ವಿದ್ಯಾರ್ಥಿ ವೇಷದಲ್ಲಿ ಬಂದು ಕಳ್ಳತನ ಮಾಡುವಾಗ ಸಿಕ್ಕಿಬಿದ್ದ ಖತರ್ನಾಕ್ ಕಳ್ಳ: ರೋಡ್ ಅಲ್ಲಿ ಸಿಕ್ಕ ಐಡಿ ಕಾರ್ಡ್ ಬಳಸಿ ಕ್ಯಾಂಪಸ್ ಗೆ ಎಂಟ್ರಿ: ವಿದ್ಯಾರ್ಥಿಗಳ ಬೆಲೆ ಬಾಳುವ ವಸ್ತುಗಳ ಎಸ್ಕೇಪ್

ಸದಾಶಿವನಗರದಲ್ಲಿರುವ ಐಐಎಸ್ ಸಿ ಕ್ಯಾಂಪಸ್​ನಲ್ಲಿ ಬಿಗಿ ಭದ್ರತೆ ನಡುವೆಯೂ ಕಳೆದ ಕೆಲ ತಿಂಗಳಿನಿಂದ ನಡೆಯುತ್ತಿದ್ದ ನಿಗೂಢ ಕಳ್ಳತನವನ್ನು ಸೆಕ್ಯೂರಿಟಿ ಪತ್ತೆ ಮಾಡಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಜಿಯಾವುಲ್ಲಾ ಮಲ್ಲಿಕ್ ಎನ್ನುವಾತ ಸೆಕ್ಯೂರಿಟಿ ಗಾರ್ಡ್ ಕೈಗೆ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನ ಯಶವಂತಪುರದಲ್ಲಿ ವಾಸವಿದ್ದ ಆರೋಪಿ ಜಿಯಾವುಲ್ಲಾ ಮಲ್ಲಿಕ್, ರಸ್ತೆಯಲ್ಲಿ ಸಿಕ್ಕ ವಿದ್ಯಾರ್ಥಿಯೊಬ್ಬರ ಐಡಿ ಕಾರ್ಡ್ ಬಳಸಿಕೊಂಡು ಈ ಕೃತ್ಯ ಎಸಗುತ್ತಿದ್ದ. ಈಗ ಕ್ಯಾಂಪಸ್​ನಲ್ಲಿ ಪದೇ ಪದೇ ನಡೆಯುತ್ತಿದ್ದ ಕಳ್ಳತನ ಪ್ರಕರಣಗಳಿಗೆ ಫುಲ್ ಸ್ಟಾಪ್ ಬಿದ್ದಿದೆ.

ರಸ್ತೆಯಲ್ಲಿ ಸಿಕ್ಕ ವಿದ್ಯಾರ್ಥಿ ಐಡಿ ಕಾರ್ಡ್ ಬಳಸಿಕೊಂಡು ಐಐಎಸ್ ಸಿ ಹಾಸ್ಟಲ್​ನೊಳಗೆ ನುಸುಳುತ್ತಿದ್ದ. ಹಾಸ್ಟೆಲ್ ವಿದ್ಯಾರ್ಥಿಗಳ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡುಕೊಂಡು ಹೋಗುತ್ತಿದ್ದ. ವಿದ್ಯಾರ್ಥಿ ವೇಷದಲ್ಲಿ ಬಂದು ಕಳ್ಳತನ ಮಾಡುತ್ತಿದ್ದ. ಐಐಎಸ್ ಸಿ ಬಾಯ್ಸ್ ಹಾಸ್ಟೆಲ್ ನಲ್ಲಿ ಲ್ಯಾಪ್ ಟಾಪ್, ಕ್ಯಾಮೆರಾ, ನಗದು ಹಣ, 200 ಯುಎಸ್ ಡಾಲರ್, 5 ಯೂರೋ ಸೇರಿ ಹಲವು ವಸ್ತುಗಳ ಕಳ್ಳತನ ಮಾಡಿದ್ದ.

ಎಂಟೆಕ್ ವಿದ್ಯಾರ್ಥಿ ಐಡಿ ಕಾರ್ಡ್ ಬಳಸಿಕೊಂಡು ಐಐಎಸ್ ಸಿ ಆವರಣದಲ್ಲಿ ರಾಜಾರೋಷವಾಗಿ ಓಡಾಡುತ್ತಿದ್ದ ಖತರ್ನಾಕ್ ಕಳ್ಳ. ಈ ವೇಳೆ ಅನುಮಾನ ಬಂದು ಸೆಕ್ಯೂರಿಟಿ ಪ್ರಶ್ನೆ ಮಾಡಿದ್ದಾನೆ. ಆ ವೇಳೆ ಐಡಿ ಕಾರ್ಡ್ ಬಗ್ಗೆ ಪ್ರಶ್ನೆ ಮಾಡುತ್ತಿದ್ದಂತೆ ಜಿಯಾವುಲ್ಲಾ ಮಲ್ಲಿಕ್ ತಬ್ಬಿಬ್ಬಾಗಿದ್ದಾನೆ. ಬಳಿಕ ಸೆಕ್ಯೂರಿಟಿ ಮತ್ತು ಸೂಪರ್ ವೈಸರ್ ಗಳು ವಿಚಾರಿಸಿದಾಗ ಕಳ್ಳತನಕ್ಕೆ ಬಂದಿರುವ ಗೊತ್ತಾಗಿದೆ. ಬಳಿಕ ಐಐಎಸ್ ಸಿ ಅಧಿಕಾರಿಗಳು ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿ ಜಿಯಾವುಲ್ಲಾ ಮಲ್ಲಿಕ್​ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

4 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

6 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago