ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯ ಹೆಚ್ಚಿಸಲು ರಸಪ್ರಶ್ನೆ ಸ್ಪರ್ಧೆ ಸಹಕಾರಿ- ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು

ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ  ಬೌದ್ಧಿಕ ಸಾಮರ್ಥ್ಯವನ್ನು ಮತ್ತು ಜ್ಞಾನದ ಮಟ್ಟವನ್ನು ಹೆಚ್ಚಿಸಲು ರಸಪ್ರಶ್ನೆ ಸ್ಪರ್ಧೆಗಳು ಸಹಕಾರಿ ಆಗುತ್ತವೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಕನಸವಾಡಿ ನೇತಾಜಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಂದ ದಿವಂಗತ ಜಿ.ಸತೀಶ್ ಸ್ಮರಣಾರ್ಥವಾಗಿ ನಡೆದ ಅಂತರ ಪ್ರೌಢಶಾಲೆ ರಸಪ್ರಶ್ನೆ  ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿ ಮಾತನಾಡಿದರು.

ರಸ ಪ್ರಶ್ನೆಗಳು‌ ಮನಸ್ಸಿನ ಕ್ರೀಡೆಗಳಾಗಿವೆ. ವಿದ್ಯಾರ್ಥಿಗಳ  ಜ್ಞಾನ, ಸಾಮರ್ಥ್ಯ ಮತ್ತು ಕೌಶಲ್ಯದ ಬೆಳವಣಿಗೆಯನ್ನು  ಅಳೆಯಲು ಮತ್ತು ಮೌಲ್ಯಮಾಪನ ಮಾಡಲು  ರಸಪ್ರಶ್ನೆಗಳನ್ನು ಬಳಸಬಹುದಾಗಿದೆ ಎಂದರು.

ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಜ್ಞಾನಕ್ಕೆ ಸೀಮಿತ  ಆಗಬಾರದು. ಸ್ಥಳೀಯ ಪರಿಸರದ ಜ್ಞಾನವನ್ನು ‌ಅರಿತಿರಬೇಕು. ನಮ್ಮ ಸುತ್ತ‌ಮುತ್ತಲ‌ ಕಲೆ, ಸಾಹಿತ್ಯ,  ಸಂಸ್ಕೃತಿಗಳ‌ ಪರಿಚಯ ಇರಬೇಕು. ನಮ್ಮ  ಜ್ಞಾನ, ವಿಜ್ಞಾನ ಮತ್ತು ಸಂಶೋಧನೆಗಳು  ಸಮಾಜದ ಬೆಳವಣಿಗೆಗೆ ಪೂರಕವಾಗಿರಬೇಕು. ಮಾನವೀಯ ಸಂಬಂಧಗಳನ್ನು ವೃದ್ದಿಗೊಳಿಸಬೇಕು. ಅಭಿವೃದ್ಧಿಯೊಂದಿಗೆ ಜನತೆಯ ಜೀವನದ ಗುಣಮಟ್ಟ ಸುಧಾರಣೆ ಆಗಬೇಕಾಗಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸೈಯೀದ್ ಅನೀಸ್ ಮಾತನಾಡಿ,  ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಭೆಗೆ ಮನ್ನಣೆ ಇದೆ.‌ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸುವಲ್ಲಿ  ಶಿಕ್ಷಕರ ಮತ್ತು ಪೋಷಕರ ಪಾತ್ರ ಮಹತ್ವದಾಗಿದೆ. ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ಸೂಕ್ತ ವೇದಿಕೆಗಳನ್ನು ಕಲ್ಪಿಸಬೇಕು ಜವಾಬ್ದಾರಿಯನ್ನು  ವಿದ್ಯಾಸಂಸ್ಥೆಗಳು ಮಾಡಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ನೇತಾಜಿ ಎಜುಕೇಷನ್ ಟ್ರಸ್ಟ್ ಅಧ್ಯಕ್ಷೆ  ವಸಂತರಘು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ‌ ಸೋಮಶೇಖರ್, ನೇತಾಜಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಟಿ.ರಂಗಸ್ವಾಮಿ, ವಾಣಿಜ್ಯ ತೆರಿಗೆ ಅಧಿಕಾರಿ ಟಿ.ಸಿ.ವೆಂಕಟಾಚಲಪತಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಿ.ಶಶಿಶೇಖರಯ್ಯ, ಪ್ರೌಢಶಾಲೆ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಮುನಿಕೃಷ್ಣಪ್ಪ, ಕಾರ್ಯದರ್ಶಿ  ಚೌಧರಿ,  ವಿವಿಧ‌  ಪ್ರೌಢಶಾಲೆಯ ಮುಖ್ಯಶಿಕ್ಷಕರು, ಸಹಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜೇತರು : ಕೆ.ಎಂ ನವ್ಯಾ ಮತ್ತು ಡಿ.ಹರ್ಷಿತಾ ಚಿಕ್ಕನಾಯಕನಹಳ್ಳಿ ಕಿತ್ತೂರುರಾಣಿ ಚೆನ್ನಮ್ಮ ವಸತಿ ಪ್ರೌಢ ಶಾಲೆ ಪ್ರಥಮ ಸ್ಥಾನ

ಟಿ.ಚಿರಂಜೀವಿ ಮತ್ತು ಎಸ್.ರಾಮು ದೊಡ್ಡಬಳ್ಳಾಪುರ ಸರಸ್ವತಿ ಪ್ರೌಢಶಾಲೆ  ದ್ವಿತೀಯ ಸ್ಥಾನ

ದರ್ಶನ್ ಎನ್.ಗೌಡ ಮತ್ತು ಡಿ.ಸಾಯಿಆನಂದರಾವ್ ದೊಡ್ಡಬಳ್ಳಾಪುರ ದೇವರಾಜ ಅರಸು ಪ್ರೌಢಶಾಲೆ ತೃತೀಯ ಸ್ಥಾನ  ಪಡೆದರು.

ರಸ ಸ್ಪರ್ಧೆಯನ್ನು ಡಾ.ಜಿ.ಎನ್.ಮಂಜುನಾಥ್, ಎಸ್.ವೇಣುಗೋಪಾಲ್, ಆರ್.ಶಿವಕುಮಾರ್, ಚಂದ್ರಶೇಖರ್, ರಮೇಶ್, ಜಿ.ಎನ್.ನವೀನ್ ಕುಮಾರ್ ನಡೆಸಿಕೊಟ್ಟರು.

Ramesh Babu

Journalist

Recent Posts

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

57 minutes ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

7 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

18 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

19 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

20 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

22 hours ago