ವಸತಿ ಶಾಲೆ, ವಿದ್ಯಾರ್ಥಿನಿಲಯಗಳಲ್ಲಿ ಮನೆಯ ವಾತಾವರಣ ನಿರ್ಮಿಸಿ, ವಿದ್ಯಾರ್ಥಿಗಳನ್ನು ಮನೆಯವರಂತೆ ಭಾವಿಸಿ ಪೋಷಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಹಾಸ್ಟೆಲ್ ಸಿಬ್ಬಂದಿಗೆ ಸೂಚಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿನ ವಾರ್ಡನ್, ಅಡುಗೆಯವರು, ಅಡುಗೆ ಸಹಾಯಕರು ಹಾಗೂ ರಾತ್ರಿ ಕಾವಲುಗಾರರಿಗೆ ನಿಲಯದ ಸಮರ್ಪಕ ನಿರ್ವಹಣೆಯಲ್ಲಿ ಸ್ವಚ್ಚತೆ, ಆಹಾರ ಸುರಕ್ಷತೆ, ಶುಚಿ-ರುಚಿಯಾದ ಮತ್ತು ಪೌಷ್ಟಿಕ ಆಹಾರವನ್ನು ನೀಡುವ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಸತಿ ಶಾಲೆಯಲ್ಲಿನ ಯಾವುದೇ ಸಮಸ್ಯೆ ಕಂಡುಬಂದರೆ ಶೀಘ್ರವಾಗಿ ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು. ವಸತಿ ಶಾಲೆಗಳಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿ ಕೊಠಡಿ, ಶೌಚಾಲಯಗಳ ಸ್ವಚ್ಛತೆಗೆ ಕ್ರಮ ವಹಿಸಬೇಕು. ಆಹಾರದ ಗುಣಮಟ್ಟ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಊಟ ನೀಡಬೇಕು. ಮೂಲಭೂತ ಸೌಕರ್ಯಗಳು ಹೆಚ್ಚಿನ ಪ್ರಾಶಸ್ತ್ಯ ನೀಡಿ ಉತ್ತಮ ರೀತಿಯ ಮನೆಯ ವಾತಾವರಣ ನಿರ್ಮಿಸಿ, ಶಿಕ್ಷಣ ಕಲ್ಪಿಸಿ ಎಂದು ಜಿಲ್ಲಾಧಿಕಾರಿ ಹೇಳಿದರು.
ತರಬೇತಿಯಲ್ಲಿ ವಸತಿ ನಿಲಯದ ಸಮರ್ಪಕ ನಿರ್ವಹಣೆಯಲ್ಲಿ ಸ್ವಚ್ಚತೆ, ಆಹಾರ ಸುರಕ್ಷತೆ, ಶುಚಿ-ರುಚಿಯಾದ ಮತ್ತು ಪೌಷ್ಟಿಕ ಆಹಾರವನ್ನು ನೀಡುವ ಕುರಿತು ಸಂಪನ್ಮೂಲ ವ್ಯಕ್ತಿಯಿಂದ ತರಬೇತಿ ನೀಡಲಾಯಿತು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…