ವಿದ್ಯಾರ್ಥಿಯ ಬಾಳಿಗೆ ಬೆಳಕಾಗಬೇಕಾದ ಶಿಕ್ಷಕಿಯೇ ವಿದ್ಯಾರ್ಥಿ ಪಾಲಿಗೆ ಕತ್ತಲಾದರೇ: ತಾನು ಮಾಡದ ತಪ್ಪಿಗೆ ಚಿಕ್ಕ ವಯಸ್ಸಿನಲ್ಲೇ ಶಿಕ್ಷಕಿಯ ಎಡವಟ್ಟಿನಿಂದ ಕಣ್ಣು ಕಳೆದುಕೊಂಡ ಬಾಲಕ

ವಿದ್ಯಾರ್ಥಿಯ ಬಾಳಿಗೆ ಬೆಳಕು ಆಗಬೇಕಾದ ಶಿಕ್ಷಕಿಯೇ ವಿದ್ಯಾರ್ಥಿ ಬಾಳು ಕತ್ತಲಾಗುವಂತೆ ಮಾಡಿದ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿ ಬಂದಿದೆ.

ಓರ್ವ ಶಿಕ್ಷಕಿ ಮಾಡಿದ ಎಡವಟ್ಟಿನಿಂದ ವಿದ್ಯಾರ್ಥಿ ತನ್ನ ಕಣ್ಣು ಕಳೆದುಕೊಂಡಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ.

ಘಟನೆ ನಡೆದು ಒಂದು ವರ್ಷ ಕಳೆದರೂ, ಶಿಕ್ಷಕಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪವು ಸಹ ಕೇಳಿಬಂದಿದೆ. ಸದ್ಯ ಪೋಷಕರು ನ್ಯಾಯಕ್ಕಾಗಿ ಹೋರಾಟ ನಡೆಸಿದ್ದು, ಶಿಕ್ಷಣ ಇಲಾಖೆಯಿಂದ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಘಟನೆ ವಿವರ

ಬಾಲಕನ ಹೆಸರು ಯಶವಂತ್. ಚಿಂತಾಮಣಿ ತಾಲೂಕಿನ ಯಗವಕೋಟೆ ಗ್ರಾಮದ ನಟರಾಜ್ ಹಾಗೂ ಅಂಕಿತಾ ದಂಪತಿಗಳ ಎರಡನೇ ಮಗನಾಗಿರುವ ಯಶ್ವಂತ್, ಅದೇ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸದ್ಯ 2 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ.

ತಾನು ಮಾಡದ ತಪ್ಪಿಗೆ ಚಿಕ್ಕ ವಯಸ್ಸಿನಲ್ಲೇ ಬಾಲಕ ಕಣ್ಣು ಕಳೆದುಕೊಂಡಿದ್ದಾನೆ. ಸಿಟ್ಟಿನ ಭರದಲ್ಲಿ ಶಿಕ್ಷಕಿ ಬೀಸಿದ ಕೋಲು 1 ವರ್ಷದ ನಂತರ ಬಾಲಕನ ದೃಷ್ಟಿಯೇ ಸಂಪೂರ್ಣ ಕಾಣದಂತಾಗಿದೆ. ಪೋಷಕರು ನ್ಯಾಯಕ್ಕಾಗಿ ಆಗ್ರಹಿಸಿ ಜಿಲ್ಲೆಯ ಚಿಂತಾಮಣಿ ಮಗರದ ಬಿಇಒ ಕಚೇರಿ ಎದುರು ಧರಣಿ ಮಾಡಿರುವಂತಹ ಘಟನೆ ನಡೆದಿದೆ.

Ramesh Babu

Journalist

Recent Posts

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

3 hours ago

ಅಕ್ರಮ ಸಂಬಂಧ.. ಪ್ರಿಯತಮೆಯನ್ನ ಬ*ರ್ಬರವಾಗಿ ಕೊಂ*ದು ನೇ*ಣಿಗೆ ಶರಣಾದ ಪ್ರಿಯಕರ.!

ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…

3 hours ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ವೈದ್ಯ, ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

23 hours ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರು ಸೇರಿದಂತೆ ಇತರೆ ಸಾಧಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

1 day ago

ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ₹400 ಕೋಟಿ ದರೋಡೆ ಪ್ರಕರಣ: ದಟ್ಟಾರಣ್ಯದ ಮೌನದಲ್ಲಿ ಅಡಗಿದ್ದ ಭೀಕರ ರಹಸ್ಯ..ಬೆಚ್ಚಿಬೀಳಿಸುವ ಪ್ರಮುಖ ಅಂಶಗಳು…ಇಲ್ಲಿವೆ ಓದಿ…

ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…

1 day ago

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಕರ್ನಾಟಕದ 8 ಮಂದಿಯು ಈ ನಾಗರಿಕ ಗೌರವಕ್ಕೆ ಭಾಜನ

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…

2 days ago