ವಿದ್ಯಾರ್ಥಿಯ ಬಾಳಿಗೆ ಬೆಳಕು ಆಗಬೇಕಾದ ಶಿಕ್ಷಕಿಯೇ ವಿದ್ಯಾರ್ಥಿ ಬಾಳು ಕತ್ತಲಾಗುವಂತೆ ಮಾಡಿದ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿ ಬಂದಿದೆ.
ಓರ್ವ ಶಿಕ್ಷಕಿ ಮಾಡಿದ ಎಡವಟ್ಟಿನಿಂದ ವಿದ್ಯಾರ್ಥಿ ತನ್ನ ಕಣ್ಣು ಕಳೆದುಕೊಂಡಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ.
ಘಟನೆ ನಡೆದು ಒಂದು ವರ್ಷ ಕಳೆದರೂ, ಶಿಕ್ಷಕಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪವು ಸಹ ಕೇಳಿಬಂದಿದೆ. ಸದ್ಯ ಪೋಷಕರು ನ್ಯಾಯಕ್ಕಾಗಿ ಹೋರಾಟ ನಡೆಸಿದ್ದು, ಶಿಕ್ಷಣ ಇಲಾಖೆಯಿಂದ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಘಟನೆ ವಿವರ
ಬಾಲಕನ ಹೆಸರು ಯಶವಂತ್. ಚಿಂತಾಮಣಿ ತಾಲೂಕಿನ ಯಗವಕೋಟೆ ಗ್ರಾಮದ ನಟರಾಜ್ ಹಾಗೂ ಅಂಕಿತಾ ದಂಪತಿಗಳ ಎರಡನೇ ಮಗನಾಗಿರುವ ಯಶ್ವಂತ್, ಅದೇ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸದ್ಯ 2 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ.
ತಾನು ಮಾಡದ ತಪ್ಪಿಗೆ ಚಿಕ್ಕ ವಯಸ್ಸಿನಲ್ಲೇ ಬಾಲಕ ಕಣ್ಣು ಕಳೆದುಕೊಂಡಿದ್ದಾನೆ. ಸಿಟ್ಟಿನ ಭರದಲ್ಲಿ ಶಿಕ್ಷಕಿ ಬೀಸಿದ ಕೋಲು 1 ವರ್ಷದ ನಂತರ ಬಾಲಕನ ದೃಷ್ಟಿಯೇ ಸಂಪೂರ್ಣ ಕಾಣದಂತಾಗಿದೆ. ಪೋಷಕರು ನ್ಯಾಯಕ್ಕಾಗಿ ಆಗ್ರಹಿಸಿ ಜಿಲ್ಲೆಯ ಚಿಂತಾಮಣಿ ಮಗರದ ಬಿಇಒ ಕಚೇರಿ ಎದುರು ಧರಣಿ ಮಾಡಿರುವಂತಹ ಘಟನೆ ನಡೆದಿದೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…