ಕೋಲಾರ: ವಿದ್ಯಾರ್ಥಿಗಳು ಓದಿನ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದು ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಹಾಗೂ ಎಕ್ಸಲೆಂಟ್ ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಸೀಸಂದ್ರ ಗೋಪಾಲಗೌಡ ತಿಳಿಸಿದರು.
ನಗರದ ಹೊರವಲಯದ ಛತ್ರಕೋಡಿಹಳ್ಳಿ ಗ್ರಾಮದಲ್ಲಿರುವ ಎಕ್ಸಲೆಂಟ್ ಕಾಲೇಜಿನಲ್ಲಿ ಶನಿವಾರ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಇವತ್ತಿನ ದಿನಗಳಲ್ಲಿ ವಿದ್ಯಾರ್ಥಿಗಳು ವಿದ್ಯಾವಂತರಾಗುತ್ತಿದ್ದಾರೆಯೇ ಹೊರತು ಅಗತ್ಯಕ್ಕೆ ತಕ್ಕಂತೆ ಜ್ಞಾನವನ್ನು ಪಡೆಯುತ್ತಿಲ್ಲ ಜ್ಞಾನದೊಂದಿಗೆ ಪ್ರತಿಯೊಬ್ಬರು ಶಿಸ್ತನ್ನು ತಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು ಅರ್ಹತೆಗಳನ್ನು ತಾವುಗಳೇ ಹುಡಿಕಿಕೊಳ್ಳುವಂತಾಗಬೇಕು ಎಂದು ತಿಳಿಸಿದರು.
ಕಾಲೇಜುಗಳಲ್ಲಿ ಶ್ರೇಷ್ಠ ಗುಣಮಟ್ಟದ ಶಿಕ್ಷಣ ನೀಡುವುದರ ಜತೆಗೆ ಸಂಶೋಧನೆಯ ಕಡೆ ಹೆಚ್ಚಿನ ವಿದ್ಯಾರ್ಥಿಗಳನ್ನು ತೊಡಗಿಸಬೇಕು. ವಿದ್ಯಾರ್ಥಿಗಳಿಗೆ ಮುಂದೆ ಉದ್ಯೋಗಕ್ಕಾಗಿ ಉಪಯೋಗವಾಗುವಂತಹ ಕ್ಷೇತ್ರಗಳ ಮೇಲೆ ಹೆಚ್ಚು ಗಮನ ಹರಿಸಬೇಕು ಕೌಶಲ್ಯಕ್ಕೆ ತಕ್ಕಂತೆ ಶಿಕ್ಷಣದ ಕೋರ್ಸ್ಗಳನ್ನು ಪ್ರಾರಂಭಿಸಲು ವಿಶ್ವವಿದ್ಯಾಲಯದ ಮಟ್ಟದಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಎಕ್ಸಲೆಂಟ್ ಕಾಲೇಜಿನ ಕಾರ್ಯದರ್ಶಿ ಸುಶ್ಮಿತಾ ರಂಗಪ್ಪ, ಸಂಸ್ಥೆಯ ಶೈಕ್ಷಣಿಕ ಮುಖ್ಯಸ್ಥ ಡಿ.ವೆಂಕಟರಾಜು, ಪಿಯು ಕಾಲೇಜಿನ ಪ್ರಾಂಶುಪಾಲ ರಮೇಶ್ ರೆಡ್ಡಿ, ಪದವಿ ಕಾಲೇಜಿನ ಪ್ರಾಂಶುಪಾಲ ಆನಂದ್ ಇದ್ದರು
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…