ವಿದ್ಯಾರ್ಥಿ ನಿಲಯಗಳಲ್ಲಿ ಮನೆಯ ವಾತಾವರಣ ನಿರ್ಮಿಸಿ : ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್

ವಸತಿ ಶಾಲೆ, ವಿದ್ಯಾರ್ಥಿನಿಲಯಗಳಲ್ಲಿ ಮನೆಯ ವಾತಾವರಣ ನಿರ್ಮಿಸಿ, ವಿದ್ಯಾರ್ಥಿಗಳನ್ನು ಮನೆಯವರಂತೆ ಭಾವಿಸಿ ಪೋಷಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಹಾಸ್ಟೆಲ್ ಸಿಬ್ಬಂದಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿನ ವಾರ್ಡನ್, ಅಡುಗೆಯವರು, ಅಡುಗೆ ಸಹಾಯಕರು ಹಾಗೂ ರಾತ್ರಿ ಕಾವಲುಗಾರರಿಗೆ ನಿಲಯದ ಸಮರ್ಪಕ ನಿರ್ವಹಣೆಯಲ್ಲಿ ಸ್ವಚ್ಚತೆ, ಆಹಾರ ಸುರಕ್ಷತೆ, ಶುಚಿ-ರುಚಿಯಾದ ಮತ್ತು ಪೌಷ್ಟಿಕ ಆಹಾರವನ್ನು ನೀಡುವ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಸತಿ ಶಾಲೆಯಲ್ಲಿನ ಯಾವುದೇ ಸಮಸ್ಯೆ ಕಂಡುಬಂದರೆ ಶೀಘ್ರವಾಗಿ ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು. ವಸತಿ ಶಾಲೆಗಳಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿ ಕೊಠಡಿ, ಶೌಚಾಲಯಗಳ ಸ್ವಚ್ಛತೆಗೆ ಕ್ರಮ ವಹಿಸಬೇಕು. ಆಹಾರದ ಗುಣಮಟ್ಟ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಊಟ ನೀಡಬೇಕು. ಮೂಲಭೂತ ಸೌಕರ್ಯಗಳು ಹೆಚ್ಚಿನ ಪ್ರಾಶಸ್ತ್ಯ ನೀಡಿ ಉತ್ತಮ ರೀತಿಯ ಮನೆಯ ವಾತಾವರಣ ನಿರ್ಮಿಸಿ, ಶಿಕ್ಷಣ ಕಲ್ಪಿಸಿ ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ ಅವರು ಮಾತನಾಡಿ, ವಿದ್ಯಾರ್ಥಿ ನಿಲಯಗಳಲ್ಲಿ ಹೆಚ್ಚಿನದಾಗಿ ಪ್ರಚಲಿತ ವಿದ್ಯಮಾನಗಳ ಬಗ್ಗೆ ಹಾಗೂ  ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಬದುಕುವುದನ್ನು ಕಲಿಸಿಕೊಡಬೇಕು. ಅಧಿಕಾರಿಗಳು ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು ವಿದ್ಯಾರ್ಥಿಗಳ ರಕ್ಷಣೆ ಮಾಡಬೇಕು. ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಈ ರೀತಿಯ ಕಾರ್ಯಾಗಾರಗಳು ಅತಿಮುಖ್ಯ ಇದನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ತರಬೇತಿಯಲ್ಲಿ ವಸತಿ ನಿಲಯದ ಸಮರ್ಪಕ ನಿರ್ವಹಣೆಯಲ್ಲಿ ಸ್ವಚ್ಚತೆ, ಆಹಾರ ಸುರಕ್ಷತೆ, ಶುಚಿ-ರುಚಿಯಾದ ಮತ್ತು ಪೌಷ್ಟಿಕ ಆಹಾರವನ್ನು ನೀಡುವ ಕುರಿತು ಸಂಪನ್ಮೂಲ ವ್ಯಕ್ತಿಯಿಂದ ತರಬೇತಿ ನೀಡಲಾಯಿತು.

ಈ ವೇಳೆ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಟಿ‌‌.ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಇ.ಕವಿತಾ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಹಾಸ್ಟೇಲ್ ವಾರ್ಡನ್ ಗಳು, ಹಾಸ್ಟೆಲ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

3 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

5 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

5 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

6 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

10 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

11 hours ago