ವಿದ್ಯಾರ್ಥಿಯ ಬಾಳಿಗೆ ಬೆಳಕಾಗಬೇಕಾದ ಶಿಕ್ಷಕಿಯೇ ವಿದ್ಯಾರ್ಥಿ ಪಾಲಿಗೆ ಕತ್ತಲಾದರೇ: ತಾನು ಮಾಡದ ತಪ್ಪಿಗೆ ಚಿಕ್ಕ ವಯಸ್ಸಿನಲ್ಲೇ ಶಿಕ್ಷಕಿಯ ಎಡವಟ್ಟಿನಿಂದ ಕಣ್ಣು ಕಳೆದುಕೊಂಡ ಬಾಲಕ

ವಿದ್ಯಾರ್ಥಿಯ ಬಾಳಿಗೆ ಬೆಳಕು ಆಗಬೇಕಾದ ಶಿಕ್ಷಕಿಯೇ ವಿದ್ಯಾರ್ಥಿ ಬಾಳು ಕತ್ತಲಾಗುವಂತೆ ಮಾಡಿದ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿ ಬಂದಿದೆ.

ಓರ್ವ ಶಿಕ್ಷಕಿ ಮಾಡಿದ ಎಡವಟ್ಟಿನಿಂದ ವಿದ್ಯಾರ್ಥಿ ತನ್ನ ಕಣ್ಣು ಕಳೆದುಕೊಂಡಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ.

ಘಟನೆ ನಡೆದು ಒಂದು ವರ್ಷ ಕಳೆದರೂ, ಶಿಕ್ಷಕಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪವು ಸಹ ಕೇಳಿಬಂದಿದೆ. ಸದ್ಯ ಪೋಷಕರು ನ್ಯಾಯಕ್ಕಾಗಿ ಹೋರಾಟ ನಡೆಸಿದ್ದು, ಶಿಕ್ಷಣ ಇಲಾಖೆಯಿಂದ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಘಟನೆ ವಿವರ

ಬಾಲಕನ ಹೆಸರು ಯಶವಂತ್. ಚಿಂತಾಮಣಿ ತಾಲೂಕಿನ ಯಗವಕೋಟೆ ಗ್ರಾಮದ ನಟರಾಜ್ ಹಾಗೂ ಅಂಕಿತಾ ದಂಪತಿಗಳ ಎರಡನೇ ಮಗನಾಗಿರುವ ಯಶ್ವಂತ್, ಅದೇ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸದ್ಯ 2 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ.

ತಾನು ಮಾಡದ ತಪ್ಪಿಗೆ ಚಿಕ್ಕ ವಯಸ್ಸಿನಲ್ಲೇ ಬಾಲಕ ಕಣ್ಣು ಕಳೆದುಕೊಂಡಿದ್ದಾನೆ. ಸಿಟ್ಟಿನ ಭರದಲ್ಲಿ ಶಿಕ್ಷಕಿ ಬೀಸಿದ ಕೋಲು 1 ವರ್ಷದ ನಂತರ ಬಾಲಕನ ದೃಷ್ಟಿಯೇ ಸಂಪೂರ್ಣ ಕಾಣದಂತಾಗಿದೆ. ಪೋಷಕರು ನ್ಯಾಯಕ್ಕಾಗಿ ಆಗ್ರಹಿಸಿ ಜಿಲ್ಲೆಯ ಚಿಂತಾಮಣಿ ಮಗರದ ಬಿಇಒ ಕಚೇರಿ ಎದುರು ಧರಣಿ ಮಾಡಿರುವಂತಹ ಘಟನೆ ನಡೆದಿದೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago