ವಿದ್ಯಾರ್ಥಿ ವೇಷದಲ್ಲಿ ಬಂದು ಕಳ್ಳತನ ಮಾಡುವಾಗ ಸಿಕ್ಕಿಬಿದ್ದ ಖತರ್ನಾಕ್ ಕಳ್ಳ: ರೋಡ್ ಅಲ್ಲಿ ಸಿಕ್ಕ ಐಡಿ ಕಾರ್ಡ್ ಬಳಸಿ ಕ್ಯಾಂಪಸ್ ಗೆ ಎಂಟ್ರಿ: ವಿದ್ಯಾರ್ಥಿಗಳ ಬೆಲೆ ಬಾಳುವ ವಸ್ತುಗಳ ಎಸ್ಕೇಪ್

ಸದಾಶಿವನಗರದಲ್ಲಿರುವ ಐಐಎಸ್ ಸಿ ಕ್ಯಾಂಪಸ್​ನಲ್ಲಿ ಬಿಗಿ ಭದ್ರತೆ ನಡುವೆಯೂ ಕಳೆದ ಕೆಲ ತಿಂಗಳಿನಿಂದ ನಡೆಯುತ್ತಿದ್ದ ನಿಗೂಢ ಕಳ್ಳತನವನ್ನು ಸೆಕ್ಯೂರಿಟಿ ಪತ್ತೆ ಮಾಡಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಜಿಯಾವುಲ್ಲಾ ಮಲ್ಲಿಕ್ ಎನ್ನುವಾತ ಸೆಕ್ಯೂರಿಟಿ ಗಾರ್ಡ್ ಕೈಗೆ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನ ಯಶವಂತಪುರದಲ್ಲಿ ವಾಸವಿದ್ದ ಆರೋಪಿ ಜಿಯಾವುಲ್ಲಾ ಮಲ್ಲಿಕ್, ರಸ್ತೆಯಲ್ಲಿ ಸಿಕ್ಕ ವಿದ್ಯಾರ್ಥಿಯೊಬ್ಬರ ಐಡಿ ಕಾರ್ಡ್ ಬಳಸಿಕೊಂಡು ಈ ಕೃತ್ಯ ಎಸಗುತ್ತಿದ್ದ. ಈಗ ಕ್ಯಾಂಪಸ್​ನಲ್ಲಿ ಪದೇ ಪದೇ ನಡೆಯುತ್ತಿದ್ದ ಕಳ್ಳತನ ಪ್ರಕರಣಗಳಿಗೆ ಫುಲ್ ಸ್ಟಾಪ್ ಬಿದ್ದಿದೆ.

ರಸ್ತೆಯಲ್ಲಿ ಸಿಕ್ಕ ವಿದ್ಯಾರ್ಥಿ ಐಡಿ ಕಾರ್ಡ್ ಬಳಸಿಕೊಂಡು ಐಐಎಸ್ ಸಿ ಹಾಸ್ಟಲ್​ನೊಳಗೆ ನುಸುಳುತ್ತಿದ್ದ. ಹಾಸ್ಟೆಲ್ ವಿದ್ಯಾರ್ಥಿಗಳ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡುಕೊಂಡು ಹೋಗುತ್ತಿದ್ದ. ವಿದ್ಯಾರ್ಥಿ ವೇಷದಲ್ಲಿ ಬಂದು ಕಳ್ಳತನ ಮಾಡುತ್ತಿದ್ದ. ಐಐಎಸ್ ಸಿ ಬಾಯ್ಸ್ ಹಾಸ್ಟೆಲ್ ನಲ್ಲಿ ಲ್ಯಾಪ್ ಟಾಪ್, ಕ್ಯಾಮೆರಾ, ನಗದು ಹಣ, 200 ಯುಎಸ್ ಡಾಲರ್, 5 ಯೂರೋ ಸೇರಿ ಹಲವು ವಸ್ತುಗಳ ಕಳ್ಳತನ ಮಾಡಿದ್ದ.

ಎಂಟೆಕ್ ವಿದ್ಯಾರ್ಥಿ ಐಡಿ ಕಾರ್ಡ್ ಬಳಸಿಕೊಂಡು ಐಐಎಸ್ ಸಿ ಆವರಣದಲ್ಲಿ ರಾಜಾರೋಷವಾಗಿ ಓಡಾಡುತ್ತಿದ್ದ ಖತರ್ನಾಕ್ ಕಳ್ಳ. ಈ ವೇಳೆ ಅನುಮಾನ ಬಂದು ಸೆಕ್ಯೂರಿಟಿ ಪ್ರಶ್ನೆ ಮಾಡಿದ್ದಾನೆ. ಆ ವೇಳೆ ಐಡಿ ಕಾರ್ಡ್ ಬಗ್ಗೆ ಪ್ರಶ್ನೆ ಮಾಡುತ್ತಿದ್ದಂತೆ ಜಿಯಾವುಲ್ಲಾ ಮಲ್ಲಿಕ್ ತಬ್ಬಿಬ್ಬಾಗಿದ್ದಾನೆ. ಬಳಿಕ ಸೆಕ್ಯೂರಿಟಿ ಮತ್ತು ಸೂಪರ್ ವೈಸರ್ ಗಳು ವಿಚಾರಿಸಿದಾಗ ಕಳ್ಳತನಕ್ಕೆ ಬಂದಿರುವ ಗೊತ್ತಾಗಿದೆ. ಬಳಿಕ ಐಐಎಸ್ ಸಿ ಅಧಿಕಾರಿಗಳು ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿ ಜಿಯಾವುಲ್ಲಾ ಮಲ್ಲಿಕ್​ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Ramesh Babu

Journalist

Recent Posts

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

2 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

16 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

17 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

17 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

18 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

21 hours ago