ಕೋಲಾರ: ಲಕ್ಷಾಂತರ ರೂಪಾಯಿ ಶುಲ್ಕ ಪಡೆದು ನೀಟ್, ಸಿಇಟಿ ತರಬೇತಿ ನೀಡುತ್ತೇವೆಂದು ವಿದ್ಯಾರ್ಥಿಗಳನ್ನು ವಂಚನೆ ಮಾಡುತ್ತಿರುವ ಆಕಾಶ್ ಬೈಜುಸ್ ಸಂಸ್ಥೆ ವಿರುದ್ಧ ಕ್ರಿಮಿನಲ್ ಮೊಕದಮ್ಮೆ ದಾಖಲು ಮಾಡಿ ನೊಂದಿರುವ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ರೈತ ಸಂಘದಿಂದ ಶಿಕ್ಷಣ ಸಂಸ್ಥೆ ಮುಂದೆ ಹೋರಾಟ ಮಾಡಿ ಆರಕ್ಷಕ ಉಪನಿರೀಕ್ಷಕ ಸಹೀದ್ ಅಹಮದ್ ಮುಖಾಂತರ ಜಿಲ್ಲಾಧಿಕರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.
ಶಿಕ್ಷಣ ವ್ಯವಸ್ಥೆ ವ್ಯಾಪಾರದ ಕಾರ್ಪೊರೇಟ್ ಕಂಪನಿಗಳ ಕಪಿಮುಷ್ಟಿಯಲ್ಲಿ ಸಿಲುಕಿ ಕೋಟ್ಯಾಂತರ ಪೋಷಕರ ಕನಸು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚಲ್ಲಾಟ ವಾಡುತ್ತಿದ್ದರು ಶಿಕ್ಷಣ ವ್ಯವಸ್ಥೆ ಹಾಗೂ ಕಾರ್ಪೋರೇಟ್ ಶಿಕ್ಷಣ ಸಂಸ್ಥೆ ಹೆಸರಿನಲ್ಲಿ ತರಬೇತಿ ನೀಡುವ ಪರವಾನಿಗೆ ಇಲ್ಲದ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ಶಿಕ್ಷಣ ಸಚಿವರು ವಿಫಲವಾಗಿದ್ದಾರೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಅವ್ಯವಸ್ಥೆ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ನಾಯಿ ಕೊಡೆಗಳಂತೆ ತಲೆ ಎತ್ತಿರುವ ಖಾಸಗಿ ಶಾಲಾ ಕಾಲೇಜುಗಳು ಪ್ರಥಮ ಮತ್ತು ದ್ವಿತೀಯ ಪಿಯುಸಿ (ವಿಜ್ಞಾನ) ತರಗತಿಗಳಿಗೆ ಹಾಜರಾತಿ ದಾಖಲು ಮಾಡಿಕೊಳ್ಳುವಾಗ ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ನಮ್ಮ ಶಾಲೆಗೆ ಸೇರಿಸಿ ನಿಮ್ಮ ಮಕ್ಕಳ ಭವಿಷ್ಯ ನಿಮ್ಮ ಕನಸನ್ನು ನನಸು ಮಾಡಲು ನೀಟ್, ಸಿಇಟಿ ವೃತ್ತಿಪರ ಕೋರ್ಸುಗಳಿಗೆ ಉಚಿತವಾಗಿ ತರಬೇತಿ ನೀಡುತ್ತೇವೆಂದು ದಾಖಲು ಮಾಡಿಕೊಂಡು ಆ ನಂತರ ಯಾವುದೇ ತರಬೇತಿ ಇಲ್ಲದೆ ವಂಚನೆ ಮಾಡುವ ಕಾಲೇಜುಗಳ ಹಗಲು ದರೋಡೆಗೆ ಕಡಿವಾಣ ಹಾಕುವಲ್ಲಿ ಶಿಕ್ಷಣ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕಿಡಿಕಾರಿದರು.
ಲಕ್ಷಾಂತರ ರೂಪಾಯಿ ಡೊನೇಷನ್ ನೀಡಿ ಹಾಜರಾತಿ ಮಾಡಿದ ನಂತರ ಮಕ್ಕಳ ಕನಸು ನನಸು ಮಾಡಲು ಉತ್ತಮ ತರಬೇತಿ ಪಡೆಯಲು ಮತ್ತೆ ಆಕಾಶ್ ಬೈಜುನ್ ಮತ್ತಿತರ ನೂರೊಂದು ಪರವಾನಿಗೆ ಇಲ್ಲದ ನಾಯಿಕೊಡೆಗಳಂತೆ ತೆಲೆ ಎತ್ತಿ ನಮ್ಮ ಸಂಸ್ಥೆ ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಅತಿ ಬುದ್ದಿವಂತ ಶಿಕ್ಷಕರಿಂದ ನೀಟ್ ಹಾಗೂ ಸಿ.ಇಟಿಗೆ ತರಬೇತಿ ನೀಡಿ ಉಚಿತವಾಗಿ ಡಾಕ್ಟರ್ ಇಂಜಿನಿಯರ್, ಕೋರ್ಸುಗಳನ್ನು ಪಡೆಯಬಹುದೆ ಎಂದು ಆಸೆ ಹುಟ್ಟಿಸಿ ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡಿ ತಮ್ಮ ನಿರೀಕ್ಷೆಗೆ ತಕ್ಕ ಹಾಜರಾತಿ ಆಗಿಲ್ಲವೆಂಬ ಒಂದೇ ಕಾರಣಕ್ಕೆ ವಿದ್ಯಾರ್ಥಿಗಳಿಗೆ ತರಬೇತಿ ನೀಡದೆ ವಂಚನೆ ಮಾಡುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗಿ ಕೂಲಿ ಮಾಡುವ ಪೋಷಕರು ಸಾಲ ಮಾಡಿ ಪಾವತಿಸಿರುವ ಶುಲ್ಕಕ್ಕೆ ಬೆಲೆ ಇಲ್ಲದಂತಾಗಿದೆ ಎಂದು ಅಸಮದಾನ ವ್ಯಕ್ತಪಡಿಸಿದರು.
ಆಕಾಶ್ ಬೈಜುನ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯನ್ನು ಕೇಳಿದರೆ ನಮಗೆ ನಿರೀಕ್ಷಿತ ಮಟ್ಟದಲ್ಲಿ ಹಾಜರಾತಿಯಾಗಿಲ್ಲ ಇರುವ 50 ಜನರಿಗೆ ಲಕ್ಷಾಂತರ ರೂಪಾಯಿ ಬಾಡಿಗೆ ಕೊಟ್ಟು ತರಗತಿ ನಡೆಸಲು ಸಾಧ್ಯವಿಲ್ಲ. ನಿಮ್ಮ ಮಕ್ಕಳಿಗೆ ತರಬೇತಿ ಬೇಕಾದರೆ ಬೆಂಗಳೂರಿಗೆ ಕಳುಹಿಸಿಕೊಡಿ ಎಂದು ಹೇಳುತ್ತಾರೆ. ಒಂದು ಕಡೆ ಹಣವು ಇಲ್ಲ ಮತ್ತೊಂದು ಕಡೆ ಮಕ್ಕಳಿಗೆ ತರಬೇತಿ ಇಲ್ಲದೆ, ಪರದಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪೋಷಕರಿಗೆ ದಿಕ್ಕು ತೋಚದಂತಾಗಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಜಿಲ್ಲಾಡಳಿತ ಮುಂದೆ ಬಂದು ನೊಂದ ರೈತ ಕೂಲಿ ಕಾರ್ಮಿಕರ ಮಕ್ಕಳಿಗೆ ನ್ಯಾಯ ಕೊಡಿಸಬೇಕು. ಇಲ್ಲವಾದರೆ ಭವಿಷ್ಯ ರೂಪಿಸಿಕೊಳ್ಳದ ನೂರಾರು ವಿದ್ಯಾರ್ಥಿಗಳು ತನ್ನ ಭವಿಷ್ಯವನ್ನು ಹಾಳು ಮಾಡಿಕೊಳ್ಳುವ ನೋವಿನಲ್ಲಿ ಆತ್ಮಹತ್ಯೆಗಳು ನಡೆದುಹೋಗುವ ಮೊದಲು ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕೆಂದು ಮನವಿ ಮಾಡಿದರು.
ಮನವಿ ಸ್ವೀಕರಿಸಿ ಮಾತನಾಡಿದ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ತೊಂದರೆಯಾಗದ ರೀತಿ ಕ್ರಮ ವಹಿಸಿ ಒಂದು ವೇಳೆ ವಿದ್ಯಾರ್ಥಿಗಳಿಗೆ ತರಬೇತಿ ನೀಡದೇ ಇದ್ದರೆ, ಆಕಾಶ್ ಬೈಜುನ್ ಶಿಕ್ಷಣ ಸಂಸ್ಥೆ ವಿರುದ್ದ ಕ್ರಿಮಿನಲ್ ಮೊಕದಮ್ಮೆ ದಾಖಲು ಮಾಡುವ ಭರವಸೆಯನ್ನು ನೀಡಿದರು.
ಹೋರಾಟದಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಮಂಗಸಂದ್ರ ತಿಮ್ಮಣ್ಣ, ಮುದುವಾಡಿ ಚಂದ್ರಪ್ಪ, ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ನೂರಾರು ಪೋಷಕರು, ವಿದ್ಯಾರ್ಥಿಗಳು, ಹಾಜರಿದ್ದರು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…