ವಿದ್ಯಾರ್ಥಿ ನಿಲಯಗಳಲ್ಲಿ ಮನೆಯ ವಾತಾವರಣ ನಿರ್ಮಿಸಿ : ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್

ವಸತಿ ಶಾಲೆ, ವಿದ್ಯಾರ್ಥಿನಿಲಯಗಳಲ್ಲಿ ಮನೆಯ ವಾತಾವರಣ ನಿರ್ಮಿಸಿ, ವಿದ್ಯಾರ್ಥಿಗಳನ್ನು ಮನೆಯವರಂತೆ ಭಾವಿಸಿ ಪೋಷಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಹಾಸ್ಟೆಲ್ ಸಿಬ್ಬಂದಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿನ ವಾರ್ಡನ್, ಅಡುಗೆಯವರು, ಅಡುಗೆ ಸಹಾಯಕರು ಹಾಗೂ ರಾತ್ರಿ ಕಾವಲುಗಾರರಿಗೆ ನಿಲಯದ ಸಮರ್ಪಕ ನಿರ್ವಹಣೆಯಲ್ಲಿ ಸ್ವಚ್ಚತೆ, ಆಹಾರ ಸುರಕ್ಷತೆ, ಶುಚಿ-ರುಚಿಯಾದ ಮತ್ತು ಪೌಷ್ಟಿಕ ಆಹಾರವನ್ನು ನೀಡುವ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಸತಿ ಶಾಲೆಯಲ್ಲಿನ ಯಾವುದೇ ಸಮಸ್ಯೆ ಕಂಡುಬಂದರೆ ಶೀಘ್ರವಾಗಿ ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು. ವಸತಿ ಶಾಲೆಗಳಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿ ಕೊಠಡಿ, ಶೌಚಾಲಯಗಳ ಸ್ವಚ್ಛತೆಗೆ ಕ್ರಮ ವಹಿಸಬೇಕು. ಆಹಾರದ ಗುಣಮಟ್ಟ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಊಟ ನೀಡಬೇಕು. ಮೂಲಭೂತ ಸೌಕರ್ಯಗಳು ಹೆಚ್ಚಿನ ಪ್ರಾಶಸ್ತ್ಯ ನೀಡಿ ಉತ್ತಮ ರೀತಿಯ ಮನೆಯ ವಾತಾವರಣ ನಿರ್ಮಿಸಿ, ಶಿಕ್ಷಣ ಕಲ್ಪಿಸಿ ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ ಅವರು ಮಾತನಾಡಿ, ವಿದ್ಯಾರ್ಥಿ ನಿಲಯಗಳಲ್ಲಿ ಹೆಚ್ಚಿನದಾಗಿ ಪ್ರಚಲಿತ ವಿದ್ಯಮಾನಗಳ ಬಗ್ಗೆ ಹಾಗೂ  ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಬದುಕುವುದನ್ನು ಕಲಿಸಿಕೊಡಬೇಕು. ಅಧಿಕಾರಿಗಳು ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು ವಿದ್ಯಾರ್ಥಿಗಳ ರಕ್ಷಣೆ ಮಾಡಬೇಕು. ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಈ ರೀತಿಯ ಕಾರ್ಯಾಗಾರಗಳು ಅತಿಮುಖ್ಯ ಇದನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ತರಬೇತಿಯಲ್ಲಿ ವಸತಿ ನಿಲಯದ ಸಮರ್ಪಕ ನಿರ್ವಹಣೆಯಲ್ಲಿ ಸ್ವಚ್ಚತೆ, ಆಹಾರ ಸುರಕ್ಷತೆ, ಶುಚಿ-ರುಚಿಯಾದ ಮತ್ತು ಪೌಷ್ಟಿಕ ಆಹಾರವನ್ನು ನೀಡುವ ಕುರಿತು ಸಂಪನ್ಮೂಲ ವ್ಯಕ್ತಿಯಿಂದ ತರಬೇತಿ ನೀಡಲಾಯಿತು.

ಈ ವೇಳೆ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಟಿ‌‌.ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಇ.ಕವಿತಾ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಹಾಸ್ಟೇಲ್ ವಾರ್ಡನ್ ಗಳು, ಹಾಸ್ಟೆಲ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

5 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago