ಕೋಲಾರ: ವಿದ್ಯಾರ್ಥಿಗಳು ಓದಿನ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದು ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಹಾಗೂ ಎಕ್ಸಲೆಂಟ್ ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಸೀಸಂದ್ರ ಗೋಪಾಲಗೌಡ ತಿಳಿಸಿದರು.
ನಗರದ ಹೊರವಲಯದ ಛತ್ರಕೋಡಿಹಳ್ಳಿ ಗ್ರಾಮದಲ್ಲಿರುವ ಎಕ್ಸಲೆಂಟ್ ಕಾಲೇಜಿನಲ್ಲಿ ಶನಿವಾರ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಇವತ್ತಿನ ದಿನಗಳಲ್ಲಿ ವಿದ್ಯಾರ್ಥಿಗಳು ವಿದ್ಯಾವಂತರಾಗುತ್ತಿದ್ದಾರೆಯೇ ಹೊರತು ಅಗತ್ಯಕ್ಕೆ ತಕ್ಕಂತೆ ಜ್ಞಾನವನ್ನು ಪಡೆಯುತ್ತಿಲ್ಲ ಜ್ಞಾನದೊಂದಿಗೆ ಪ್ರತಿಯೊಬ್ಬರು ಶಿಸ್ತನ್ನು ತಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು ಅರ್ಹತೆಗಳನ್ನು ತಾವುಗಳೇ ಹುಡಿಕಿಕೊಳ್ಳುವಂತಾಗಬೇಕು ಎಂದು ತಿಳಿಸಿದರು.
ಕಾಲೇಜುಗಳಲ್ಲಿ ಶ್ರೇಷ್ಠ ಗುಣಮಟ್ಟದ ಶಿಕ್ಷಣ ನೀಡುವುದರ ಜತೆಗೆ ಸಂಶೋಧನೆಯ ಕಡೆ ಹೆಚ್ಚಿನ ವಿದ್ಯಾರ್ಥಿಗಳನ್ನು ತೊಡಗಿಸಬೇಕು. ವಿದ್ಯಾರ್ಥಿಗಳಿಗೆ ಮುಂದೆ ಉದ್ಯೋಗಕ್ಕಾಗಿ ಉಪಯೋಗವಾಗುವಂತಹ ಕ್ಷೇತ್ರಗಳ ಮೇಲೆ ಹೆಚ್ಚು ಗಮನ ಹರಿಸಬೇಕು ಕೌಶಲ್ಯಕ್ಕೆ ತಕ್ಕಂತೆ ಶಿಕ್ಷಣದ ಕೋರ್ಸ್ಗಳನ್ನು ಪ್ರಾರಂಭಿಸಲು ವಿಶ್ವವಿದ್ಯಾಲಯದ ಮಟ್ಟದಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಎಕ್ಸಲೆಂಟ್ ಕಾಲೇಜಿನ ಕಾರ್ಯದರ್ಶಿ ಸುಶ್ಮಿತಾ ರಂಗಪ್ಪ, ಸಂಸ್ಥೆಯ ಶೈಕ್ಷಣಿಕ ಮುಖ್ಯಸ್ಥ ಡಿ.ವೆಂಕಟರಾಜು, ಪಿಯು ಕಾಲೇಜಿನ ಪ್ರಾಂಶುಪಾಲ ರಮೇಶ್ ರೆಡ್ಡಿ, ಪದವಿ ಕಾಲೇಜಿನ ಪ್ರಾಂಶುಪಾಲ ಆನಂದ್ ಇದ್ದರು
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…