ವಿದ್ಯಾರ್ಥಿಗಳು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು- ಐಎಎಸ್ ಅಧಿಕಾರಿ ಸಿ.ಎಸ್. ಕರೀಗೌಡ

ಯಾವ ವ್ಯಕ್ತಿ ಸಮಾಜಮುಖಿ ಕೆಲಸಗಳಲ್ಲಿ ಗುರುತಿಸಿಕೊಳ್ಳುತ್ತಾರೋ ಅವರು ಶಾಶ್ವತವಾಗಿ ಉಳಿಯುತ್ತಾರೆ. ಅದೇ ರೀತಿಯಾಗಿ ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಐಎಎಸ್ ಅಧಿಕಾರಿ ಸಿ.ಎಸ್. ಕರೀಗೌಡ ಹೇಳಿದರು.

ನಗರದಲ್ಲಿ ಬುಧವಾರ ‘ಪ್ರಜಾವಾಣಿ’ ಅಮೃತ ಮಹೋತ್ಸವದ ಅಂಗವಾಗಿ ಆರ್.ಎಲ್.ಜಾಲಪ್ಪ ಶಿಕ್ಷಣ ಸಂಸ್ಥೆಗಳ ಸಹಯೋಗದಡಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆರ್.ಎಲ್.ಜಾಲಪ್ಪ ಕಲಾ ಮಂದಿರದಲ್ಲಿ ನಡೆದ ಪರೀಕ್ಷಾ ದಿಕ್ಸೂಚಿ ಉಪನ್ಯಾಸ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಜೀವನದಲ್ಲಿ ದೊಡ್ಡ ಸಾಧನೆ ಮಾಡುವ ಹಂಬಲವಿದ್ದರೇ ‘ಪ್ರಜಾವಾಣಿ’ ಪತ್ರಿಕೆಯನ್ನೇ ಆದರ್ಶವಾಗಿಟ್ಟುಕೊಳ್ಳಬೇಕು. ನಿರಂತರವಾಗಿ ಕನ್ನಡಿಗರ ಸೇವೆಯಲ್ಲಿ ತೋಡಗಿಸಿಕೊಂಡು, ರಾಜಿ ಮಾಡಿಕೊಳ್ಳದೇ 75 ವರ್ಷಗಳ ಕಾಲ ವಿಶ್ವಾಸಾರ್ಹ ಸುದ್ದಿಗಳನ್ನು ಓದುಗರಿಗೆ ನೀಡಿದ ಶ್ರೀಮಂತ ಪತ್ರಿಕೆಯಾಗಿದೆ. ಕರ್ನಾಟಕ ರಾಜ್ಯೋತ್ಸವವನ್ನು ಮೊಟ್ಟ ಮೊದಲು ಆಚರಣೆ ಮಾಡಿದ್ದು ಪ್ರಜಾವಾಣಿ ಪತ್ರಿಕೆ ಕಚೇರಿಯಲ್ಲಿ ಎಂಬುದು ಕನ್ನಡಿಗರೆಲ್ಲರು ಹೆಮ್ಮೆಪಡುವ ವಿಚಾರ ಎಂದರು.

ಸಾಕಷ್ಟು ಕನ್ನಡ ಪದಗಳನ್ನು ಕನ್ನಡ ಪದಕೋಶಕ್ಕೆ ನೀಡಿ, ಕನ್ನಡದ ಅಸ್ಮಿತೆ ಉಳಿಸುವಲ್ಲಿ ಪತ್ರಿಕೆಯ ಸೇವೆ ಅನನ್ಯವಾಗಿದೆ. ಕನ್ನಡದ ಮೇರು ಸಾಹಿತಿಗಳಾದ ಕೆ.ಪಿ.ಪೂರ್ಣಚಂದ್ರತೇಜಸ್ವಿ, ದೇವನೂರು ಮಹಾದೇವ, ಪಿ.ಲಂಕೇಶ್. ಜಯಂತ್ ಕಾಯ್ಕಿಣಿ ಅವರುಗಳ ಸಾಹಿತ್ಯ ಕೊಡುಗೆಗೆ ವೇದಿಕೆಯಾಗಿದ್ದು ಪ್ರಜಾವಾಣಿ. ರೈತ ಹೋರಾಟ, ದಲಿತ ಚಳವಳಿಗಳಿಗೆ ಬಲ ನೀಡಿದ್ದು, ಕೋಳಗೇರಿ ಎಂಬ ಕನ್ನಡ ಪದವನ್ನು ನೀಡಿದ್ದು ಪ್ರಜಾವಾಣಿ ಎಂದರು.

ಶ್ರೀ ದೇವರಾಜ ಅರಸು ಏಜುಕೇಷನ್ ಟ್ರಸ್ಟ್ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಹಂತವೂ ವಿದ್ಯಾರ್ಥಿಗಳ ಜೀವನದಲ್ಲಿ ಅತ್ಯಂತ ನಿರ್ಣಾಯಕ. ಗ್ರಾಮಾಂತರ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಲ್ಲಿ ಯಶಸ್ಸುಗೊಳ್ಳಲು ಮಾನಸಿಕ ಹಾಗೂ ಬೌದ್ಧಿಕವಾಗಿ ಸಿದ್ಧಗೊಳ್ಳಿಸಲು ಈ ಕಾರ್ಯಕ್ರಮ ಸಹಕಾರಿಯಾಗಲಿದೆ. ಇಂದಿನ ಸ್ಮರ್ಧಾತ್ಮಕ ಯುಗದಲ್ಲಿ ಕೌಶಲ್ಯಭಿವೃದ್ಧಿಯಿಂದ ವಿದ್ಯಾರ್ಥಿಗಳು ಜೀವನ ಸದೃಢಗೊಳ್ಳುತ್ತಾರೆ. ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯನಿರತರಾಗಬೇಕಿದೆ ಎಂದರು.

ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್ ಕಾರ್ಯನಿರ್ವಾಹಕ ನಿರ್ದೇಶಕಿ ಡಾ.ಎಲ್.ಸವಿತಾ ಅವರು ಪರೀಕ್ಷಾ ದಿಕ್ಸೂಚಿ ಉಪನ್ಯಾಸ ನೀಡಿ, ‘ಮನಸ್ಸು ಮರ್ಕಟ ಇದ್ದಂತೆ. ನಿಮ್ಮ ಮನಸ್ಸನ್ನು ನೀವು ಹತೋಟಿಯಲ್ಲಿಟ್ಟುಕೊಳ್ಳಬೇಕು. ಆಗಷ್ಟೇ ಯಶಸ್ಸು ಸಾಧ್ಯ. ಇಡೀ ಜೀವನದಲ್ಲಿ ಬರುವ ಪರೀಕ್ಷೆ ಎದುರಿಸುವುದನ್ನು ಕಲಿಯಬೇಕು. ಈ ಪರೀಕ್ಷೆಯಲ್ಲಿ ಗೆಲುವು ಸಾಧಿಸಲು ನಮ್ಮ ಅನುಭವಗಳನ್ನು ಬಳಸಿಕೊಳ್ಳಬೇಕು. ಇದಕ್ಕೆ ಧನಾತ್ಮಕ ಚಿಂತನೆ ಇದ್ದರೆ ಯಶಸ್ಸು ಸುಲಭವಾಗಲಿದೆ ಎಂದರು.

ದೈಹಿಕವಾಗಿ ಸದೃಢವಾಗಿದ್ದರೆ ಪರೀಕ್ಷೆ ಎದುರಿಸುವುದು ಸುಲಭ. ಇದಕ್ಕೆ ಪೌಷ್ಟಿಕ ಆಹಾರ ಸೇವಿಸಬೇಕು.ಆಗ ಮನಸ್ಸು ಸಕಾರಾತ್ಮಕವಾಗಿ ಸ್ಪಂದಿಸುತ್ತದೆ. ಪರೀಕ್ಷೆಯ ಸಂದರ್ಭದಲ್ಲಿ ವ್ಯವಸ್ಥಿತವಾಗಿ ಸಿದ್ಧತೆ ನಡೆಸಿಕೊಳ್ಳಬೇಕು, ನಿಮ್ಮ ಕಲಿಕಾ ಮಾರ್ಗದಲ್ಲಿಯೇ ವಿಷಯ ಗ್ರಹಿಕೆಗೆ ಮುಂದಾಗಬೇಕು. ಕೊನೆ ಕ್ಷಣದಲ್ಲಿ ಗಾಬರಿಯಾಗದೇ ಪರೀಕ್ಷೆಯ ಮುನ್ನ ದಿನವೇ ಎಲ್ಲ ಅಗತ್ಯ ಸಲಕರಣೆ, ಲೇಖನಿಗಳು, ಹಾಲ್ ಟಿಕೆಟ್ ನಿಮ್ಮೊಂದಿಗಿರಲಿ, ಪಠ್ಯವನ್ನು ಕಣ್ಣ ಮುಂದೆ ಚಿತ್ರಣದಂತೆ ಮೂಡಿಸಿಕೊಂಡು ಪರೀಕ್ಷೆ ಎದುರಿಸಿದ್ದಲ್ಲಿ ಯಶಸ್ಸು ನಿಮ್ಮದಾಗುತ್ತದೆ. ವಿದ್ಯಾರ್ಥಿಗಳು ಮಲಗುವ ಮುನ್ನ ನಾನು ಪರೀಕ್ಷೆಯಲ್ಲಿ ರ್ಯಾಂಕ್ ಪಡೆಯುವಷ್ಟು ಅಭ್ಯಾಸ ಮಾಡಿದ್ದೇನೆ ಎಂದು ನೆನಪು ಮಾಡಿಕೊಳ್ಳಬೇಕು ಎಂದರು.

ಪ್ರಜಾವಾಣಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರಭಟ್ಟ ಅವರು ಮಾತನಾಡಿ, 75 ವರ್ಷಗಳ ಇತಿಹಾಸವನ್ನು ಹೊಂದಿರುವ ಪ್ರಜಾವಾಣಿ ಸದಾ ಜನಪರವಾದ ನಿಲುವುಗಳ ಸುದ್ದಿಗಳನ್ನು ಪ್ರಕಟಿಸುತ್ತಲೇ ಬಂದಿದೆ. ಯುವ ಸಮುಹವನ್ನು ಉನ್ನತ ಮೌಲ್ಯಗಳೊಂದಿಗೆ, ಉನ್ನತ ಹುದ್ದೆಗಳಿಗೂ ಹೋಗುವಂತೆ ಮಾಡುವುದೇ ಪತ್ರಿಕೆಯ ಆಶಯವಾಗಿದೆ ಎಂದರು.

Ramesh Babu

Journalist

Recent Posts

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…

3 minutes ago

ಡಾ.ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ.?: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಸುಳಿವು

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…

20 minutes ago

ಪ್ರಮಾಣ ವಚನ ಅಥವಾ ಪ್ರತಿಜ್ಞಾ ವಿಧಿ……. ಇವು ಆತ್ಮಸಾಕ್ಷಿಯ ನುಡಿಗಳೇ – ಸಂವಿಧಾನಾತ್ಮಕ ಕರ್ತವ್ಯವೇ – ಒಂದು ಒಣ ವಿಧಿ ವಿಧಾನವೇ…….

ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…

4 hours ago

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

18 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

18 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

18 hours ago