ಸದಾಶಿವನಗರದಲ್ಲಿರುವ ಐಐಎಸ್ ಸಿ ಕ್ಯಾಂಪಸ್ನಲ್ಲಿ ಬಿಗಿ ಭದ್ರತೆ ನಡುವೆಯೂ ಕಳೆದ ಕೆಲ ತಿಂಗಳಿನಿಂದ ನಡೆಯುತ್ತಿದ್ದ ನಿಗೂಢ ಕಳ್ಳತನವನ್ನು ಸೆಕ್ಯೂರಿಟಿ ಪತ್ತೆ ಮಾಡಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಜಿಯಾವುಲ್ಲಾ ಮಲ್ಲಿಕ್ ಎನ್ನುವಾತ ಸೆಕ್ಯೂರಿಟಿ ಗಾರ್ಡ್ ಕೈಗೆ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನ ಯಶವಂತಪುರದಲ್ಲಿ ವಾಸವಿದ್ದ ಆರೋಪಿ ಜಿಯಾವುಲ್ಲಾ ಮಲ್ಲಿಕ್, ರಸ್ತೆಯಲ್ಲಿ ಸಿಕ್ಕ ವಿದ್ಯಾರ್ಥಿಯೊಬ್ಬರ ಐಡಿ ಕಾರ್ಡ್ ಬಳಸಿಕೊಂಡು ಈ ಕೃತ್ಯ ಎಸಗುತ್ತಿದ್ದ. ಈಗ ಕ್ಯಾಂಪಸ್ನಲ್ಲಿ ಪದೇ ಪದೇ ನಡೆಯುತ್ತಿದ್ದ ಕಳ್ಳತನ ಪ್ರಕರಣಗಳಿಗೆ ಫುಲ್ ಸ್ಟಾಪ್ ಬಿದ್ದಿದೆ.
ರಸ್ತೆಯಲ್ಲಿ ಸಿಕ್ಕ ವಿದ್ಯಾರ್ಥಿ ಐಡಿ ಕಾರ್ಡ್ ಬಳಸಿಕೊಂಡು ಐಐಎಸ್ ಸಿ ಹಾಸ್ಟಲ್ನೊಳಗೆ ನುಸುಳುತ್ತಿದ್ದ. ಹಾಸ್ಟೆಲ್ ವಿದ್ಯಾರ್ಥಿಗಳ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡುಕೊಂಡು ಹೋಗುತ್ತಿದ್ದ. ವಿದ್ಯಾರ್ಥಿ ವೇಷದಲ್ಲಿ ಬಂದು ಕಳ್ಳತನ ಮಾಡುತ್ತಿದ್ದ. ಐಐಎಸ್ ಸಿ ಬಾಯ್ಸ್ ಹಾಸ್ಟೆಲ್ ನಲ್ಲಿ ಲ್ಯಾಪ್ ಟಾಪ್, ಕ್ಯಾಮೆರಾ, ನಗದು ಹಣ, 200 ಯುಎಸ್ ಡಾಲರ್, 5 ಯೂರೋ ಸೇರಿ ಹಲವು ವಸ್ತುಗಳ ಕಳ್ಳತನ ಮಾಡಿದ್ದ.
ಎಂಟೆಕ್ ವಿದ್ಯಾರ್ಥಿ ಐಡಿ ಕಾರ್ಡ್ ಬಳಸಿಕೊಂಡು ಐಐಎಸ್ ಸಿ ಆವರಣದಲ್ಲಿ ರಾಜಾರೋಷವಾಗಿ ಓಡಾಡುತ್ತಿದ್ದ ಖತರ್ನಾಕ್ ಕಳ್ಳ. ಈ ವೇಳೆ ಅನುಮಾನ ಬಂದು ಸೆಕ್ಯೂರಿಟಿ ಪ್ರಶ್ನೆ ಮಾಡಿದ್ದಾನೆ. ಆ ವೇಳೆ ಐಡಿ ಕಾರ್ಡ್ ಬಗ್ಗೆ ಪ್ರಶ್ನೆ ಮಾಡುತ್ತಿದ್ದಂತೆ ಜಿಯಾವುಲ್ಲಾ ಮಲ್ಲಿಕ್ ತಬ್ಬಿಬ್ಬಾಗಿದ್ದಾನೆ. ಬಳಿಕ ಸೆಕ್ಯೂರಿಟಿ ಮತ್ತು ಸೂಪರ್ ವೈಸರ್ ಗಳು ವಿಚಾರಿಸಿದಾಗ ಕಳ್ಳತನಕ್ಕೆ ಬಂದಿರುವ ಗೊತ್ತಾಗಿದೆ. ಬಳಿಕ ಐಐಎಸ್ ಸಿ ಅಧಿಕಾರಿಗಳು ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿ ಜಿಯಾವುಲ್ಲಾ ಮಲ್ಲಿಕ್ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…