ವಿದ್ಯಾರ್ಥಿಗಳ ಪ್ರತಿಭೆಯನ್ನ ಶಿಕ್ಷಕರು, ಪೋಷಕರು ಪ್ರೋತ್ಸಾಹಿಸಬೇಕು- ಬಾಲನಟಿ ಎಂ.ಭೈರವಿ

ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿನ ಅವಕಾಶಗಳಿವೆ. ಪ್ರತಿಭೆಯನ್ನು ಪ್ರೋತ್ಸಾಹಿಸುವ ಕಡೆಗೆ ಶಿಕ್ಷಕರು ಮತ್ತು ಪೋಷಕರು ಗಮನನೀಡಬೇಕೆಂದು ಬಾಲನಟಿ ಎಂ.ಭೈರವಿ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಸಿರಿಗನ್ನಡ ಸಂಭ್ರಮ 2023  ಕಾರ್ಯಕ್ರಮದಲ್ಲಿ  ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಅಭ್ಯಾಸ ಮತ್ತು ಹವ್ಯಾಸಗಳನ್ನು ಇಷ್ಟಪಟ್ಟು ಮಾಡಬೇಕು. ವಿದ್ಯಾಭ್ಯಾಸ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆಯಾಗಬೇಕು. ಸಮಯಪಾಲನೆ, ಶಿಸ್ತು,  ಏಕಾಗ್ರತೆ, ಮಾರ್ಗದರ್ಶನ ವಿದ್ಯಾರ್ಥಿಗಳ ಯಶಸ್ಸಿಗೆ ಸಹಕಾರಿ ಆಗುತ್ತವೆ. ನಮ್ಮ ಪ್ರತಿಭೆ ನಮ್ಮ ದೇಶಕ್ಕೆ ದೊರೆಯಬೇಕು. ಬುದ್ದಿವಂತರು ವಿದೇಶಕ್ಕೆ ಹೋಗುವ  ವ್ಯಾಮೋಹ ಬಿಡಬೇಕು. ವಿದ್ಯಾರ್ಥಿಗಳು ಬಿಡುವಿನ ಸಮಯವನ್ನು ವ್ಯರ್ಥ ಮಾಡಬಾರದು. ನಮ್ಮ ಕನ್ನಡ ಭಾಷೆಯನ್ನು ನಿರ್ಲಕ್ಷಿಸಬಾರದು ಎಂದರು.

ಮುಖ್ಯ ಶಿಕ್ಷಕ ಆರ್.ನಾರಾಯಣಸ್ವಾಮಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲೂ ಅವರ ಸಾಮರ್ಥ್ಯಕ್ಕೆ ಅನುಗುಣವಾಗಿ ಪ್ರತಿಭೆ ಇರುತ್ತದೆ. ವಿದ್ಯೆಯೊಂದಿಗೆ ಪ್ರತಿಭೆಯನ್ನು ಅನಾವರಣಗೊಳಿಸಬೇಕು. ವಿದ್ಯೆಗೆ ವಿನಯವೇ ಆಧಾರವೆಂಬುದು ಸತ್ಯದ ಮಾತು. ವಿದ್ಯಾರ್ಥಿಗಳು ಪೋಷಕರನ್ನು ಮತ್ತು ಗುರುಗಳನ್ನು ಗೌರವಿಸುವ ಮತ್ತು ಪ್ರೀತಿಸುವ ಗುಣವನ್ನು ಮೊದಲು ರೂಢಿಸಿಕೊಳ್ಳಬೇಕು ಎಂದರು.

ಬಹುಮುಖ ಪ್ರತಿಭೆ ಎಂ.ಭೈರವಿ ಮತ್ತು ವಿದ್ಯಾರ್ಥಿಗಳ ನಡುವೆ ಸಂವಾದ ನಡೆಸಿಕೊಟ್ಟ ದೊಡ್ಡಬಳ್ಳಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಂಗಳಗೌರಿ, ಬಾಲನಟಿ ಭೈರವಿ ಅವರ ಯಶಸ್ಸಿನಲ್ಲಿ ತಂದೆ ಮತ್ತು ತಾಯಿ ಪ್ರೋತ್ಸಾಹ ಮತ್ತು ಪರಿಶ್ರಮ ಹೆಚ್ಚಾಗಿದೆ. ನ್ಯಾಯಾಧೀಶರಾಗಬೇಕೆಂಬದು ಕನಸು‌ ಹೊಂದಿರುವ ‌ಭೈರವಿ ಈಗಾಗಲೆ ಹಲವಾರು ಸಮಾಜಮುಖಿ‌ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಡ್ರಾಮಾ ಜೂನಿಯರ್ ಸೇರಿದಂತೆ ಹಲವು ಸಿನಿಮಾ, ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಪ್ರತಿಭೆಯಿಂದ ಹಲವು ಪುರಸ್ಕಾರಗಳಿಗೂ ಪಡೆದಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳಾದ ಕೆ.ಗಂಗೋತ್ರಿ, ಡಿ.ಹರ್ಷಿತ, ನಾಗಮಣಿ ಮತ್ತು ಎನ್.ನಂದಿತ ಅವರಿಗೆ ಅಭಿನಂದನೆ ನಡೆಯಿತು. ಸಮಾರಂಭದಲ್ಲಿ ಶಾಲಾಭಿವೃದ್ದಿ ಸಮತಿ ಅಧ್ಯಕ್ಷ ಮಾಳಯ್ಯ, ಸದಸ್ಯರುಗಳಾದ ಕೃಷ್ಣಮೂರ್ತಿ, ಶ್ಯಾಮಲ, ಮಹೇಶ್ ಹುಲಿಕುಂಟೆ, ಶಿಕ್ಷಕರುಗಳಾದ ಯೋಗನರಸಿಂಹಮೂರ್ತಿ, ಭಾಸ್ಕರ್, ಯಲ್ಲಪ್ಪಬಡಣ್ಣನವರ್, ರೂಪ, ಮೇಘನಾ, ವರಲಕ್ಷ್ಮಿ , ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

4 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago