ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಾರ್ಷಿಕ 30,000 ರೂ. ದಂತೆ ಒಟ್ಟು 37,000 ವಿದ್ಯಾರ್ಥಿನಿಯರಿಗೆ ’ದೀಪಿಕಾ ವಿದ್ಯಾರ್ಥಿ ವೇತನ’ ನೀಡುವ ಈ ಯೋಜನೆಯಿಂದ ಬಡಹೆಣ್ಣುಮಕ್ಕಳಿಗೆ ಹೆಚ್ಚಿನ ಲಾಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ರಾಜ್ಯದ ವಿದ್ಯಾರ್ಥಿನಿಯರಿಗಾಗಿ (ದೀಪಿಕಾ) ಉನ್ನತ ಶಿಕ್ಷಣ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಮ್ಮ ರಾಜ್ಯದ ಪ್ರತಿಷ್ಠಿತ ಐಟಿ ದಿಗ್ಗಜರಾದ ಶ್ರೀ ಅಜೀಂ ಪ್ರೇಂಜಿ ಅವರು ಅಜೀಂ ಪ್ರೇಂಜಿ ಫೌಂಡೇಶನ್ ನ ಮೂಲಕ ಅನೇಕ ಜನಪರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಪೂರೈಸುತ್ತಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣದಲ್ಲಿ ತೊಡಗುವಂತಾಗುವ ದೃಷ್ಠಿಯಿಂದ ‘’ದೀಪಿಕಾ ವಿದ್ಯಾರ್ಥಿ ವೇತನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಎಂದರು.
ಈ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ ರೂ.30,000/- ಗಳನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತದೆ. ಈ ವರ್ಷ ಅಜೀಂ ಪ್ರೇಂಜಿ ಫೌಂಡೇಶನ್ ನಿಂದ ಒಟ್ಟು 37,000 ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವುದಕ್ಕೆ ವಿದ್ಯಾರ್ಥಿನಿಯರು ಹತ್ತನೇ ತರಗತಿಯನ್ನು ಮತ್ತು 12ನೇ ತರಗತಿಯನ್ನು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಪೂರ್ಣಗೊಳಿಸಿರಬೇಕು. ಈ ಯೋಜನೆಯ ಲಾಭ ಪಡೆಯಬೇಕಾದರೆ, ವಿದ್ಯಾರ್ಥಿನಿಯರು ಪ್ರತಿ ವರ್ಷ ತಪ್ಪದೇ ಉತೀರ್ಣರಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದ ಮಕ್ಕಳಾಗಿದ್ದು, ಇಂತಹ ವಿದ್ಯಾರ್ಥಿನಿಯರಿಗೆ ಅನುಕೂಲವಾಗಲೆಂಬ ಸದುದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಿದ್ದಾರೆ ಎಂದು ಹೇಳಿದರು.
ನಮ್ಮ ದೇಶದಲ್ಲಿ ಹಿಂದಿನಿಂದಲೂ ಶೂದ್ರರಂತೆ, ಹೆಣ್ಣುಮಕ್ಕಳೂ ಸಹ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಶಿಕ್ಷಣ ಪಡೆದ ಹೆಣ್ಣುಮಕ್ಕಳ ಸರಾಸರಿ, ರಾಷ್ಟ್ರೀಯ ಶಿಕ್ಷಿತರ ಸರಾಸರಿಗಿಂತ ಕಡಿಮೆಯಿದೆ. ಹೆಣ್ಣುಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಿತರಾಗಬೇಕೆಂಬ ಸರ್ಕಾರದ ಉದ್ದೇಶದಲ್ಲಿ ಕೈಜೋಡಿಸಿರುವ ಅಜೀಂ ಪ್ರೇಮ್ ಜೀ ಅವರಿಗೆ ಅಭಿನಂದನೆಗಳು ಎಂದು ತಿಳಿಸಿದರು.
ಹೆಣ್ಣುಮಕ್ಕಳು ಬಾಲ್ಯ ವಿವಾಹ, ಬಾಲ ಗರ್ಭಿಣಿಯರ ಸಮಸ್ಯೆ, ಪೋಕ್ಸೋ ಸಮಸ್ಯೆಗಳು, ಬಾಲ ಕಾರ್ಮಿಕ ಪದ್ಧತಿಗಳಿಗೆ ಬಲಿಯಾಗುತ್ತಿದ್ದಾರೆ. ಆದ್ದರಿಂದ ಹೆಣ್ಣುಮಕ್ಕಳಿಗೆ ಶಿಕ್ಷಣ ಅತ್ಯಗತ್ಯ. ಮಹಿಳೆಯರು ಸ್ವಾವಲಂಬಿಗಳಾಗಲು ವಿದ್ಯೆ ಅತ್ಯವಶ್ಯ. ನಮ್ಮ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತದೆ. ಮಹಿಳೆಯರಿಗೆ ಶಿಕ್ಷಣ ದೊರೆತರೆ, ಸಮಾಜದ ಸವಾಲುಗಳನ್ನು ಎದುರಿಸಲು ಸಮರ್ಥರಾಗುತ್ತಾರೆ ಎಂದರು.
ಸಮಾಜದಲ್ಲಿನ ಅಸಮಾನತೆಯನ್ನು ನಿವಾರಿಸದ ಹೊರತು ಸಮಸಮಾಜದ ನಿರ್ಮಾಣ ಸಾಧ್ಯವಿಲ್ಲ. ಸಮಾಜದಲ್ಲಿ ಮೂಢನಂಬಿಕೆ ಹಾಗೂ ಮೌಢ್ಯಗಳ ನಿವಾರಣೆಯಾಗಲು ವೈಚಾರಿಕತೆ ಹಾಗೂ ವೈಜ್ಞಾನಿಕ ಶಿಕ್ಷಣ ಅಗತ್ಯ. ಇಂತಹ ಅಜ್ಞಾನದ ಲಾಭವನ್ನು ಪಟ್ಟಭದ್ರಹಿತಾಸಕ್ತಿಗಳು ಪಡೆಯುತ್ತಿದ್ದು, ಇದರಿಂದ ಪಾರಾಗಲು ಶಿಕ್ಷಣವಿರಬೇಕು ಎಂದು ಹೇಳಿದರು.
ಮಹಾತ್ಮಾ ಗಾಂಧೀಜಿಯವರು ‘ನೀವು ಗಳಿಸಿದ ಸಂಪತ್ತು ಸಮಾಜದ ಒಳಿತಿಗೆ ಬಳಕೆಯಾಗಬೇಕು’ ಎಂದಂತೆ ಅಜೀಂಪ್ರೇಂ ಜೀ ಅವರು ತಾವು ಗಳಿಸಿದ ಸಂಪತ್ತನ್ನು ಸಾಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಿರುವುದು ಸ್ವಾಗತಾರ್ಹ. ಕರ್ನಾಟಕದಲ್ಲಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಮೊಟ್ಟೆ ಕೊಡುವ 1,500 ಕೋಟಿ ರೂಪಾಯಿಗಳ ಯೋಜನೆಗೆ ಕಳೆದ ವರ್ಷ ಒಡಂಬಡಿಕೆ ಮಾಡಿಕೊಂಡಿದ್ದೆವು. ಈ ವರ್ಷ ಉನ್ನತ ಶಿಕ್ಷಣಕ್ಕೆ ಬರುವ ಹೆಣ್ಣುಮಕ್ಕಳಿಗೆ ವಿದ್ಯಾರ್ಥಿ ವೇತನದ ರೂಪದಲ್ಲಿ ನೆರವು ನೀಡಲು ಮುಂದೆ ಬಂದಿದ್ದಾರೆ. ಇದು ಸಂತೋಷದ ವಿಷಯ ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…