ಕೋಲಾರ: ಲಕ್ಷಾಂತರ ರೂಪಾಯಿ ಶುಲ್ಕ ಪಡೆದು ನೀಟ್, ಸಿಇಟಿ ತರಬೇತಿ ನೀಡುತ್ತೇವೆಂದು ವಿದ್ಯಾರ್ಥಿಗಳನ್ನು ವಂಚನೆ ಮಾಡುತ್ತಿರುವ ಆಕಾಶ್ ಬೈಜುಸ್ ಸಂಸ್ಥೆ ವಿರುದ್ಧ ಕ್ರಿಮಿನಲ್ ಮೊಕದಮ್ಮೆ ದಾಖಲು ಮಾಡಿ ನೊಂದಿರುವ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ರೈತ ಸಂಘದಿಂದ ಶಿಕ್ಷಣ ಸಂಸ್ಥೆ ಮುಂದೆ ಹೋರಾಟ ಮಾಡಿ ಆರಕ್ಷಕ ಉಪನಿರೀಕ್ಷಕ ಸಹೀದ್ ಅಹಮದ್ ಮುಖಾಂತರ ಜಿಲ್ಲಾಧಿಕರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.
ಶಿಕ್ಷಣ ವ್ಯವಸ್ಥೆ ವ್ಯಾಪಾರದ ಕಾರ್ಪೊರೇಟ್ ಕಂಪನಿಗಳ ಕಪಿಮುಷ್ಟಿಯಲ್ಲಿ ಸಿಲುಕಿ ಕೋಟ್ಯಾಂತರ ಪೋಷಕರ ಕನಸು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚಲ್ಲಾಟ ವಾಡುತ್ತಿದ್ದರು ಶಿಕ್ಷಣ ವ್ಯವಸ್ಥೆ ಹಾಗೂ ಕಾರ್ಪೋರೇಟ್ ಶಿಕ್ಷಣ ಸಂಸ್ಥೆ ಹೆಸರಿನಲ್ಲಿ ತರಬೇತಿ ನೀಡುವ ಪರವಾನಿಗೆ ಇಲ್ಲದ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ಶಿಕ್ಷಣ ಸಚಿವರು ವಿಫಲವಾಗಿದ್ದಾರೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಅವ್ಯವಸ್ಥೆ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ನಾಯಿ ಕೊಡೆಗಳಂತೆ ತಲೆ ಎತ್ತಿರುವ ಖಾಸಗಿ ಶಾಲಾ ಕಾಲೇಜುಗಳು ಪ್ರಥಮ ಮತ್ತು ದ್ವಿತೀಯ ಪಿಯುಸಿ (ವಿಜ್ಞಾನ) ತರಗತಿಗಳಿಗೆ ಹಾಜರಾತಿ ದಾಖಲು ಮಾಡಿಕೊಳ್ಳುವಾಗ ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ನಮ್ಮ ಶಾಲೆಗೆ ಸೇರಿಸಿ ನಿಮ್ಮ ಮಕ್ಕಳ ಭವಿಷ್ಯ ನಿಮ್ಮ ಕನಸನ್ನು ನನಸು ಮಾಡಲು ನೀಟ್, ಸಿಇಟಿ ವೃತ್ತಿಪರ ಕೋರ್ಸುಗಳಿಗೆ ಉಚಿತವಾಗಿ ತರಬೇತಿ ನೀಡುತ್ತೇವೆಂದು ದಾಖಲು ಮಾಡಿಕೊಂಡು ಆ ನಂತರ ಯಾವುದೇ ತರಬೇತಿ ಇಲ್ಲದೆ ವಂಚನೆ ಮಾಡುವ ಕಾಲೇಜುಗಳ ಹಗಲು ದರೋಡೆಗೆ ಕಡಿವಾಣ ಹಾಕುವಲ್ಲಿ ಶಿಕ್ಷಣ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕಿಡಿಕಾರಿದರು.
ಲಕ್ಷಾಂತರ ರೂಪಾಯಿ ಡೊನೇಷನ್ ನೀಡಿ ಹಾಜರಾತಿ ಮಾಡಿದ ನಂತರ ಮಕ್ಕಳ ಕನಸು ನನಸು ಮಾಡಲು ಉತ್ತಮ ತರಬೇತಿ ಪಡೆಯಲು ಮತ್ತೆ ಆಕಾಶ್ ಬೈಜುನ್ ಮತ್ತಿತರ ನೂರೊಂದು ಪರವಾನಿಗೆ ಇಲ್ಲದ ನಾಯಿಕೊಡೆಗಳಂತೆ ತೆಲೆ ಎತ್ತಿ ನಮ್ಮ ಸಂಸ್ಥೆ ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಅತಿ ಬುದ್ದಿವಂತ ಶಿಕ್ಷಕರಿಂದ ನೀಟ್ ಹಾಗೂ ಸಿ.ಇಟಿಗೆ ತರಬೇತಿ ನೀಡಿ ಉಚಿತವಾಗಿ ಡಾಕ್ಟರ್ ಇಂಜಿನಿಯರ್, ಕೋರ್ಸುಗಳನ್ನು ಪಡೆಯಬಹುದೆ ಎಂದು ಆಸೆ ಹುಟ್ಟಿಸಿ ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡಿ ತಮ್ಮ ನಿರೀಕ್ಷೆಗೆ ತಕ್ಕ ಹಾಜರಾತಿ ಆಗಿಲ್ಲವೆಂಬ ಒಂದೇ ಕಾರಣಕ್ಕೆ ವಿದ್ಯಾರ್ಥಿಗಳಿಗೆ ತರಬೇತಿ ನೀಡದೆ ವಂಚನೆ ಮಾಡುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗಿ ಕೂಲಿ ಮಾಡುವ ಪೋಷಕರು ಸಾಲ ಮಾಡಿ ಪಾವತಿಸಿರುವ ಶುಲ್ಕಕ್ಕೆ ಬೆಲೆ ಇಲ್ಲದಂತಾಗಿದೆ ಎಂದು ಅಸಮದಾನ ವ್ಯಕ್ತಪಡಿಸಿದರು.
ಆಕಾಶ್ ಬೈಜುನ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯನ್ನು ಕೇಳಿದರೆ ನಮಗೆ ನಿರೀಕ್ಷಿತ ಮಟ್ಟದಲ್ಲಿ ಹಾಜರಾತಿಯಾಗಿಲ್ಲ ಇರುವ 50 ಜನರಿಗೆ ಲಕ್ಷಾಂತರ ರೂಪಾಯಿ ಬಾಡಿಗೆ ಕೊಟ್ಟು ತರಗತಿ ನಡೆಸಲು ಸಾಧ್ಯವಿಲ್ಲ. ನಿಮ್ಮ ಮಕ್ಕಳಿಗೆ ತರಬೇತಿ ಬೇಕಾದರೆ ಬೆಂಗಳೂರಿಗೆ ಕಳುಹಿಸಿಕೊಡಿ ಎಂದು ಹೇಳುತ್ತಾರೆ. ಒಂದು ಕಡೆ ಹಣವು ಇಲ್ಲ ಮತ್ತೊಂದು ಕಡೆ ಮಕ್ಕಳಿಗೆ ತರಬೇತಿ ಇಲ್ಲದೆ, ಪರದಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪೋಷಕರಿಗೆ ದಿಕ್ಕು ತೋಚದಂತಾಗಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಜಿಲ್ಲಾಡಳಿತ ಮುಂದೆ ಬಂದು ನೊಂದ ರೈತ ಕೂಲಿ ಕಾರ್ಮಿಕರ ಮಕ್ಕಳಿಗೆ ನ್ಯಾಯ ಕೊಡಿಸಬೇಕು. ಇಲ್ಲವಾದರೆ ಭವಿಷ್ಯ ರೂಪಿಸಿಕೊಳ್ಳದ ನೂರಾರು ವಿದ್ಯಾರ್ಥಿಗಳು ತನ್ನ ಭವಿಷ್ಯವನ್ನು ಹಾಳು ಮಾಡಿಕೊಳ್ಳುವ ನೋವಿನಲ್ಲಿ ಆತ್ಮಹತ್ಯೆಗಳು ನಡೆದುಹೋಗುವ ಮೊದಲು ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕೆಂದು ಮನವಿ ಮಾಡಿದರು.
ಮನವಿ ಸ್ವೀಕರಿಸಿ ಮಾತನಾಡಿದ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ತೊಂದರೆಯಾಗದ ರೀತಿ ಕ್ರಮ ವಹಿಸಿ ಒಂದು ವೇಳೆ ವಿದ್ಯಾರ್ಥಿಗಳಿಗೆ ತರಬೇತಿ ನೀಡದೇ ಇದ್ದರೆ, ಆಕಾಶ್ ಬೈಜುನ್ ಶಿಕ್ಷಣ ಸಂಸ್ಥೆ ವಿರುದ್ದ ಕ್ರಿಮಿನಲ್ ಮೊಕದಮ್ಮೆ ದಾಖಲು ಮಾಡುವ ಭರವಸೆಯನ್ನು ನೀಡಿದರು.
ಹೋರಾಟದಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಮಂಗಸಂದ್ರ ತಿಮ್ಮಣ್ಣ, ಮುದುವಾಡಿ ಚಂದ್ರಪ್ಪ, ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ನೂರಾರು ಪೋಷಕರು, ವಿದ್ಯಾರ್ಥಿಗಳು, ಹಾಜರಿದ್ದರು.
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…