ವಿದ್ಯಾರ್ಥಿ ನಿಲಯಗಳಲ್ಲಿ ಮನೆಯ ವಾತಾವರಣ ನಿರ್ಮಿಸಿ : ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್

ವಸತಿ ಶಾಲೆ, ವಿದ್ಯಾರ್ಥಿನಿಲಯಗಳಲ್ಲಿ ಮನೆಯ ವಾತಾವರಣ ನಿರ್ಮಿಸಿ, ವಿದ್ಯಾರ್ಥಿಗಳನ್ನು ಮನೆಯವರಂತೆ ಭಾವಿಸಿ ಪೋಷಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಹಾಸ್ಟೆಲ್ ಸಿಬ್ಬಂದಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿನ ವಾರ್ಡನ್, ಅಡುಗೆಯವರು, ಅಡುಗೆ ಸಹಾಯಕರು ಹಾಗೂ ರಾತ್ರಿ ಕಾವಲುಗಾರರಿಗೆ ನಿಲಯದ ಸಮರ್ಪಕ ನಿರ್ವಹಣೆಯಲ್ಲಿ ಸ್ವಚ್ಚತೆ, ಆಹಾರ ಸುರಕ್ಷತೆ, ಶುಚಿ-ರುಚಿಯಾದ ಮತ್ತು ಪೌಷ್ಟಿಕ ಆಹಾರವನ್ನು ನೀಡುವ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಸತಿ ಶಾಲೆಯಲ್ಲಿನ ಯಾವುದೇ ಸಮಸ್ಯೆ ಕಂಡುಬಂದರೆ ಶೀಘ್ರವಾಗಿ ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು. ವಸತಿ ಶಾಲೆಗಳಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿ ಕೊಠಡಿ, ಶೌಚಾಲಯಗಳ ಸ್ವಚ್ಛತೆಗೆ ಕ್ರಮ ವಹಿಸಬೇಕು. ಆಹಾರದ ಗುಣಮಟ್ಟ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಊಟ ನೀಡಬೇಕು. ಮೂಲಭೂತ ಸೌಕರ್ಯಗಳು ಹೆಚ್ಚಿನ ಪ್ರಾಶಸ್ತ್ಯ ನೀಡಿ ಉತ್ತಮ ರೀತಿಯ ಮನೆಯ ವಾತಾವರಣ ನಿರ್ಮಿಸಿ, ಶಿಕ್ಷಣ ಕಲ್ಪಿಸಿ ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ ಅವರು ಮಾತನಾಡಿ, ವಿದ್ಯಾರ್ಥಿ ನಿಲಯಗಳಲ್ಲಿ ಹೆಚ್ಚಿನದಾಗಿ ಪ್ರಚಲಿತ ವಿದ್ಯಮಾನಗಳ ಬಗ್ಗೆ ಹಾಗೂ  ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಬದುಕುವುದನ್ನು ಕಲಿಸಿಕೊಡಬೇಕು. ಅಧಿಕಾರಿಗಳು ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು ವಿದ್ಯಾರ್ಥಿಗಳ ರಕ್ಷಣೆ ಮಾಡಬೇಕು. ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಈ ರೀತಿಯ ಕಾರ್ಯಾಗಾರಗಳು ಅತಿಮುಖ್ಯ ಇದನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ತರಬೇತಿಯಲ್ಲಿ ವಸತಿ ನಿಲಯದ ಸಮರ್ಪಕ ನಿರ್ವಹಣೆಯಲ್ಲಿ ಸ್ವಚ್ಚತೆ, ಆಹಾರ ಸುರಕ್ಷತೆ, ಶುಚಿ-ರುಚಿಯಾದ ಮತ್ತು ಪೌಷ್ಟಿಕ ಆಹಾರವನ್ನು ನೀಡುವ ಕುರಿತು ಸಂಪನ್ಮೂಲ ವ್ಯಕ್ತಿಯಿಂದ ತರಬೇತಿ ನೀಡಲಾಯಿತು.

ಈ ವೇಳೆ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಟಿ‌‌.ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಇ.ಕವಿತಾ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಹಾಸ್ಟೇಲ್ ವಾರ್ಡನ್ ಗಳು, ಹಾಸ್ಟೆಲ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

4 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

4 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

12 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

23 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago