ವಿದ್ಯಾರ್ಥಿಯ ಬಾಳಿಗೆ ಬೆಳಕಾಗಬೇಕಾದ ಶಿಕ್ಷಕಿಯೇ ವಿದ್ಯಾರ್ಥಿ ಪಾಲಿಗೆ ಕತ್ತಲಾದರೇ: ತಾನು ಮಾಡದ ತಪ್ಪಿಗೆ ಚಿಕ್ಕ ವಯಸ್ಸಿನಲ್ಲೇ ಶಿಕ್ಷಕಿಯ ಎಡವಟ್ಟಿನಿಂದ ಕಣ್ಣು ಕಳೆದುಕೊಂಡ ಬಾಲಕ

ವಿದ್ಯಾರ್ಥಿಯ ಬಾಳಿಗೆ ಬೆಳಕು ಆಗಬೇಕಾದ ಶಿಕ್ಷಕಿಯೇ ವಿದ್ಯಾರ್ಥಿ ಬಾಳು ಕತ್ತಲಾಗುವಂತೆ ಮಾಡಿದ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿ ಬಂದಿದೆ.

ಓರ್ವ ಶಿಕ್ಷಕಿ ಮಾಡಿದ ಎಡವಟ್ಟಿನಿಂದ ವಿದ್ಯಾರ್ಥಿ ತನ್ನ ಕಣ್ಣು ಕಳೆದುಕೊಂಡಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ.

ಘಟನೆ ನಡೆದು ಒಂದು ವರ್ಷ ಕಳೆದರೂ, ಶಿಕ್ಷಕಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪವು ಸಹ ಕೇಳಿಬಂದಿದೆ. ಸದ್ಯ ಪೋಷಕರು ನ್ಯಾಯಕ್ಕಾಗಿ ಹೋರಾಟ ನಡೆಸಿದ್ದು, ಶಿಕ್ಷಣ ಇಲಾಖೆಯಿಂದ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಘಟನೆ ವಿವರ

ಬಾಲಕನ ಹೆಸರು ಯಶವಂತ್. ಚಿಂತಾಮಣಿ ತಾಲೂಕಿನ ಯಗವಕೋಟೆ ಗ್ರಾಮದ ನಟರಾಜ್ ಹಾಗೂ ಅಂಕಿತಾ ದಂಪತಿಗಳ ಎರಡನೇ ಮಗನಾಗಿರುವ ಯಶ್ವಂತ್, ಅದೇ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸದ್ಯ 2 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ.

ತಾನು ಮಾಡದ ತಪ್ಪಿಗೆ ಚಿಕ್ಕ ವಯಸ್ಸಿನಲ್ಲೇ ಬಾಲಕ ಕಣ್ಣು ಕಳೆದುಕೊಂಡಿದ್ದಾನೆ. ಸಿಟ್ಟಿನ ಭರದಲ್ಲಿ ಶಿಕ್ಷಕಿ ಬೀಸಿದ ಕೋಲು 1 ವರ್ಷದ ನಂತರ ಬಾಲಕನ ದೃಷ್ಟಿಯೇ ಸಂಪೂರ್ಣ ಕಾಣದಂತಾಗಿದೆ. ಪೋಷಕರು ನ್ಯಾಯಕ್ಕಾಗಿ ಆಗ್ರಹಿಸಿ ಜಿಲ್ಲೆಯ ಚಿಂತಾಮಣಿ ಮಗರದ ಬಿಇಒ ಕಚೇರಿ ಎದುರು ಧರಣಿ ಮಾಡಿರುವಂತಹ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!