ಧಾರವಾಡ: ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯೋರ್ವಳು ಬರ್ಬರವಾಗಿ ಹತ್ಯೆಗೀಡಾಗಿದ್ದಾಳೆ.
ಲ್ಯಾಬ್ಗೆ ಹೋಗಿದ್ದ ಝಕಿಯಾ ಮುಲ್ಲಾ ಶವ ಇಂದು ಬೆಳಗ್ಗೆ ನಗರದ ಹೊರವಲಯದಲ್ಲಿ ಪತ್ತೆಯಾಗಿದೆ.
ಮೃತ ವಿದ್ಯಾರ್ಥಿನಿ ಧಾರವಾಡದ ಗಾಂಧಿ ಚೌಕ್ ನಿವಾಸಿಯಾಗಿದ್ದ 19 ವರ್ಷದ ಝಕಿಯಾ ಮುಲ್ಲಾ ಎಂದು ತಿಳಿದುಬಂದಿದೆ. ಮಂಗಳವಾರ ಸಂಜೆ ಮನೆಯಿಂದ ಲ್ಯಾಬ್ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ವಿದ್ಯಾರ್ಥಿನಿ, ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ.
ಇದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು. ಇಂದು ಮುಂಜಾನೆ ಮನಸೂರು ರಸ್ತೆಯ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸೇರಿದ ವಿನಯ್ ಡೈರಿ ಸಮೀಪ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.
ಬೇರೆ ಕಡೆ ವಿದ್ಯಾರ್ಥಿನಿಯನ್ನು ಕೊಲೆ ಮಾಡಿ, ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಇಲ್ಲಿಗೆ ತಂದು ಶವವನ್ನು ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಧಾರವಾಡ ಗ್ರಾಮೀಣ ಹಾಗೂ ವಿದ್ಯಾಗಿರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಕೊಲೆ ಕುರಿತಂತೆ ಹೆಚ್ಚಿನ ಮಾಹಿತಿ ತಿಳಿಯಲಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…
ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…
ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…