ಸಂವಿಧಾನ ಸಾಥಿ ಇವರ ಸಂಯುಕ್ತ ಆಶ್ರಯದಲ್ಲಿ ಸರಹು ಅಭಿಯಾನ (ಅರ್ಕಾವತಿ ನದಿ ಜಲ ಮೂಲಗಳ ಸಂರಕ್ಷಣೆಗಾಗಿ ಸಾಕ್ಷ್ಯಚಿತ್ರ ಪ್ರದರ್ಶನ) ದ ಭಾಗವಾಗಿ ಇಂದು ಕೊನಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾಲೇಜಿನ ಪ್ರಾಧ್ಯಾಪಕರಾದ ಕೇಶವಮೂರ್ತಿ ಮಾತನಾಡಿ, ಕರ್ನಾಟಕದಲ್ಲಿ ಅನೇಕ ನದಿಗಳನ್ನು ಕಾಣಬಹುದು ಆದರೆ ನದಿಗಳು ಇದ್ದರೂ ಇಲ್ಲದ ಹಾಗೆ ಇರುವ ಜಿಲ್ಲೆ ಅಂದರೆ ಅದು ನಮ್ಮ ಬೆಂಗಳೂರು ಗ್ರಾಮಾಂತರ ಜಿಲ್ಲೆ. ಅದಕ್ಕಾಗಿ ಯುವ ಸಂಚಲನವು ಯುವಜನರಲ್ಲಿ ನದಿ ಕೆರೆಗಳ ಕುರಿತು ಜಾಗೃತಿ ಅಭಿಯಾನ ಉತ್ತಮ ಕಾರ್ಯವಾಗಿದೆ. ಇಂದು ನಾವು ಬೇರೆ-ಬೇರೆ ನದಿಗಳ ನೀರನ್ನು ಬೇಡುವ ಪರಿಸ್ಥಿತಿ ಉಂಟಾಗಿದೆ. ಅದಕ್ಕೆ ಕಾರಣ ನಮ್ಮಲ್ಲಿ ಅವೈಜ್ಞಾನಿಕವಾಗಿ ಕೃಷಿ ಭೂಮಿಯ ಹೆಚ್ಚಳ. ಅದರಲ್ಲೂ ನೀಲಗಿರಿ ಬೆಳೆಯಿಂದ ಹೆಚ್ಚಿನ ಸಮಸ್ಯೆಗೆ ಈ ಭಾಗ ತುತ್ತಾಗಿದೆ ಎಂದು ತಿಳಿಸಿದರು.

ಯುವ ಸಂಚಲನ ತಂಡದ ಅಧ್ಯಕ್ಷರಾದ ಚಿದಾನಂದ್ ಮೂರ್ತಿ ಮಾತನಾಡುತ್ತಾ.. ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಾವಿರುವ ಜಲಾನಯನ ಪ್ರದೇಶದ ಸಂಪೂರ್ಣ ಮಾಹಿತಿಯನ್ನು ಅರಿಯುವುದು ತುಂಬಾ ಮುಖ್ಯ. ಶಿಕ್ಷಣದ ಜೊತೆಗೆ ಸಾಮಾಜಿಕ ಕಳಕಳಿಯನ್ನು ಬೆಳೆಸಿಕೊಂಡು ನದಿ ಕೆರೆಗಳ ಸಂರಕ್ಷಣೆಗೆ ಮುಂದಾಗ ಬೇಕಿದೆ. ಅರ್ಕಾವತಿ ನದಿ ಕುರಿತು ಅರಿವು ಮೂಡಿಸುವ ಭಾಗವಾಗಿ ದೊಡ್ಡಬಳ್ಳಾಪುರದ ಎಲ್ಲಾ  ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿ/ವಿದ್ಯಾರ್ಥಿನಿಯರಲ್ಲಿ ಯುವ ಸಂಚಲನ ತಂಡವು ಜಾಗೃತಿ ಮೂಡಿಸಲಾಗುತ್ತಿದೆ. ಇದುವರೆಗೂ ಒಟ್ಟು 8 ಕಾಲೇಜಿನ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಜಾಗೃತಿ ಮೂಡಿಸುತ್ತಾ ಸರಹು ಅಭಿಯಾನವು ಸಾಗುತ್ತಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಕೊನೆಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕರುಗಳಾದ ಸರ್ವಮಂಗಳ,  ಸುಮಂಗಳ, ಅಮೃತವಾಣಿ, ಗಂಗಪ್ಪಗೌಡ ಹಾಗೂ ಯುವ ಸಂಚಲನ ತಂಡದ ಸದಸ್ಯರಾದ ನವೀನ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

1 day ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

4 days ago