ವಿದ್ಯಾರ್ಥಿಯ ಬಾಳಿಗೆ ಬೆಳಕು ಆಗಬೇಕಾದ ಶಿಕ್ಷಕಿಯೇ ವಿದ್ಯಾರ್ಥಿ ಬಾಳು ಕತ್ತಲಾಗುವಂತೆ ಮಾಡಿದ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿ ಬಂದಿದೆ.
ಓರ್ವ ಶಿಕ್ಷಕಿ ಮಾಡಿದ ಎಡವಟ್ಟಿನಿಂದ ವಿದ್ಯಾರ್ಥಿ ತನ್ನ ಕಣ್ಣು ಕಳೆದುಕೊಂಡಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ.
ಘಟನೆ ನಡೆದು ಒಂದು ವರ್ಷ ಕಳೆದರೂ, ಶಿಕ್ಷಕಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪವು ಸಹ ಕೇಳಿಬಂದಿದೆ. ಸದ್ಯ ಪೋಷಕರು ನ್ಯಾಯಕ್ಕಾಗಿ ಹೋರಾಟ ನಡೆಸಿದ್ದು, ಶಿಕ್ಷಣ ಇಲಾಖೆಯಿಂದ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಘಟನೆ ವಿವರ
ಬಾಲಕನ ಹೆಸರು ಯಶವಂತ್. ಚಿಂತಾಮಣಿ ತಾಲೂಕಿನ ಯಗವಕೋಟೆ ಗ್ರಾಮದ ನಟರಾಜ್ ಹಾಗೂ ಅಂಕಿತಾ ದಂಪತಿಗಳ ಎರಡನೇ ಮಗನಾಗಿರುವ ಯಶ್ವಂತ್, ಅದೇ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸದ್ಯ 2 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ.
ತಾನು ಮಾಡದ ತಪ್ಪಿಗೆ ಚಿಕ್ಕ ವಯಸ್ಸಿನಲ್ಲೇ ಬಾಲಕ ಕಣ್ಣು ಕಳೆದುಕೊಂಡಿದ್ದಾನೆ. ಸಿಟ್ಟಿನ ಭರದಲ್ಲಿ ಶಿಕ್ಷಕಿ ಬೀಸಿದ ಕೋಲು 1 ವರ್ಷದ ನಂತರ ಬಾಲಕನ ದೃಷ್ಟಿಯೇ ಸಂಪೂರ್ಣ ಕಾಣದಂತಾಗಿದೆ. ಪೋಷಕರು ನ್ಯಾಯಕ್ಕಾಗಿ ಆಗ್ರಹಿಸಿ ಜಿಲ್ಲೆಯ ಚಿಂತಾಮಣಿ ಮಗರದ ಬಿಇಒ ಕಚೇರಿ ಎದುರು ಧರಣಿ ಮಾಡಿರುವಂತಹ ಘಟನೆ ನಡೆದಿದೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…