ಸದಾಶಿವನಗರದಲ್ಲಿರುವ ಐಐಎಸ್ ಸಿ ಕ್ಯಾಂಪಸ್ನಲ್ಲಿ ಬಿಗಿ ಭದ್ರತೆ ನಡುವೆಯೂ ಕಳೆದ ಕೆಲ ತಿಂಗಳಿನಿಂದ ನಡೆಯುತ್ತಿದ್ದ ನಿಗೂಢ ಕಳ್ಳತನವನ್ನು ಸೆಕ್ಯೂರಿಟಿ ಪತ್ತೆ ಮಾಡಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಜಿಯಾವುಲ್ಲಾ ಮಲ್ಲಿಕ್ ಎನ್ನುವಾತ ಸೆಕ್ಯೂರಿಟಿ ಗಾರ್ಡ್ ಕೈಗೆ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನ ಯಶವಂತಪುರದಲ್ಲಿ ವಾಸವಿದ್ದ ಆರೋಪಿ ಜಿಯಾವುಲ್ಲಾ ಮಲ್ಲಿಕ್, ರಸ್ತೆಯಲ್ಲಿ ಸಿಕ್ಕ ವಿದ್ಯಾರ್ಥಿಯೊಬ್ಬರ ಐಡಿ ಕಾರ್ಡ್ ಬಳಸಿಕೊಂಡು ಈ ಕೃತ್ಯ ಎಸಗುತ್ತಿದ್ದ. ಈಗ ಕ್ಯಾಂಪಸ್ನಲ್ಲಿ ಪದೇ ಪದೇ ನಡೆಯುತ್ತಿದ್ದ ಕಳ್ಳತನ ಪ್ರಕರಣಗಳಿಗೆ ಫುಲ್ ಸ್ಟಾಪ್ ಬಿದ್ದಿದೆ.
ರಸ್ತೆಯಲ್ಲಿ ಸಿಕ್ಕ ವಿದ್ಯಾರ್ಥಿ ಐಡಿ ಕಾರ್ಡ್ ಬಳಸಿಕೊಂಡು ಐಐಎಸ್ ಸಿ ಹಾಸ್ಟಲ್ನೊಳಗೆ ನುಸುಳುತ್ತಿದ್ದ. ಹಾಸ್ಟೆಲ್ ವಿದ್ಯಾರ್ಥಿಗಳ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡುಕೊಂಡು ಹೋಗುತ್ತಿದ್ದ. ವಿದ್ಯಾರ್ಥಿ ವೇಷದಲ್ಲಿ ಬಂದು ಕಳ್ಳತನ ಮಾಡುತ್ತಿದ್ದ. ಐಐಎಸ್ ಸಿ ಬಾಯ್ಸ್ ಹಾಸ್ಟೆಲ್ ನಲ್ಲಿ ಲ್ಯಾಪ್ ಟಾಪ್, ಕ್ಯಾಮೆರಾ, ನಗದು ಹಣ, 200 ಯುಎಸ್ ಡಾಲರ್, 5 ಯೂರೋ ಸೇರಿ ಹಲವು ವಸ್ತುಗಳ ಕಳ್ಳತನ ಮಾಡಿದ್ದ.
ಎಂಟೆಕ್ ವಿದ್ಯಾರ್ಥಿ ಐಡಿ ಕಾರ್ಡ್ ಬಳಸಿಕೊಂಡು ಐಐಎಸ್ ಸಿ ಆವರಣದಲ್ಲಿ ರಾಜಾರೋಷವಾಗಿ ಓಡಾಡುತ್ತಿದ್ದ ಖತರ್ನಾಕ್ ಕಳ್ಳ. ಈ ವೇಳೆ ಅನುಮಾನ ಬಂದು ಸೆಕ್ಯೂರಿಟಿ ಪ್ರಶ್ನೆ ಮಾಡಿದ್ದಾನೆ. ಆ ವೇಳೆ ಐಡಿ ಕಾರ್ಡ್ ಬಗ್ಗೆ ಪ್ರಶ್ನೆ ಮಾಡುತ್ತಿದ್ದಂತೆ ಜಿಯಾವುಲ್ಲಾ ಮಲ್ಲಿಕ್ ತಬ್ಬಿಬ್ಬಾಗಿದ್ದಾನೆ. ಬಳಿಕ ಸೆಕ್ಯೂರಿಟಿ ಮತ್ತು ಸೂಪರ್ ವೈಸರ್ ಗಳು ವಿಚಾರಿಸಿದಾಗ ಕಳ್ಳತನಕ್ಕೆ ಬಂದಿರುವ ಗೊತ್ತಾಗಿದೆ. ಬಳಿಕ ಐಐಎಸ್ ಸಿ ಅಧಿಕಾರಿಗಳು ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿ ಜಿಯಾವುಲ್ಲಾ ಮಲ್ಲಿಕ್ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…