ವಿದ್ಯಾರ್ಥಿಯ ಬಾಳಿಗೆ ಬೆಳಕಾಗಬೇಕಾದ ಶಿಕ್ಷಕಿಯೇ ವಿದ್ಯಾರ್ಥಿ ಪಾಲಿಗೆ ಕತ್ತಲಾದರೇ: ತಾನು ಮಾಡದ ತಪ್ಪಿಗೆ ಚಿಕ್ಕ ವಯಸ್ಸಿನಲ್ಲೇ ಶಿಕ್ಷಕಿಯ ಎಡವಟ್ಟಿನಿಂದ ಕಣ್ಣು ಕಳೆದುಕೊಂಡ ಬಾಲಕ

ವಿದ್ಯಾರ್ಥಿಯ ಬಾಳಿಗೆ ಬೆಳಕು ಆಗಬೇಕಾದ ಶಿಕ್ಷಕಿಯೇ ವಿದ್ಯಾರ್ಥಿ ಬಾಳು ಕತ್ತಲಾಗುವಂತೆ ಮಾಡಿದ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿ ಬಂದಿದೆ.

ಓರ್ವ ಶಿಕ್ಷಕಿ ಮಾಡಿದ ಎಡವಟ್ಟಿನಿಂದ ವಿದ್ಯಾರ್ಥಿ ತನ್ನ ಕಣ್ಣು ಕಳೆದುಕೊಂಡಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ.

ಘಟನೆ ನಡೆದು ಒಂದು ವರ್ಷ ಕಳೆದರೂ, ಶಿಕ್ಷಕಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪವು ಸಹ ಕೇಳಿಬಂದಿದೆ. ಸದ್ಯ ಪೋಷಕರು ನ್ಯಾಯಕ್ಕಾಗಿ ಹೋರಾಟ ನಡೆಸಿದ್ದು, ಶಿಕ್ಷಣ ಇಲಾಖೆಯಿಂದ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಘಟನೆ ವಿವರ

ಬಾಲಕನ ಹೆಸರು ಯಶವಂತ್. ಚಿಂತಾಮಣಿ ತಾಲೂಕಿನ ಯಗವಕೋಟೆ ಗ್ರಾಮದ ನಟರಾಜ್ ಹಾಗೂ ಅಂಕಿತಾ ದಂಪತಿಗಳ ಎರಡನೇ ಮಗನಾಗಿರುವ ಯಶ್ವಂತ್, ಅದೇ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸದ್ಯ 2 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ.

ತಾನು ಮಾಡದ ತಪ್ಪಿಗೆ ಚಿಕ್ಕ ವಯಸ್ಸಿನಲ್ಲೇ ಬಾಲಕ ಕಣ್ಣು ಕಳೆದುಕೊಂಡಿದ್ದಾನೆ. ಸಿಟ್ಟಿನ ಭರದಲ್ಲಿ ಶಿಕ್ಷಕಿ ಬೀಸಿದ ಕೋಲು 1 ವರ್ಷದ ನಂತರ ಬಾಲಕನ ದೃಷ್ಟಿಯೇ ಸಂಪೂರ್ಣ ಕಾಣದಂತಾಗಿದೆ. ಪೋಷಕರು ನ್ಯಾಯಕ್ಕಾಗಿ ಆಗ್ರಹಿಸಿ ಜಿಲ್ಲೆಯ ಚಿಂತಾಮಣಿ ಮಗರದ ಬಿಇಒ ಕಚೇರಿ ಎದುರು ಧರಣಿ ಮಾಡಿರುವಂತಹ ಘಟನೆ ನಡೆದಿದೆ.

Ramesh Babu

Journalist

Recent Posts

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

12 hours ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

23 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

1 day ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

1 day ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

1 day ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago