ಕೋಲಾರ: ವಿದ್ಯಾರ್ಥಿಗಳು ಓದಿನ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದು ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಹಾಗೂ ಎಕ್ಸಲೆಂಟ್ ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಸೀಸಂದ್ರ ಗೋಪಾಲಗೌಡ ತಿಳಿಸಿದರು.
ನಗರದ ಹೊರವಲಯದ ಛತ್ರಕೋಡಿಹಳ್ಳಿ ಗ್ರಾಮದಲ್ಲಿರುವ ಎಕ್ಸಲೆಂಟ್ ಕಾಲೇಜಿನಲ್ಲಿ ಶನಿವಾರ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಇವತ್ತಿನ ದಿನಗಳಲ್ಲಿ ವಿದ್ಯಾರ್ಥಿಗಳು ವಿದ್ಯಾವಂತರಾಗುತ್ತಿದ್ದಾರೆಯೇ ಹೊರತು ಅಗತ್ಯಕ್ಕೆ ತಕ್ಕಂತೆ ಜ್ಞಾನವನ್ನು ಪಡೆಯುತ್ತಿಲ್ಲ ಜ್ಞಾನದೊಂದಿಗೆ ಪ್ರತಿಯೊಬ್ಬರು ಶಿಸ್ತನ್ನು ತಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು ಅರ್ಹತೆಗಳನ್ನು ತಾವುಗಳೇ ಹುಡಿಕಿಕೊಳ್ಳುವಂತಾಗಬೇಕು ಎಂದು ತಿಳಿಸಿದರು.
ಕಾಲೇಜುಗಳಲ್ಲಿ ಶ್ರೇಷ್ಠ ಗುಣಮಟ್ಟದ ಶಿಕ್ಷಣ ನೀಡುವುದರ ಜತೆಗೆ ಸಂಶೋಧನೆಯ ಕಡೆ ಹೆಚ್ಚಿನ ವಿದ್ಯಾರ್ಥಿಗಳನ್ನು ತೊಡಗಿಸಬೇಕು. ವಿದ್ಯಾರ್ಥಿಗಳಿಗೆ ಮುಂದೆ ಉದ್ಯೋಗಕ್ಕಾಗಿ ಉಪಯೋಗವಾಗುವಂತಹ ಕ್ಷೇತ್ರಗಳ ಮೇಲೆ ಹೆಚ್ಚು ಗಮನ ಹರಿಸಬೇಕು ಕೌಶಲ್ಯಕ್ಕೆ ತಕ್ಕಂತೆ ಶಿಕ್ಷಣದ ಕೋರ್ಸ್ಗಳನ್ನು ಪ್ರಾರಂಭಿಸಲು ವಿಶ್ವವಿದ್ಯಾಲಯದ ಮಟ್ಟದಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಎಕ್ಸಲೆಂಟ್ ಕಾಲೇಜಿನ ಕಾರ್ಯದರ್ಶಿ ಸುಶ್ಮಿತಾ ರಂಗಪ್ಪ, ಸಂಸ್ಥೆಯ ಶೈಕ್ಷಣಿಕ ಮುಖ್ಯಸ್ಥ ಡಿ.ವೆಂಕಟರಾಜು, ಪಿಯು ಕಾಲೇಜಿನ ಪ್ರಾಂಶುಪಾಲ ರಮೇಶ್ ರೆಡ್ಡಿ, ಪದವಿ ಕಾಲೇಜಿನ ಪ್ರಾಂಶುಪಾಲ ಆನಂದ್ ಇದ್ದರು
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…